Advertisement
ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯ: ಬ್ರಹ್ಮರಥದ ಸ್ವಾಗತ ಕಾರ್ಯಕ್ರಮದಲ್ಲಿ ದುಡಿದ ಸ್ವಯಂಸೇವಕ ಭಕ್ತರಿಗೆ ಕೃತಜ್ಞತೆಗಳು

Share

ಸುಬ್ರಹ್ಮಣ್ಯ: ಕುಕ್ಕೆ ಕ್ಷೇತ್ರಕ್ಕೆ ನೂತನ ಬ್ರಹ್ಮರಥ ಆಗಮದ ಸಂದರ್ಭ ಸರ್ವ ಭಕ್ತರು ನಿರಂತರ ಸೇವೆ ಮಾಡಿದ್ದಾರೆ. ಕ್ಷೇತ್ರ ಶೃಂಗಾರ ಸೇರಿದಂತೆ, ಮೆರವಣಿಗೆ ಇತ್ಯಾದಿಗಳನ್ನು ಅತ್ಯಂತ ವೈಭವವಾಗಿ ಮಾಡಿ ಸಹಕರಿಸಿದ ಕ್ಷೇತ್ರದ ಸರ್ವ ಸ್ವಯಂಸೇವಕ ಭಕ್ತರ ಸೇವೆ ಅವಿಸ್ಮರಣೀಯ ಎಂದು ಬ್ರಹ್ಮರಥದ ಸೇವಾರ್ಥಿಗಳಲ್ಲಿ ಓರ್ವರಾದ ಯುವ ಉದ್ಯಮಿ ಅಜಿತ್ ಶೆಟ್ಟಿ ಹೇಳಿದರು.

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉದ್ಯಮಿ ಎನ್.ಮುತ್ತಪ್ಪ ರೈ ದೇರ್ಲ ಮತ್ತು ಯುವ ಉದ್ಯಮಿ ಅಜಿತ್ ಶೆಟ್ಟಿ ಕಡಬ ಸುಮಾರು ರೂ.2.50ಕೋಟಿ ವೆಚ್ಚದಲ್ಲಿ ಕಾಣಿಕೆಯಾಗಿ ಅರ್ಪಿಸಲಿರುವ ನೂತನ ಬ್ರಹ್ಮರಥದ ಪುರಪ್ರವೇಶ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿಗೆ ಕಾರಣಕರ್ತರಾದ ಸ್ವಯಂಸೇವಕ ಭಕ್ತರಿಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿ ಮತ್ತು ಬ್ರಹ್ಮರಥ ದಾನಿಗಳಿಂದ ಶುಕ್ರವಾರ ನಡೆದ ಕೃತಜ್ಞತಾ ಸಮರ್ಪಣಾ ಸಮಾರಂಭದಲ್ಲಿ ಅವರು ಮಾತನಾಡಿದರು.ಸರ್ವ ಭಕ್ತರ ಸಹಕಾರದಿಂದ ಬ್ರಹ್ಮರಥವು ಕೋಟೇಶ್ವರದಿಂದ ಕುಕ್ಕೆಯ ತನಕ ಅವಿಸ್ಮರಣೀಯ ಸ್ವಾಗತದ ಮೂಲಕ ಪುರಪ್ರವೇಶಿಸಲು ದುಡಿದ ಸರ್ವ ಭಕ್ತರಿಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಕೃಪಾಶಿರ್ವಾದ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಅಭೂತಪೂರ್ವ ಮೆರವಣಿಗೆಯೊಂದಿಗೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮರಥ ಆಗಮಿಸಿದೆ.ಇದರ ಸುಸಂಪನ್ನತೆ ಸ್ವಯಂಸೇವಕ ಭಕ್ತ ವೃಂದದ ಸೇವೆ ಅವಿಸ್ಮರಣೀಯ.ಬ್ರಹ್ಮರಥದ ದಾನಿಗಳು ಸ್ವಯಂಪ್ರೇರಿತರಾಗಿ ಸೇವೆ ಸಲ್ಲಿಸಿದ ಭಕ್ತರಿಗೆ ಬೋಜನ ವ್ಯವಸ್ಥೆ ಮಾಡುವ ಮೂಲಕ ಅವರನ್ನು ಗುರುತಿಸುವ ಕಾರ್ಯವನ್ನು ಮಾಡಿರುವುದು ಶ್ಲಾಘನೀಯ.ಸೇವೆಯನ್ನು ಗುರುತಿಸುವ ಕಾರ್ಯ ನಡೆದಾಗ ಮತ್ತಷ್ಟು ಸೇವೆ ಮಾಡಲು ಹುರುಪು ನೀಡುತ್ತದೆ. ನೂತನ ಬ್ರಹ್ಮರಥದ ಆಗಮನಕ್ಕಾಗಿ ಸೇವೆ ಸಲ್ಲಿಸಲು ದೊರಕಿರುವ ಅವಕಾಶ ನಮ್ಮೆಲ್ಲರ ಭಾಗ್ಯ.ಸರ್ವರೂ ಸೇರಿ ನಡೆಸಿದ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಕಂಡಿದೆ. ಕೋಟೇಶ್ವರದಿಂದ ಕುಕ್ಕೆಯ ತನಕ ಬ್ರಹ್ಮರಥದ ಪ್ರಯಾಣದ ವೇಳೆ ಅಭೂತಪೂರ್ವ ಭಕ್ತಿಪೂರ್ವಕ ಸ್ವಾಗತದೊಂದಿಗೆ ಸರ್ವ ಭಕ್ತರು ಬರಮಾಡಿಕೊಂಡ ರೀತಿಯ ಹೃದಯತುಂಬಿ ಬಂದಿದೆ.ಕುಕ್ಕೆಸುಬ್ರಹ್ಮಣ್ಯದಲ್ಲಿ ನೀಡಿದ ಅಭೂತಪೂರ್ವ ಸ್ವಾಗತ ನವ ಇತಿಹಾಸ ಸೃಷ್ಠಿಸಿದೆ ಎಂದು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.

ವೇದಿಕೆಯಲ್ಲಿ ಚಂದ್ರಹಾಸ ರೈ, ಡಾ.ಸ್ನೇಹಾ ಅಜಿತ್ ಶೆಟ್ಟಿ, ಬ್ರಹ್ಮರಥದ ಶಿಲ್ಪಿ ಕೋಟೇಶ್ವರ ರಾಜಗೋಪಾಲ ಆಚಾರ್ಯ, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಬಳ್ಳೇರಿ, ಕೇನ್ಯ ರವೀಂದ್ರನಾಥ ಶೆಟ್ಟಿ, ಕೃಷ್ಣಮೂರ್ತಿ ಭಟ್, ಮಹೇಶ್ ಕುಮಾರ್ ಕೆ.ಎಸ್ ಕರಿಕ್ಕಳ, ಮಾಧವ.ಡಿ, ರಾಜೀವಿ ಆರ್ ರೈ, ಮಾಸ್ಟರ್ ಪ್ಲಾನ್ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವರಾಮ ರೈ, ಶ್ರೀ ದೇವಳದ ಅಭಿಯಂತರ ಉದಯ ಕುಮಾರ್, ಅಲಂಕಾರ ಸಮಿತಿ ಸಂಚಾಲಕ ರಾಜೇಶ್ ಎನ್.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಹಕರಿಸಿದ ಪ್ರತಿಯೊಬ್ಬ ಭಕ್ತರಿಗೆ, ಸರಕಾರಿ ಇಲಾಖೆಗಳಿಗೆ, ಸಂಘ ಸಂಸ್ಥೆಗಳಿಗೆ ಕೃತಜ್ಞತೆಗಳನ್ನು ಗಣ್ಯರು ಸಮರ್ಪಿಸಿದರು.ಶಿವರಾಮ ರೈ ಸ್ವಾಗತಿಸಿದರು. ಚಂದ್ರಶೇಖರ ಪೇರಾಲ್ ವಂದಿಸಿದರು.ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

21 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

23 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

24 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

1 day ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

1 day ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago