ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬರಲಿದೆ ವಸ್ತ್ರ ಸಂಹಿತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ  ವಸ್ತ್ರ ಸಂಹಿತೆ ಜಾರಿಯಾಗಲಿದೆ. ಹಿಂದೂ ದೇವಸ್ಥಾನಗಳಿಗೆ ಪ್ರವೇಶ ಮಾಡಲು ಕೇರಳ ಮಾದರಿಯಲ್ಲಿ ಕರ್ನಾಟಕದ ದೇವಸ್ಥಾನಗಳಲ್ಲೂ ವಸ್ತ್ರಸಂಹಿತೆ ಜಾರಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ.

Advertisement
Advertisement

ಕೇರಳದಲ್ಲಿ  ಎಡಪಂಥೀಯ ಸರಕಾರಗಳು ಇದ್ದರೂ ಹಿಂದೂ ನಂಬಿಕೆ ಹಾಗೂ ಆಚರಣೆಗಳಿಗೆ ಯಾವುದೇ ಚ್ಯುತಿ ಬಾರದಂತೆ ಎಚ್ಚರಿಕೆ ವಹಿಸಲಾಗುತ್ತದೆ. ಅದರಲ್ಲೂ ದೇವಸ್ಥಾನದ ಆಚಾರ-ವಿಚಾರಗಳ ಪಾಲನೆ ಮಾಡಲಾಗುತ್ತಿದೆ. ಹೀಗಾಗಿ ಕೇರಳದಲ್ಲಿ  ದೇವಸ್ಥಾನ ಪ್ರವೇಶ ಮಾಡಲು ಹಿಂದೂ ಸಂಪ್ರದಾಯದಂತೆ ಪುರುಷರು ಪಂಚೆ, ಶಲ್ಯ ತೊಟ್ಟಿರಬೇಕು, ಮಹಿಳೆಯರು ಹಾಗೂ ಯುವತಿಯರು ಸೀರೆ ಅಥವಾ ಪ್ಯಾಂಟ್, ಟೀಶರ್ಟ್ ರಹಿತವಾದ  ಬಟ್ಟೆ ತೊಟ್ಟು ಪ್ರವೇಶ ಮಾಡಬೇಕಾಗುತ್ತದೆ.  ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಮುಜರಾಯಿ ಇಲಾಖೆಯ ಆದೀನತೆಯಲ್ಲಿನ ದೇವಳಗಳಲ್ಲಿ ಕೂಡಾ ವಸ್ತ್ರು ಸಂಹಿತೆ ಜಾರಿಗೆ ತರಲು ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಧಾರ್ಮಿಕ ಮುಖಂಡರ ಜೊತೆ ಈಗ ಮಾತುಕತೆ ನಡೆಯುತ್ತಿದೆ. ಹೇಗೆ ಜಾರಿ ಮಾಡಬಹುದು ಎಂಬುದರ ಬಗ್ಗೆ ಮಾತುಕತೆ ಆರಂಭವಾಗಿದೆ.

ಕಳೆದ ವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಬಗ್ಗೆ ಪ್ರತಿಕ್ರಿಯೆ ನೀಡಿ  ರಾಜ್ಯ ಮುಜರಾಯಿ ಇಲಾಖೆಯ ಆದೀನತೆಯಲ್ಲಿನ ದೇವಳಗಳಲ್ಲಿ ವಸ್ತ್ರ ಸಂಹಿತೆ ಅಳವಡಿಸುವ ಬಗ್ಗೆ ಅನೇಕ ಸಂಘಟನೆಗಳ ಕಾರ್ಯಕರ್ತರು ಮನವಿ ನೀಡುತ್ತಿದ್ದಾರೆ.ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವುದರ ಬಗ್ಗೆ ಜಿಜ್ಞಾಸೆ ಇದೆ.ದೇವಳಗಳ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ವಸ್ತ್ರ ಸಂಹಿತೆ ಜಾರಿ ತರುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಯಾವ ರೀತಿ ವಸ್ತ್ರ ಸಂಹಿತೆ ಮಾಡಬಹುದು.ಈ ಬಗ್ಗೆ ಅನೇಕರ ಅಭಿಪ್ರಾಯ ತೆಗೆದುಕೊಳ್ಳಬೇಕಾದ ಆವಶ್ಯಕತೆ ಇದೆ.ಇದನ್ನು ಯಾರ ಮೇಲೂ ಹೇರುವ ಭಾವನೆ ಇಲ್ಲ. ಸರ್ವರ ಅಭಿಪ್ರಾಯವನ್ನು ತೆಗೆದುಕೊಂಡು ಕ್ರಮ ಕೈಗೊಳ್ಳಲಾಗುವುದು.ಭಕ್ತರ ಮೇಲೆ ವಸ್ತ್ರ ಸಂಹಿತೆಯ ಪರಿಣಾಮಗಳೇನು.ಯಾವ ವಸ್ತ್ರ ವಿನ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಮತ್ತು ದೇವಳದ ಧಾರ್ಮಿಕ ವಿಚಾರಗಳನ್ನು ಸಮಗ್ರವಾಗಿ ಪರಿಶೀಲಿಸಿ, ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದು ಪ್ರತಿಕ್ರಿಯೆ ನೀಡಿದ್ದರು.

 

 

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

3 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

15 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

1 day ago