ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಶ್ರೀ ದೇವಳದಲ್ಲಿ ಶ್ರೀಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವನ್ನು ಪೂರ್ವ ಶಿಷ್ಟ ಸಂಪ್ರದಾಯದಂತೆ ಆಚರಿಸಲಾಯಿತು.
ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು ಸ್ಥಳೀಯ ಮೂಲನಿವಾಸಿಗಳಾದ ಮಲೆಕುಡಿಯ ಜನಾಂಗದವರು ಪಾಲಕಿಯಲ್ಲಿ ಬಿರುದಾವಳಿ,ಮಂಗಳವಾದ್ಯದ ಮೂಲಕ ಮೆರವಣಿಗೆಯಲ್ಲಿ ಶ್ರೀ ದೇವಳಕ್ಕೆ ತಂದರು. ಶ್ರೀದೇವಳಕ್ಕೆ ಪ್ರದಕ್ಷಿಣೆ ಬಂದು ದೇವಳದಿಂದ ಕಾಶಿಕಟ್ಟೆಗೆ ಉತ್ಸವವು ತೆರಳಿತು. ಬಳಿಕ ರಥಬೀದಿಯಿಂದ ಕಾಶಿಕಟ್ಟೆ ತನಕ ಶ್ರೀ ದೇವರ ಉತ್ಸವದ ಸಂದರ್ಭದಲ್ಲಿ ಅಲ್ಲಲ್ಲಿ ಕಂಬದಲ್ಲಿ ಕಟ್ಟಿದ್ದ ಮೊಸರು ತುಂಬಿದ ಕುಡಿಕೆಗಳನ್ನು ಮಹಿಳೆಯರು ಒಡೆದು ಜನ್ಮಾಷ್ಠಮಿಯನ್ನು ಆಚರಿಸಿದರು.ಅಂತಿಮವಾಗಿ ಕಾಶಿಕಟ್ಟೆಯಲ್ಲಿ ಇರಿಸಿದ್ದ ಮೊಸರಿನ ಗಡಿಗೆಗಳನ್ನು ಒಡೆಯಲಾಯಿತು. ನಂತರ ಕಾಶಿಕಟ್ಟೆಯಲ್ಲಿ ಭಗವಾನ್ ಶ್ರೀಕೃಷ್ಣನಿಗೆ ಮಹಾಪೂಜೆ ನೆರವೇರಿತು.
ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಪೇಟ್ಲೆ ಬೆಡಿ ಅತ್ಯಂತ ಪ್ರಮುಖವಾದುದ್ದಾಗಿದೆ. ಸುಬ್ರಹ್ಮಣ್ಯದಲ್ಲಿ ನಡೆದ ಉತ್ಸವದಲ್ಲಿ ಹಿರಿಯರು ಕಿರಿಯರೆನ್ನದೆ ಪೇಟ್ಲೆ ಬೆಡಿಯ ಆಟವಾಡಿ ರಂಜಿಸಿದರು. ಮಕ್ಕಳು ಮತ್ತು ಹಿರಿಯರು ಪೇಟ್ಲೆ ಬೆಡಿಯನ್ನು ಬಿಟ್ಟು ಸಂಭ್ರಮಿಸಿದರು. ಕಾವಟೆಮರದ ಗೆಲ್ಲುಗಳಿಂದ ತಯಾರಿಸಿದ ಪೇಟ್ಲೆ ಬೆಡಿಯನ್ನು ಪ್ರಾಚೀನತೆಯ ಸಂಕೇತವಾಗಿ ಒಡೆದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…