ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಹಿತರಕ್ಷಣಾ ವೇದಿಕೆಯ ಸಭೆ ಭಾನುವಾರ ಸುಬ್ರಹ್ಮಣ್ಯದಲ್ಲಿ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಿಸಿದ ಹೋರಾಟ ಮುಂದುವರಿಸಲು ಇದೇ ಸಂದರ್ಭ ನಿರ್ಧರಿಸಲಾಯಿತು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಧಾರ್ಮಿಕ ಮತ್ತು ಮುಜರಾಯಿ ಸಚಿವರನ್ನು ಭೇಟಿಯಾಗಲು ಸದ್ಯದಲ್ಲೇ ತೆರಳಲು ನಿರ್ಧರಿಸಲಾಯಿತು. ಕುಮಾರಧಾರಾ ಬಳಿಯ ಸೋಮನಾಥೇಶ್ವರ ದೇವಾಲಯಕ್ಕೆ ಸಂಬಂಧಿಸಿ ಕಾನೂನು ಹೋರಾಟ ಮಾಡುವುದು, ಪರಬೋಕು ಜಾಗವನ್ನು ಸರಕಾರ ಮರುವಶ ಪಡಿಸಿಕೊಳ್ಳುವಂತೆ ಹೋರಾಟ ಮಾಡಲು ನಿರ್ಧರಿಸಲಾಯಿತು.
ಸಭೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕದ್ಷ ಮಹೇಶ್ ಕುಮಾರ್ ಕರಿಕಳ, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್.ಕೆ ಜಗನ್ನಿವಾಸ ರಾವ್, ಪ್ರಮುಖರಾದ ಶ್ರೀನಾಥ್ ಭಟ್, ಶಿವರಾಮ ರೈ, ಜಯರಾಮ ಗೌಡ ಕಟ್ಟೆಮನೆ, ಶಶಿಧರ್ ವಿ ಎನ್ , ಗೋಪಾಲ ಎಣ್ಣೆಮಜಲು, ಗುರುಪ್ರಸಾದ್ ಪಂಜ ಮೊದಲಾದವರು ಇದ್ದರು.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…