ಸುಬ್ರಹ್ಮಣ್ಯ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೂವು ಸರಬರಾಜು ಮಾಡಲು ಟೆಂಡರ್ ಕರೆಯಲಾಗಿದೆ. ಇದರಲ್ಲಿ ಬಿಲ್ವಪತ್ರೆ ರಹಿತವಾಗಿದೆ. ಹೀಗಾಗಿ ಈ ಟೆಂಡರ್ ರದ್ದು ಮಾಡಿ ಹೊಸದಾದ ಟೆಂಡರ್ ಕರೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತ , ಕುಕ್ಕೆ ಸುಬ್ರಹ್ಮಣ್ಯ ದೇವರ ಭಕ್ತ ಶಶಿಧರ್ ವಿ ಎನ್ ಎಂಬವರು ಹಿಂದೂ ಧಾರ್ಮಿಕ ಸಂಸ್ಥೆಗಳ ಆಯುಕ್ತರಿಗೆ ದೂರು ನೀಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2020-21 ನೇ ಸಾಲಿನಲ್ಲಿ ದೇವಸ್ಥಾನಕ್ಕೆ ಅವಶ್ಯ ಹೂವು ಸರಬರಾಜು ಮಾಡಲು ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್ ನಲ್ಲಿ 16 ಹೂವುಗಳ ಆವಶ್ಯಕತೆಯ ಬಗ್ಗೆ ಇದ್ದರೆ ಬಿಲ್ವ ಪತ್ರೆಯ ಅವಶ್ಯಕತೆಯ ಬಗ್ಗೆ ಮಾಹಿತಿ ಇರಲಿಲ್ಲ. ಹೀಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವರ ಭಕ್ತ ಶಶಿಧರ್ ವಿ ಎನ್ ಆಯುಕ್ತರಿಗೆ ದೂರು ನೀಡಿದ್ದು ಶೈವ ದೇವಸ್ಥಾನದಲ್ಲಿ ಬಿಲ್ವ ಪತ್ರೆಯ ಅವಶ್ಯಕತೆ ಏಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ದೇವರ ಸಹಿತ ಉಮಾಮಹೇಶ್ವರ ದೇವರ ಆರಾಧನೆ ನಡೆಯುತ್ತದೆ. ಶಿವ ದೇವರಿಗೆ ಬಿಲ್ವಪತ್ರೆ ಅಗತ್ಯವಾಗಿದೆ. ಹೀಗಾಗಿ ಈ ಟೆಂಡರ್ ನಲ್ಲಿ ಬಿಲ್ವಪತ್ರೆ ಅವಶ್ಯಕತೆ ಬಗ್ಗೆ ಮಾಹಿತಿ ಇಲ್ಲ. ಆದ್ದರಿಂದ ದೇವಸ್ಥಾನದಲ್ಲಿ ಬಿಲ್ವಪತ್ರೆ ಸಹಿತವಾದ ಪೂಜೆ ನಡೆಯಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…