ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಹಿತರಕ್ಷಣಾ ವೇದಿಕೆಯ ಸಭೆ ಭಾನುವಾರ ಸುಬ್ರಹ್ಮಣ್ಯದಲ್ಲಿ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಿಸಿದ ಹೋರಾಟ ಮುಂದುವರಿಸಲು ಇದೇ ಸಂದರ್ಭ ನಿರ್ಧರಿಸಲಾಯಿತು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಧಾರ್ಮಿಕ ಮತ್ತು ಮುಜರಾಯಿ ಸಚಿವರನ್ನು ಭೇಟಿಯಾಗಲು ಸದ್ಯದಲ್ಲೇ ತೆರಳಲು ನಿರ್ಧರಿಸಲಾಯಿತು. ಕುಮಾರಧಾರಾ ಬಳಿಯ ಸೋಮನಾಥೇಶ್ವರ ದೇವಾಲಯಕ್ಕೆ ಸಂಬಂಧಿಸಿ ಕಾನೂನು ಹೋರಾಟ ಮಾಡುವುದು, ಪರಬೋಕು ಜಾಗವನ್ನು ಸರಕಾರ ಮರುವಶ ಪಡಿಸಿಕೊಳ್ಳುವಂತೆ ಹೋರಾಟ ಮಾಡಲು ನಿರ್ಧರಿಸಲಾಯಿತು.
ಸಭೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕದ್ಷ ಮಹೇಶ್ ಕುಮಾರ್ ಕರಿಕಳ, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್.ಕೆ ಜಗನ್ನಿವಾಸ ರಾವ್, ಪ್ರಮುಖರಾದ ಶ್ರೀನಾಥ್ ಭಟ್, ಶಿವರಾಮ ರೈ, ಜಯರಾಮ ಗೌಡ ಕಟ್ಟೆಮನೆ, ಶಶಿಧರ್ ವಿ ಎನ್ , ಗೋಪಾಲ ಎಣ್ಣೆಮಜಲು, ಗುರುಪ್ರಸಾದ್ ಪಂಜ ಮೊದಲಾದವರು ಇದ್ದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…