ಸುಬ್ರಹ್ಮಣ್ಯ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೂವು ಸರಬರಾಜು ಮಾಡಲು ಟೆಂಡರ್ ಕರೆಯಲಾಗಿದೆ. ಇದರಲ್ಲಿ ಬಿಲ್ವಪತ್ರೆ ರಹಿತವಾಗಿದೆ. ಹೀಗಾಗಿ ಈ ಟೆಂಡರ್ ರದ್ದು ಮಾಡಿ ಹೊಸದಾದ ಟೆಂಡರ್ ಕರೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತ , ಕುಕ್ಕೆ ಸುಬ್ರಹ್ಮಣ್ಯ ದೇವರ ಭಕ್ತ ಶಶಿಧರ್ ವಿ ಎನ್ ಎಂಬವರು ಹಿಂದೂ ಧಾರ್ಮಿಕ ಸಂಸ್ಥೆಗಳ ಆಯುಕ್ತರಿಗೆ ದೂರು ನೀಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2020-21 ನೇ ಸಾಲಿನಲ್ಲಿ ದೇವಸ್ಥಾನಕ್ಕೆ ಅವಶ್ಯ ಹೂವು ಸರಬರಾಜು ಮಾಡಲು ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್ ನಲ್ಲಿ 16 ಹೂವುಗಳ ಆವಶ್ಯಕತೆಯ ಬಗ್ಗೆ ಇದ್ದರೆ ಬಿಲ್ವ ಪತ್ರೆಯ ಅವಶ್ಯಕತೆಯ ಬಗ್ಗೆ ಮಾಹಿತಿ ಇರಲಿಲ್ಲ. ಹೀಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವರ ಭಕ್ತ ಶಶಿಧರ್ ವಿ ಎನ್ ಆಯುಕ್ತರಿಗೆ ದೂರು ನೀಡಿದ್ದು ಶೈವ ದೇವಸ್ಥಾನದಲ್ಲಿ ಬಿಲ್ವ ಪತ್ರೆಯ ಅವಶ್ಯಕತೆ ಏಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ದೇವರ ಸಹಿತ ಉಮಾಮಹೇಶ್ವರ ದೇವರ ಆರಾಧನೆ ನಡೆಯುತ್ತದೆ. ಶಿವ ದೇವರಿಗೆ ಬಿಲ್ವಪತ್ರೆ ಅಗತ್ಯವಾಗಿದೆ. ಹೀಗಾಗಿ ಈ ಟೆಂಡರ್ ನಲ್ಲಿ ಬಿಲ್ವಪತ್ರೆ ಅವಶ್ಯಕತೆ ಬಗ್ಗೆ ಮಾಹಿತಿ ಇಲ್ಲ. ಆದ್ದರಿಂದ ದೇವಸ್ಥಾನದಲ್ಲಿ ಬಿಲ್ವಪತ್ರೆ ಸಹಿತವಾದ ಪೂಜೆ ನಡೆಯಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…