Advertisement
ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತು ಪೌಳಿ ನವೀಕರಣ: ಹಿತ್ತಾಳೆಯ ದೀಪದಳಿ, ತಾಮ್ರದ ಛಾವಣಿ ನಿರ್ಮಾಣ

Share

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತು ಪೌಳಿಯನ್ನು ರೂ.14 ಕೋಟಿ ವೆಚ್ಚದಲ್ಲಿ ನವೀಕರಣಗೊಳ್ಳಲಿದೆ. ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಈ ಹಿಂದಿನಂತೆ ಸುತ್ತುಪೌಳಿಯು ನೂತನವಾಗಿ ನಿರ್ಮಾಣಗೊಳ್ಳಲಿದೆ.

Advertisement

ಕುಕ್ಕೆ ದೇವಳದ ನಿಧಿಯ ರೂ.14ಕೋಟಿ ವೆಚ್ಚದಲ್ಲಿ ಸುತ್ತುಪೌಳಿ ರಚಿತವಾಗಲಿದ್ದು  ಸುತ್ತುಪೌಳಿ, ಗರುಡ ಮಂಟಪ, ಪಲ್ಲ ಮಂಟಪ, ಗೋಡೆ, ಪಂಚಾಂಗ ಇತ್ಯಾದಿಗಳನ್ನು ನೂತನವಾಗಿ ರಚನೆ ಮಾಡಲಾಗುವುದು. ಕ್ಷೇತ್ರ ಸಂಪ್ರದಾಯ, ನಿಯಮ, ಧಾರ್ಮಿಕ ವಿಧಿ ವಿಧಾನಗಳಿಗೆ ತೊಂದರೆಯಾಗದಂತೆ ಶ್ರೀ ದೇವಳದ ಪ್ರಧಾನ ಅರ್ಚಕರು ಮತ್ತು ವಾಸ್ತುಶಿಲ್ಪಿಗಳು, ಆಗಮ ಪಂಡಿತರು ಸಲಹೆ ಮೇರೆಗೆ ಕಾಮಗಾರಿ ಆರಂಭಿಸಲಾಗುವುದು. ಶಿಲ್ಪಿ ದಿನೇಶ್ ಆಚಾರ್ಯ ಅವರು ತಯಾರಿಸಿದ ಅಂದಾಜು ಪಟ್ಟಿ ಪ್ರಕಾರ ನೀಲನಕ್ಷೆ ಪ್ರಕಾರವಾಗಿ ಕಾಮಗಾರಿ ನೆರವೇರಲಿದೆ.

ಹಿತ್ತಾಳೆಯ ದೀಪದಳಿ:
ಸುತ್ತುಪೌಳಿ, ಗರುಡ ಮಂಟಪ, ಪಲ್ಲ ಮಂಟಪ, ಗೋಡೆ, ಪಂಚಾಂಗ ಇತ್ಯಾದಿಗಳನ್ನು ಕನ್ಯಾಕುಮಾರಿಯ ಕಪ್ಪು ಕಲ್ಲಿನಿಂದ ನಿರ್ಮಾಣ ಮಾಡಲಾಗುವುದು.ಸುತ್ತು ಪೌಳಿಯ ಸುತ್ತಲೂ ಮರದ ಕೆತ್ತನೆಗಳ ವಿಶೇಷ ಅಲಂಕಾರ ಮಾಡಲಾಗುವುದು. ಸುತ್ತಲೂ ದೀಪದಳಿಯನ್ನು ತೇಗದ ಮರದಿಂದ ನಿರ್ಮಿಸಲಾಗುವುದು.ಈ ದೀಪ ದಳಿಗಳು ವಿಶೇಷ ಕಲಾಕೆತ್ತನೆಗಳಿಂದ ಕೂಡಿರುತ್ತದೆ.ಇದಕ್ಕೆ ಹಿತ್ತಾಳೆಯ ಹೊದಿಕೆ ಇರುತ್ತದೆ. ದೀಪದಳಿಯಲ್ಲಿ ಶ್ರೀ ದೇವರ ಉತ್ಸವದ ಸಂದರ್ಭ ಹಣತೆಗಳನ್ನು ಉರಿಸಲು ಬೇಕಾದ ಸೂಕ್ತ ವ್ಯವಸ್ಥೆ ಮಾಡಲಾಗುವುದು.ಎಣ್ಣೆ ಇತ್ಯಾದಿಗಳು ಹೊರಗಡೆ ಚೆಲ್ಲದಂತೆ ಆಧುನಿಕ ತಂತ್ರಜ್ಞಾನದ ಮೂಲಕ ಸೂಕ್ತ ವ್ಯವಸ್ಥೆಯನ್ನು ಮಾಡಲಾಗುವುದು.

ತಾಮ್ರದ ಹೊದಿಕೆಯ ಛಾವಣಿ:

ಸುತ್ತು ಪೌಳಿಯ ಸುತ್ತಲೂ ಸಾಗುವಾನಿ ಮರವನ್ನು ಉಪಯೋಗಿಸಿಕೊಂಡು ಛಾವಣೆ ನಿರ್ಮಿಸಲಾಗುವುದು.ಇದರ ಸುತ್ತಲೂ 22 ಗೇಜಿನ ತಾಮ್ರದ ಹಾಳೆಗಳನ್ನು ಅಳವಡಿಸಲಾಗುವುದು.ಇದರಲ್ಲಿ ಕೂಡಾ ಆರ್ಷಕ ಕೆತ್ತನೆಗಳನ್ನು ಮಾಡಲಾಗುತ್ತಿದೆ. ಒಟ್ಟು 1167 ಚದರ ಮೀಟರ್ ತಾಮ್ರದ ತಗಡನ್ನು ಉಪಯೋಗಿಸಿಕೊಂಡು ಸುತ್ತುಪೌಳಿಯ ಛಾವಣಿಯನ್ನು ಆಕರ್ಷಕವಾಗಿ ನಿರ್ಮಿಸಲಾಗುವುದು. ಸುತ್ತುಪೌಳಿಗೆ ಎಲ್‍ಇಡಿ ಲೈಟ್‍ಗಳನ್ನು ಅಲ್ಲಲ್ಲಿ ಇರಲಿದೆ. ಕಾಮಗಾರಿಯ ಸಮಯದಲ್ಲಿ ಭಕ್ತರಿಗೆ ಶ್ರೀ ದೇವರ ದರುಶನಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತವಾದ ಬ್ಯಾರಿಕೇಡ್ ಇತ್ಯಾದಿಗಳನ್ನು ತಾತ್ಕಾಲಿಕವಾಗಿ ರಚನೆ ಮಾಡಲಾಗುವುದು.

 

“ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತು ಪೌಳಿಯನ್ನು ರೂ.14 ಕೋಟಿ ವೆಚ್ಚದಲ್ಲಿ ನವೀಕರಿಸಲಾಗುವುದು.ಸಂಪ್ರದಾಯದ ಪ್ರಕಾರ ಈ ಹಿಂದಿನಂತೆ ಸುತ್ತುಪೌಳಿಯು ನೂತನವಾಗಿ ನಿರ್ಮಾಣಗೊಳ್ಳಲಿದೆ. ಕುಕ್ಕೆ ದೇವಳದ ನಿಧಿಯನ್ನು ಉಪಯೋಗಿಸಿಕೊಂಡು ರೂ.14ಕೋಟಿ ವೆಚ್ಚದಲ್ಲಿ ಸುತ್ತುಪೌಳಿ ನಿರ್ಮಾಣಗೊಳ್ಳಲಿದೆ. ಸುತ್ತುಪೌಳಿ, ಗರುಡ ಮಂಟಪ, ಪಲ್ಲ ಮಂಟಪ, ಗೋಡೆ, ಪಂಚಾಂಗ ಇತ್ಯಾದಿಗಳನ್ನು ನೂತನವಾಗಿ ರಚನೆ ಮಾಡಲಾಗುವುದು. ಕಾಮಗಾರಿಯ ಸಮಯದಲ್ಲಿ ಭಕ್ತರಿಗೆ ಶ್ರೀ ದೇವರ ದರುಶನಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತವಾದ ಬ್ಯಾರಿಕೇಡ್ ಇತ್ಯಾದಿಗಳನ್ನು ತಾತ್ಕಾಲಿಕವಾಗಿ ರಚನೆ ಮಾಡಲಾಗುವುದು”  ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

1 hour ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

1 hour ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

18 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

18 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

18 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

18 hours ago