Advertisement
ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬರಲಿದೆ ವಸ್ತ್ರ ಸಂಹಿತೆ

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ  ವಸ್ತ್ರ ಸಂಹಿತೆ ಜಾರಿಯಾಗಲಿದೆ. ಹಿಂದೂ ದೇವಸ್ಥಾನಗಳಿಗೆ ಪ್ರವೇಶ ಮಾಡಲು ಕೇರಳ ಮಾದರಿಯಲ್ಲಿ ಕರ್ನಾಟಕದ ದೇವಸ್ಥಾನಗಳಲ್ಲೂ ವಸ್ತ್ರಸಂಹಿತೆ ಜಾರಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಕೇರಳದಲ್ಲಿ  ಎಡಪಂಥೀಯ ಸರಕಾರಗಳು ಇದ್ದರೂ ಹಿಂದೂ ನಂಬಿಕೆ ಹಾಗೂ ಆಚರಣೆಗಳಿಗೆ ಯಾವುದೇ ಚ್ಯುತಿ ಬಾರದಂತೆ ಎಚ್ಚರಿಕೆ ವಹಿಸಲಾಗುತ್ತದೆ. ಅದರಲ್ಲೂ ದೇವಸ್ಥಾನದ ಆಚಾರ-ವಿಚಾರಗಳ ಪಾಲನೆ ಮಾಡಲಾಗುತ್ತಿದೆ. ಹೀಗಾಗಿ ಕೇರಳದಲ್ಲಿ  ದೇವಸ್ಥಾನ ಪ್ರವೇಶ ಮಾಡಲು ಹಿಂದೂ ಸಂಪ್ರದಾಯದಂತೆ ಪುರುಷರು ಪಂಚೆ, ಶಲ್ಯ ತೊಟ್ಟಿರಬೇಕು, ಮಹಿಳೆಯರು ಹಾಗೂ ಯುವತಿಯರು ಸೀರೆ ಅಥವಾ ಪ್ಯಾಂಟ್, ಟೀಶರ್ಟ್ ರಹಿತವಾದ  ಬಟ್ಟೆ ತೊಟ್ಟು ಪ್ರವೇಶ ಮಾಡಬೇಕಾಗುತ್ತದೆ.  ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಮುಜರಾಯಿ ಇಲಾಖೆಯ ಆದೀನತೆಯಲ್ಲಿನ ದೇವಳಗಳಲ್ಲಿ ಕೂಡಾ ವಸ್ತ್ರು ಸಂಹಿತೆ ಜಾರಿಗೆ ತರಲು ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಧಾರ್ಮಿಕ ಮುಖಂಡರ ಜೊತೆ ಈಗ ಮಾತುಕತೆ ನಡೆಯುತ್ತಿದೆ. ಹೇಗೆ ಜಾರಿ ಮಾಡಬಹುದು ಎಂಬುದರ ಬಗ್ಗೆ ಮಾತುಕತೆ ಆರಂಭವಾಗಿದೆ.

ಕಳೆದ ವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಬಗ್ಗೆ ಪ್ರತಿಕ್ರಿಯೆ ನೀಡಿ  ರಾಜ್ಯ ಮುಜರಾಯಿ ಇಲಾಖೆಯ ಆದೀನತೆಯಲ್ಲಿನ ದೇವಳಗಳಲ್ಲಿ ವಸ್ತ್ರ ಸಂಹಿತೆ ಅಳವಡಿಸುವ ಬಗ್ಗೆ ಅನೇಕ ಸಂಘಟನೆಗಳ ಕಾರ್ಯಕರ್ತರು ಮನವಿ ನೀಡುತ್ತಿದ್ದಾರೆ.ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವುದರ ಬಗ್ಗೆ ಜಿಜ್ಞಾಸೆ ಇದೆ.ದೇವಳಗಳ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ವಸ್ತ್ರ ಸಂಹಿತೆ ಜಾರಿ ತರುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಯಾವ ರೀತಿ ವಸ್ತ್ರ ಸಂಹಿತೆ ಮಾಡಬಹುದು.ಈ ಬಗ್ಗೆ ಅನೇಕರ ಅಭಿಪ್ರಾಯ ತೆಗೆದುಕೊಳ್ಳಬೇಕಾದ ಆವಶ್ಯಕತೆ ಇದೆ.ಇದನ್ನು ಯಾರ ಮೇಲೂ ಹೇರುವ ಭಾವನೆ ಇಲ್ಲ. ಸರ್ವರ ಅಭಿಪ್ರಾಯವನ್ನು ತೆಗೆದುಕೊಂಡು ಕ್ರಮ ಕೈಗೊಳ್ಳಲಾಗುವುದು.ಭಕ್ತರ ಮೇಲೆ ವಸ್ತ್ರ ಸಂಹಿತೆಯ ಪರಿಣಾಮಗಳೇನು.ಯಾವ ವಸ್ತ್ರ ವಿನ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಮತ್ತು ದೇವಳದ ಧಾರ್ಮಿಕ ವಿಚಾರಗಳನ್ನು ಸಮಗ್ರವಾಗಿ ಪರಿಶೀಲಿಸಿ, ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದು ಪ್ರತಿಕ್ರಿಯೆ ನೀಡಿದ್ದರು.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago