ಕುಕ್ಕೆ ಸುಬ್ರಹ್ಮಣ್ಯ : ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

August 26, 2019
11:00 AM

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಶ್ರೀ ದೇವಳದಲ್ಲಿ ಶ್ರೀಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವನ್ನು ಪೂರ್ವ ಶಿಷ್ಟ ಸಂಪ್ರದಾಯದಂತೆ ಆಚರಿಸಲಾಯಿತು.

Advertisement
Advertisement

ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು ಸ್ಥಳೀಯ ಮೂಲನಿವಾಸಿಗಳಾದ ಮಲೆಕುಡಿಯ ಜನಾಂಗದವರು ಪಾಲಕಿಯಲ್ಲಿ ಬಿರುದಾವಳಿ,ಮಂಗಳವಾದ್ಯದ ಮೂಲಕ ಮೆರವಣಿಗೆಯಲ್ಲಿ ಶ್ರೀ ದೇವಳಕ್ಕೆ ತಂದರು. ಶ್ರೀದೇವಳಕ್ಕೆ ಪ್ರದಕ್ಷಿಣೆ ಬಂದು ದೇವಳದಿಂದ ಕಾಶಿಕಟ್ಟೆಗೆ ಉತ್ಸವವು ತೆರಳಿತು. ಬಳಿಕ ರಥಬೀದಿಯಿಂದ ಕಾಶಿಕಟ್ಟೆ ತನಕ ಶ್ರೀ ದೇವರ ಉತ್ಸವದ ಸಂದರ್ಭದಲ್ಲಿ ಅಲ್ಲಲ್ಲಿ ಕಂಬದಲ್ಲಿ ಕಟ್ಟಿದ್ದ ಮೊಸರು ತುಂಬಿದ ಕುಡಿಕೆಗಳನ್ನು ಮಹಿಳೆಯರು ಒಡೆದು ಜನ್ಮಾಷ್ಠಮಿಯನ್ನು ಆಚರಿಸಿದರು.ಅಂತಿಮವಾಗಿ ಕಾಶಿಕಟ್ಟೆಯಲ್ಲಿ ಇರಿಸಿದ್ದ ಮೊಸರಿನ ಗಡಿಗೆಗಳನ್ನು ಒಡೆಯಲಾಯಿತು. ನಂತರ ಕಾಶಿಕಟ್ಟೆಯಲ್ಲಿ ಭಗವಾನ್ ಶ್ರೀಕೃಷ್ಣನಿಗೆ ಮಹಾಪೂಜೆ ನೆರವೇರಿತು.

ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಪೇಟ್ಲೆ ಬೆಡಿ ಅತ್ಯಂತ ಪ್ರಮುಖವಾದುದ್ದಾಗಿದೆ. ಸುಬ್ರಹ್ಮಣ್ಯದಲ್ಲಿ ನಡೆದ ಉತ್ಸವದಲ್ಲಿ ಹಿರಿಯರು ಕಿರಿಯರೆನ್ನದೆ ಪೇಟ್ಲೆ ಬೆಡಿಯ ಆಟವಾಡಿ ರಂಜಿಸಿದರು. ಮಕ್ಕಳು ಮತ್ತು ಹಿರಿಯರು ಪೇಟ್ಲೆ ಬೆಡಿಯನ್ನು ಬಿಟ್ಟು ಸಂಭ್ರಮಿಸಿದರು. ಕಾವಟೆಮರದ ಗೆಲ್ಲುಗಳಿಂದ ತಯಾರಿಸಿದ ಪೇಟ್ಲೆ ಬೆಡಿಯನ್ನು ಪ್ರಾಚೀನತೆಯ ಸಂಕೇತವಾಗಿ ಒಡೆದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
December 29, 2025
6:54 AM
by: ದ ರೂರಲ್ ಮಿರರ್.ಕಾಂ
ಗೋಪೂಜೆಯೊಂದಿಗೆ ದೀಪಾವಳಿ ಆಚರಿಸಿದ ತೇಜಸ್ವಿಸೂರ್ಯ ದಂಪತಿಗಳು
October 23, 2025
8:25 PM
by: The Rural Mirror ಸುದ್ದಿಜಾಲ
25 ಲಕ್ಷ ಭಕ್ತರಿಂದ ಹಾಸನಾಂಬೆ ದೇವಿಯ ದರ್ಶನ | 20 ಕೋಟಿ ಆದಾಯ
October 23, 2025
5:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror