Advertisement
ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬರಲಿದೆ ವಸ್ತ್ರ ಸಂಹಿತೆ

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ  ವಸ್ತ್ರ ಸಂಹಿತೆ ಜಾರಿಯಾಗಲಿದೆ. ಹಿಂದೂ ದೇವಸ್ಥಾನಗಳಿಗೆ ಪ್ರವೇಶ ಮಾಡಲು ಕೇರಳ ಮಾದರಿಯಲ್ಲಿ ಕರ್ನಾಟಕದ ದೇವಸ್ಥಾನಗಳಲ್ಲೂ ವಸ್ತ್ರಸಂಹಿತೆ ಜಾರಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಕೇರಳದಲ್ಲಿ  ಎಡಪಂಥೀಯ ಸರಕಾರಗಳು ಇದ್ದರೂ ಹಿಂದೂ ನಂಬಿಕೆ ಹಾಗೂ ಆಚರಣೆಗಳಿಗೆ ಯಾವುದೇ ಚ್ಯುತಿ ಬಾರದಂತೆ ಎಚ್ಚರಿಕೆ ವಹಿಸಲಾಗುತ್ತದೆ. ಅದರಲ್ಲೂ ದೇವಸ್ಥಾನದ ಆಚಾರ-ವಿಚಾರಗಳ ಪಾಲನೆ ಮಾಡಲಾಗುತ್ತಿದೆ. ಹೀಗಾಗಿ ಕೇರಳದಲ್ಲಿ  ದೇವಸ್ಥಾನ ಪ್ರವೇಶ ಮಾಡಲು ಹಿಂದೂ ಸಂಪ್ರದಾಯದಂತೆ ಪುರುಷರು ಪಂಚೆ, ಶಲ್ಯ ತೊಟ್ಟಿರಬೇಕು, ಮಹಿಳೆಯರು ಹಾಗೂ ಯುವತಿಯರು ಸೀರೆ ಅಥವಾ ಪ್ಯಾಂಟ್, ಟೀಶರ್ಟ್ ರಹಿತವಾದ  ಬಟ್ಟೆ ತೊಟ್ಟು ಪ್ರವೇಶ ಮಾಡಬೇಕಾಗುತ್ತದೆ.  ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಮುಜರಾಯಿ ಇಲಾಖೆಯ ಆದೀನತೆಯಲ್ಲಿನ ದೇವಳಗಳಲ್ಲಿ ಕೂಡಾ ವಸ್ತ್ರು ಸಂಹಿತೆ ಜಾರಿಗೆ ತರಲು ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಧಾರ್ಮಿಕ ಮುಖಂಡರ ಜೊತೆ ಈಗ ಮಾತುಕತೆ ನಡೆಯುತ್ತಿದೆ. ಹೇಗೆ ಜಾರಿ ಮಾಡಬಹುದು ಎಂಬುದರ ಬಗ್ಗೆ ಮಾತುಕತೆ ಆರಂಭವಾಗಿದೆ.

ಕಳೆದ ವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಬಗ್ಗೆ ಪ್ರತಿಕ್ರಿಯೆ ನೀಡಿ  ರಾಜ್ಯ ಮುಜರಾಯಿ ಇಲಾಖೆಯ ಆದೀನತೆಯಲ್ಲಿನ ದೇವಳಗಳಲ್ಲಿ ವಸ್ತ್ರ ಸಂಹಿತೆ ಅಳವಡಿಸುವ ಬಗ್ಗೆ ಅನೇಕ ಸಂಘಟನೆಗಳ ಕಾರ್ಯಕರ್ತರು ಮನವಿ ನೀಡುತ್ತಿದ್ದಾರೆ.ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವುದರ ಬಗ್ಗೆ ಜಿಜ್ಞಾಸೆ ಇದೆ.ದೇವಳಗಳ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ವಸ್ತ್ರ ಸಂಹಿತೆ ಜಾರಿ ತರುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಯಾವ ರೀತಿ ವಸ್ತ್ರ ಸಂಹಿತೆ ಮಾಡಬಹುದು.ಈ ಬಗ್ಗೆ ಅನೇಕರ ಅಭಿಪ್ರಾಯ ತೆಗೆದುಕೊಳ್ಳಬೇಕಾದ ಆವಶ್ಯಕತೆ ಇದೆ.ಇದನ್ನು ಯಾರ ಮೇಲೂ ಹೇರುವ ಭಾವನೆ ಇಲ್ಲ. ಸರ್ವರ ಅಭಿಪ್ರಾಯವನ್ನು ತೆಗೆದುಕೊಂಡು ಕ್ರಮ ಕೈಗೊಳ್ಳಲಾಗುವುದು.ಭಕ್ತರ ಮೇಲೆ ವಸ್ತ್ರ ಸಂಹಿತೆಯ ಪರಿಣಾಮಗಳೇನು.ಯಾವ ವಸ್ತ್ರ ವಿನ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಮತ್ತು ದೇವಳದ ಧಾರ್ಮಿಕ ವಿಚಾರಗಳನ್ನು ಸಮಗ್ರವಾಗಿ ಪರಿಶೀಲಿಸಿ, ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದು ಪ್ರತಿಕ್ರಿಯೆ ನೀಡಿದ್ದರು.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

8 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

11 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

17 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

23 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

23 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago