ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಶ್ರೀ ದೇವಳದಲ್ಲಿ ಶ್ರೀಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವನ್ನು ಪೂರ್ವ ಶಿಷ್ಟ ಸಂಪ್ರದಾಯದಂತೆ ಆಚರಿಸಲಾಯಿತು.
ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು ಸ್ಥಳೀಯ ಮೂಲನಿವಾಸಿಗಳಾದ ಮಲೆಕುಡಿಯ ಜನಾಂಗದವರು ಪಾಲಕಿಯಲ್ಲಿ ಬಿರುದಾವಳಿ,ಮಂಗಳವಾದ್ಯದ ಮೂಲಕ ಮೆರವಣಿಗೆಯಲ್ಲಿ ಶ್ರೀ ದೇವಳಕ್ಕೆ ತಂದರು. ಶ್ರೀದೇವಳಕ್ಕೆ ಪ್ರದಕ್ಷಿಣೆ ಬಂದು ದೇವಳದಿಂದ ಕಾಶಿಕಟ್ಟೆಗೆ ಉತ್ಸವವು ತೆರಳಿತು. ಬಳಿಕ ರಥಬೀದಿಯಿಂದ ಕಾಶಿಕಟ್ಟೆ ತನಕ ಶ್ರೀ ದೇವರ ಉತ್ಸವದ ಸಂದರ್ಭದಲ್ಲಿ ಅಲ್ಲಲ್ಲಿ ಕಂಬದಲ್ಲಿ ಕಟ್ಟಿದ್ದ ಮೊಸರು ತುಂಬಿದ ಕುಡಿಕೆಗಳನ್ನು ಮಹಿಳೆಯರು ಒಡೆದು ಜನ್ಮಾಷ್ಠಮಿಯನ್ನು ಆಚರಿಸಿದರು.ಅಂತಿಮವಾಗಿ ಕಾಶಿಕಟ್ಟೆಯಲ್ಲಿ ಇರಿಸಿದ್ದ ಮೊಸರಿನ ಗಡಿಗೆಗಳನ್ನು ಒಡೆಯಲಾಯಿತು. ನಂತರ ಕಾಶಿಕಟ್ಟೆಯಲ್ಲಿ ಭಗವಾನ್ ಶ್ರೀಕೃಷ್ಣನಿಗೆ ಮಹಾಪೂಜೆ ನೆರವೇರಿತು.
ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಪೇಟ್ಲೆ ಬೆಡಿ ಅತ್ಯಂತ ಪ್ರಮುಖವಾದುದ್ದಾಗಿದೆ. ಸುಬ್ರಹ್ಮಣ್ಯದಲ್ಲಿ ನಡೆದ ಉತ್ಸವದಲ್ಲಿ ಹಿರಿಯರು ಕಿರಿಯರೆನ್ನದೆ ಪೇಟ್ಲೆ ಬೆಡಿಯ ಆಟವಾಡಿ ರಂಜಿಸಿದರು. ಮಕ್ಕಳು ಮತ್ತು ಹಿರಿಯರು ಪೇಟ್ಲೆ ಬೆಡಿಯನ್ನು ಬಿಟ್ಟು ಸಂಭ್ರಮಿಸಿದರು. ಕಾವಟೆಮರದ ಗೆಲ್ಲುಗಳಿಂದ ತಯಾರಿಸಿದ ಪೇಟ್ಲೆ ಬೆಡಿಯನ್ನು ಪ್ರಾಚೀನತೆಯ ಸಂಕೇತವಾಗಿ ಒಡೆದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…