ಕುಕ್ಕೆ ಸುಬ್ರಹ್ಮಣ್ಯ: ಪಂಚಮಿಯಂದು 399 ಭಕ್ತರಿಂದ ಎಡೆಸ್ನಾನ

December 1, 2019
10:20 PM

ಸುಬ್ರಹಣ್ಯ: ಪುಣ್ಯ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸ್ಕಂಧ ಪಂಚಮಿಯ ದಿನವಾದ ಆದಿತ್ಯವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 399 ಭಕ್ತರು ಎಡೆಸ್ನಾನ ಸೇವೆಗೈದರು.

ಗೋವು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸುವ ಮೂಲಕ ಚಂಪಾಷಷ್ಠಿಯ ಜಾತ್ರೋತ್ಸವದ ಪಂಚಮಿಯ ದಿನದಂದು ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು. ಷಷ್ಠಿಯ ದಿನವಾದ ಸೋಮವಾರ ಕೂಡಾ ಎಡೆಸ್ನಾನ ಸೇವೆಯನ್ನು ಭಕ್ತರು ನೆರವೇರಿಸಲಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ಯತೀಶ್ ಉಳ್ಳಾಲ್, ಆಗಮ ಪಂಡಿತರು, ಶ್ರೀ ದೇವಳದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥ್ ನಂಬೀಶ ಮತ್ತು ದೇವಳದ ಸಿಬ್ಬಂಧಿಗಳು ಉಪಸ್ಥಿತರಿದ್ದರು.ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ ಅವರ ನೇತೃತ್ವದಲ್ಲಿ ಪೋಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ
March 19, 2026
8:15 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror