ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅನೇಕ ವರ್ಷಗಳಿಂದ ಇದ್ದ ಬ್ರಹ್ಮರಥದ ಜಾಗದಲ್ಲಿ ಈಗ ನೂತನ ಬ್ರಹ್ಮರಥ ಇರಿಸಲಾಯಿತು. ಇದುವರೆಗೆ ಇದ್ದ ಹಳೆಯ ಬ್ರಹ್ಮರಥವನ್ನು ಸವಾರಿ ಮಂಟಪದ ಬಳಿ ಇಡುವ ಕಾರ್ಯ ನಡೆಯುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಹಲವಾರು ವರ್ಷಗಳಿಂದ ಚಂಪಾಷ್ಠಿ ಸಂದರ್ಭ ಎಳೆಯಲಾಗುವ ಬ್ರಹ್ಮರಥ ದೇಶದಲ್ಲೇ ಅತ್ಯಂತ ವಿಶಿಷ್ಠ ಎನಿಸಿದೆ. ಇದೀಗ ನೂತನ ಬ್ರಹ್ಮರಥ ನಿರ್ಮಾಣದ ಬಳಿಕ ಕೋಟೇಶ್ವರದಿಂದ ವಿಜೃಂಭಣೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತರಲಾಗಿತ್ತು. ಈ ಬಾರಿಯ ಚಂಪಾ ಷಷ್ಠಿಗೆ ನೂತನ ಬ್ರಹ್ಮರಥ ಎಳೆಯಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಹಳೆಯ ಬ್ರಹ್ಮರಥ ತೆರವು ಕಾರ್ಯ ಮಂಗಳವಾರ ಕ್ರೇನ್ ಮೂಲಕ ನಡೆಯಿತು. ಹಳೆಯ ಬ್ರಹ್ಮರಥವನ್ನು ಸದ್ಯ ಸವಾರಿ ಮಂಟಪದ ಬಳಿ ಇರಿಸಲಾಗುತ್ತಿದೆ. ಮುಂದೆ ಆದಿ ಸುಬ್ರಹ್ಮಣ್ಯಕ್ಕೆ ತೆರಳುವ ರಸ್ತೆ ಬದಿ ಭಕ್ತಾದಿಗಳಿಗೆ ಕಾಣುವಂತೆ ಇರಿಸಬೇಕು ಎಂಬುದು ಭಕ್ತಾದಿಗಳ ಬೇಡಿಕೆಯಾಗಿದೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…