ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಹಿತರಕ್ಷಣಾ ವೇದಿಕೆಯ ಸಭೆ ಭಾನುವಾರ ಸುಬ್ರಹ್ಮಣ್ಯದಲ್ಲಿ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಿಸಿದ ಹೋರಾಟ ಮುಂದುವರಿಸಲು ಇದೇ ಸಂದರ್ಭ ನಿರ್ಧರಿಸಲಾಯಿತು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಧಾರ್ಮಿಕ ಮತ್ತು ಮುಜರಾಯಿ ಸಚಿವರನ್ನು ಭೇಟಿಯಾಗಲು ಸದ್ಯದಲ್ಲೇ ತೆರಳಲು ನಿರ್ಧರಿಸಲಾಯಿತು. ಕುಮಾರಧಾರಾ ಬಳಿಯ ಸೋಮನಾಥೇಶ್ವರ ದೇವಾಲಯಕ್ಕೆ ಸಂಬಂಧಿಸಿ ಕಾನೂನು ಹೋರಾಟ ಮಾಡುವುದು, ಪರಬೋಕು ಜಾಗವನ್ನು ಸರಕಾರ ಮರುವಶ ಪಡಿಸಿಕೊಳ್ಳುವಂತೆ ಹೋರಾಟ ಮಾಡಲು ನಿರ್ಧರಿಸಲಾಯಿತು.
ಸಭೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕದ್ಷ ಮಹೇಶ್ ಕುಮಾರ್ ಕರಿಕಳ, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್.ಕೆ ಜಗನ್ನಿವಾಸ ರಾವ್, ಪ್ರಮುಖರಾದ ಶ್ರೀನಾಥ್ ಭಟ್, ಶಿವರಾಮ ರೈ, ಜಯರಾಮ ಗೌಡ ಕಟ್ಟೆಮನೆ, ಶಶಿಧರ್ ವಿ ಎನ್ , ಗೋಪಾಲ ಎಣ್ಣೆಮಜಲು, ಗುರುಪ್ರಸಾದ್ ಪಂಜ ಮೊದಲಾದವರು ಇದ್ದರು.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…