ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಶ್ರೀ ದೇವಳದಲ್ಲಿ ಶ್ರೀಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವನ್ನು ಪೂರ್ವ ಶಿಷ್ಟ ಸಂಪ್ರದಾಯದಂತೆ ಆಚರಿಸಲಾಯಿತು.
ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು ಸ್ಥಳೀಯ ಮೂಲನಿವಾಸಿಗಳಾದ ಮಲೆಕುಡಿಯ ಜನಾಂಗದವರು ಪಾಲಕಿಯಲ್ಲಿ ಬಿರುದಾವಳಿ,ಮಂಗಳವಾದ್ಯದ ಮೂಲಕ ಮೆರವಣಿಗೆಯಲ್ಲಿ ಶ್ರೀ ದೇವಳಕ್ಕೆ ತಂದರು. ಶ್ರೀದೇವಳಕ್ಕೆ ಪ್ರದಕ್ಷಿಣೆ ಬಂದು ದೇವಳದಿಂದ ಕಾಶಿಕಟ್ಟೆಗೆ ಉತ್ಸವವು ತೆರಳಿತು. ಬಳಿಕ ರಥಬೀದಿಯಿಂದ ಕಾಶಿಕಟ್ಟೆ ತನಕ ಶ್ರೀ ದೇವರ ಉತ್ಸವದ ಸಂದರ್ಭದಲ್ಲಿ ಅಲ್ಲಲ್ಲಿ ಕಂಬದಲ್ಲಿ ಕಟ್ಟಿದ್ದ ಮೊಸರು ತುಂಬಿದ ಕುಡಿಕೆಗಳನ್ನು ಮಹಿಳೆಯರು ಒಡೆದು ಜನ್ಮಾಷ್ಠಮಿಯನ್ನು ಆಚರಿಸಿದರು.ಅಂತಿಮವಾಗಿ ಕಾಶಿಕಟ್ಟೆಯಲ್ಲಿ ಇರಿಸಿದ್ದ ಮೊಸರಿನ ಗಡಿಗೆಗಳನ್ನು ಒಡೆಯಲಾಯಿತು. ನಂತರ ಕಾಶಿಕಟ್ಟೆಯಲ್ಲಿ ಭಗವಾನ್ ಶ್ರೀಕೃಷ್ಣನಿಗೆ ಮಹಾಪೂಜೆ ನೆರವೇರಿತು.
ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಪೇಟ್ಲೆ ಬೆಡಿ ಅತ್ಯಂತ ಪ್ರಮುಖವಾದುದ್ದಾಗಿದೆ. ಸುಬ್ರಹ್ಮಣ್ಯದಲ್ಲಿ ನಡೆದ ಉತ್ಸವದಲ್ಲಿ ಹಿರಿಯರು ಕಿರಿಯರೆನ್ನದೆ ಪೇಟ್ಲೆ ಬೆಡಿಯ ಆಟವಾಡಿ ರಂಜಿಸಿದರು. ಮಕ್ಕಳು ಮತ್ತು ಹಿರಿಯರು ಪೇಟ್ಲೆ ಬೆಡಿಯನ್ನು ಬಿಟ್ಟು ಸಂಭ್ರಮಿಸಿದರು. ಕಾವಟೆಮರದ ಗೆಲ್ಲುಗಳಿಂದ ತಯಾರಿಸಿದ ಪೇಟ್ಲೆ ಬೆಡಿಯನ್ನು ಪ್ರಾಚೀನತೆಯ ಸಂಕೇತವಾಗಿ ಒಡೆದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…