ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಹಿತರಕ್ಷಣಾ ವೇದಿಕೆಯ ಸಭೆ ಭಾನುವಾರ ಸುಬ್ರಹ್ಮಣ್ಯದಲ್ಲಿ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಿಸಿದ ಹೋರಾಟ ಮುಂದುವರಿಸಲು ಇದೇ ಸಂದರ್ಭ ನಿರ್ಧರಿಸಲಾಯಿತು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಧಾರ್ಮಿಕ ಮತ್ತು ಮುಜರಾಯಿ ಸಚಿವರನ್ನು ಭೇಟಿಯಾಗಲು ಸದ್ಯದಲ್ಲೇ ತೆರಳಲು ನಿರ್ಧರಿಸಲಾಯಿತು. ಕುಮಾರಧಾರಾ ಬಳಿಯ ಸೋಮನಾಥೇಶ್ವರ ದೇವಾಲಯಕ್ಕೆ ಸಂಬಂಧಿಸಿ ಕಾನೂನು ಹೋರಾಟ ಮಾಡುವುದು, ಪರಬೋಕು ಜಾಗವನ್ನು ಸರಕಾರ ಮರುವಶ ಪಡಿಸಿಕೊಳ್ಳುವಂತೆ ಹೋರಾಟ ಮಾಡಲು ನಿರ್ಧರಿಸಲಾಯಿತು.
ಸಭೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕದ್ಷ ಮಹೇಶ್ ಕುಮಾರ್ ಕರಿಕಳ, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್.ಕೆ ಜಗನ್ನಿವಾಸ ರಾವ್, ಪ್ರಮುಖರಾದ ಶ್ರೀನಾಥ್ ಭಟ್, ಶಿವರಾಮ ರೈ, ಜಯರಾಮ ಗೌಡ ಕಟ್ಟೆಮನೆ, ಶಶಿಧರ್ ವಿ ಎನ್ , ಗೋಪಾಲ ಎಣ್ಣೆಮಜಲು, ಗುರುಪ್ರಸಾದ್ ಪಂಜ ಮೊದಲಾದವರು ಇದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…