ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯ: ನೂತನ ಬ್ರಹ್ಮರಥದ ಸ್ವಾಗತಕ್ಕಾಗಿ ರಚಿಸಿದ ವಿವಿಧ ಸಮಿತಿಗಳು ನಡೆಸಿದ ಕಾರ್ಯಸೂಚಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ:ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತ ಕಚೇರಿಯ ಸಭಾಂಗಣದಲ್ಲಿ  ನೂತನ ಬ್ರಹ್ಮರಥದ ಸ್ವಾಗತಕ್ಕಾಗಿ ರಚಿಸಿದ ವಿವಿಧ ಸಮಿತಿಗಳು ನಡೆಸಿದ ಕಾರ್ಯಸೂಚಿ ಬಗ್ಗೆ ಸಭೆ ನಡೆಯಿತು.

Advertisement

ಈ ಸಂದರ್ಭ ಮಾತನಾಡಿದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ರಥದ ಜೊತೆ  ಶ್ರೀ ದೇವಳದ ಇಬ್ಬರು ಪುರೋಹಿತರು ಇರುತ್ತಾರೆ ಇವರು ಭಕ್ತರು ನೀಡಿದ ಆರತಿಯನ್ನು ರಥಕ್ಕೆ ಅರ್ಪಿಸಲಿದ್ದಾರೆ.20 ಜನ ದೇವಳದ ಭದ್ರತಾ ಸಿಬ್ಬಂಧಿಗಳು ರಥದ ಸುತ್ತ ಇರುತ್ತಾರೆ. ರಥವು ಹಾದು ಬರುವ ಹಾದಿಯಲ್ಲಿ ಸಿಗುವ ದೇವಸ್ಥಾನದ ಮುಂಭಾಗದಲ್ಲಿ ರಥವನ್ನು ನಿಲ್ಲಿಸಿ ತೆಂಗಿನಕಾಯಿ ಒಡೆಯಲಾಗುತ್ತದೆ. ಅಲ್ಲದೆ ರಥಕ್ಕೆ ಆರತಿ ಅರ್ಪಣೆ ಮಾಡಿದ ಭಕ್ತರಿಗೆ ಮೂಲಮೃತ್ತಿಕಾ ಪ್ರಸಾದವನ್ನು ವಿತರಿಸಲಾಗುತ್ತದೆ ಎಂದು  ಹೇಳಿದರು. ಬ್ರಹ್ಮರಥವನ್ನು ಶಿಲ್ಪಿಗಳು ವಿವಿಧ ವೈಧಿಕ ವಿದಿವಿಧಾನಗಳ ಮೂಲಕ ಸೆ.29ಕ್ಕೆ ಬಿಟ್ಟು ಕೊಡುತ್ತಾರೆ.ಸೆ.30ರಂದು ಬೆಳಗ್ಗೆ 8.30ಗೆ ರಥವು ಕೋಟೇಶ್ವರದಿಂದ ಹೊರಡುತ್ತದೆ ಎಂದರು.

ನಂತರ ಕೋಟದಲ್ಲಿ ಸಾರ್ವಜನಿಕರಿಂದ ಪೂಜೆ ಮತ್ತು ಕುಣಿತ ಭಜನೆ ನೆರವೇರಲಿದೆ.ಬಳಿಕ ಸಾಲಿಗ್ರಾಮ, ಉಡುಪಿ, ಕಾಪು, ಮುಲ್ಕಿ,ಬಪ್ಪನಾಡು, ಸುರತ್ಕಲ್‍ಗಳಲ್ಲಿ ಪೂಜೆ ಮೂಲಕ ಅಲ್ಲಿನ ಭಕ್ತರು ಬ್ರಹ್ಮರಥವನ್ನು ಸ್ವಾಗತಿಸಲಿದ್ದಾರೆ. ಮಂಗಳೂರಿಗೆ ಆಗಮಿಸಿ ಕದ್ರಿ ಪೋಲಿಸ್ ಠಾಣಿ ಬಳಿ ರಥ ತಂಗಲಿದೆ. ಅ.1ರಂದು ಮಂಗಳೂರಿನಿಂದ ಹೊರಟು ಬಿ.ಸಿ.ರೋಡು, ಕಲ್ಲಡ್ಕ, ಮಾಣಿ, ಉಪ್ಪಿನಂಗಡಿ, ಆಲಂಕಾರು ಮೂಲಕ ಬಲ್ಯಕ್ಕೆ ಆಗಮಿಸಿ ಬಲ್ಯ ದೇವಳದ ಸಮೀಪ ರಥವು ತಂಗಲಿದೆ.ಬಲ್ಯದಿಂದ ಬೆಳಗ್ಗೆ 10ಗಂಟೆಗೆ ಹೊರಟು ಕಡಬಕ್ಕೆ ತಲುಪಲಿದೆ. ನಂತರ ಅಲ್ಲಿಂದ ವಾಹನ ಜಾಥಾದ ಮೂಲಕ ರಥವನ್ನು ಬಿಳಿನೆಲೆ, ಕೈಕಂಬ ಮೂಲಕ ಕರೆತರಲಾಗುತ್ತದೆ.ಕುಲ್ಕುಂದದಿಂದ ಬೃಹತ್ ಮೆರವಣಿಗೆಯೊಂದಿಗೆ ಬ್ರಹ್ಮರಥವು ಕುಕ್ಕೆಸುಬ್ರಹ್ಮಣ್ಯಕ್ಕೆ ಬ್ರಹ್ಮರಥವು ಪುರಪ್ರವೇಶ ಮಾಡಲಿದೆ ಎಂದು ಸಭೆಯಲ್ಲಿ ಶ್ರೀ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲ್ ಹೇಳಿದರು.

ಕೈಕಂಬದಿಂದ ಸುಬ್ರಹ್ಮಣ್ಯದ ತನಕ ಸುಮಾರು 7 ಕಿ.ಮೀ ದೂರದ ತನಕ ರಸ್ತೆಯ ಇಕ್ಕೆಲಗಳಲ್ಲಿ ತಳಿರು ತೋರಣ, ಕೇಸರಿ ಬಂಟಿಂಗ್ಸ್ ಮತ್ತು ಭಗವಾಧ್ವಜವನ್ನು ಹಾಕಿ ಸಿಂಗರಿಸಲಾಗುವುದು.ಅಲ್ಲದೆ ಅಲ್ಲಲ್ಲಿ ವಿವಿಧ ವಿನ್ಯಾಸಗಳ ಗೋಪುರಗಳನ್ನು ರಸ್ತೆಯ ಬದಿಯಲ್ಲಿ ಅಳವಡಿಸಲಾಗುವುದು.ಕುಲ್ಕುಂದದಿಂದ ಆರಂಭವಾಗುವ ಮೆರವಣಿಗೆಗೆ 10ಕ್ಕೂ ಅಧಿಕ ಸ್ತಬ್ದಚಿತ್ರಗಳು, 40ಜನ ಕಲಾವಿದರಿಂದ ಆಕರ್ಷಕ ಸಿಂಗಾರಿ ಮೇಳ, ಚಿಲಿಪಿಲಿಗೊಂಬೆ, ಹುಲಿವೇಷ ತಂಡ, ವೀರಗಾಸೆ, 20ಕ್ಕೂ ಅಧಿಕ ತಂಡಗಳಿಂದ ಕುಣಿತ ಭಜನೆ, ವೇದಘೋಷ, ವಿಶೇಷ ಕೊಡೆಗಳು ಮೆರುಗು ನೀಡಲಿದೆ.ಎಲ್ಲಾ ಕಲಾವಿದರಿಗೆ ಉಪಹಾರ ವ್ಯವಸ್ಥೆ, ನೀರು, ಮಜ್ಜಿಗೆ ಮತ್ತು ಪಾನಕದ ವ್ಯವಸ್ಥೆಯನ್ನು ಶ್ರೀ ದೇವಳ ಮತ್ತು ಸಂಘ ಸಂಸ್ಥೆಗಳು ಮಾಡಲಿದೆ ಎಂದು ಅಲಂಕಾರ ಸಮಿತಿ ಸಂಚಾಲಕ ರಾಜೇಶ್ ಎನ್.ಎಸ್ ಸಭೆಯಲ್ಲಿ ಹೇಳಿದರು.

Advertisement

ಸಭೆಯಲ್ಲಿ ಬ್ರಹ್ಮರಥದ ಸೇವಾರ್ಥಿಗಳಲ್ಲಿ ಓರ್ವರಾದ ಯುವ ಉದ್ಯಮಿ ಅಜಿತ್ ಶೆಟ್ಟಿ, ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೃಷ್ಣಮೂರ್ತಿ ಭಟ್, ಬಾಲಕೃಷ್ಣ ಗೌಡ ಬಳ್ಳೇರಿ, ಪ್ರಮುಖರಾದ ಚಂದ್ರಹಾಸ ರೈ, ಪ್ರಮುಖರಾದ ರಮೇಶ್ ಕಲ್ಪುರೆ, ನಾಗರಾಜ್ ಎನ್.ಕೆ, ಅಶೋಕ್ ಕಡಬ, ಮಾಸ್ಟರ್ ಪ್ಲಾನ್ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವರಾಮ ರೈ, ಸುಧೀರ್ ಕುಮಾರ್ ಶೆಟ್ಟಿ, ದೇವಳದ ಅಭಿಯಂತರ ಉದಯ ಕುಮಾರ್, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶ್ರೀ ದೇವಳದ ಪದ್ಮನಾಭ ಶೆಟ್ಟಿಗಾರ್, ಮೋಹನ್ ಎಂ.ಕೆ, ಸರಸ್ವತಿ, ಅಲಂಕಾರ ಸಮಿತಿ ಸಂಚಾಲಕ ರಾಜೇಶ್ ಎನ್.ಎಸ್, ಸದಸ್ಯ ಪ್ರಶಾಂತ್ ಭಟ್ ಮಾಣಿಲ, ಆಹಾರ ಸಮಿತಿ ಸಂಚಾಲಕ ಎ.ಸುಬ್ರಹ್ಮಣ್ಯ ರಾವ್, ಪ್ರಚಾರ ಸಮಿತಿ ಸಂಚಾಲಕ ಗಿರಿಧರ್ ಸ್ಕಂಧ, ಸದಸ್ಯರಾದ ರತ್ನಾಕರ.ಎಸ್, ಹರಿಪ್ರಸಾದ್ ನಾಯರ್ ಮಲ್ಲಾಜೆ, ಭರತ್ ನೆಕ್ರಾಜೆ, ಚರಣ್ ಕಾನಡ್ಕ ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

3 hours ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

10 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

15 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

17 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago