ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅನೇಕ ವರ್ಷಗಳಿಂದ ಇದ್ದ ಬ್ರಹ್ಮರಥದ ಜಾಗದಲ್ಲಿ ಈಗ ನೂತನ ಬ್ರಹ್ಮರಥ ಇರಿಸಲಾಯಿತು. ಇದುವರೆಗೆ ಇದ್ದ ಹಳೆಯ ಬ್ರಹ್ಮರಥವನ್ನು ಸವಾರಿ ಮಂಟಪದ ಬಳಿ ಇಡುವ ಕಾರ್ಯ ನಡೆಯುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಹಲವಾರು ವರ್ಷಗಳಿಂದ ಚಂಪಾಷ್ಠಿ ಸಂದರ್ಭ ಎಳೆಯಲಾಗುವ ಬ್ರಹ್ಮರಥ ದೇಶದಲ್ಲೇ ಅತ್ಯಂತ ವಿಶಿಷ್ಠ ಎನಿಸಿದೆ. ಇದೀಗ ನೂತನ ಬ್ರಹ್ಮರಥ ನಿರ್ಮಾಣದ ಬಳಿಕ ಕೋಟೇಶ್ವರದಿಂದ ವಿಜೃಂಭಣೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತರಲಾಗಿತ್ತು. ಈ ಬಾರಿಯ ಚಂಪಾ ಷಷ್ಠಿಗೆ ನೂತನ ಬ್ರಹ್ಮರಥ ಎಳೆಯಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಹಳೆಯ ಬ್ರಹ್ಮರಥ ತೆರವು ಕಾರ್ಯ ಮಂಗಳವಾರ ಕ್ರೇನ್ ಮೂಲಕ ನಡೆಯಿತು. ಹಳೆಯ ಬ್ರಹ್ಮರಥವನ್ನು ಸದ್ಯ ಸವಾರಿ ಮಂಟಪದ ಬಳಿ ಇರಿಸಲಾಗುತ್ತಿದೆ. ಮುಂದೆ ಆದಿ ಸುಬ್ರಹ್ಮಣ್ಯಕ್ಕೆ ತೆರಳುವ ರಸ್ತೆ ಬದಿ ಭಕ್ತಾದಿಗಳಿಗೆ ಕಾಣುವಂತೆ ಇರಿಸಬೇಕು ಎಂಬುದು ಭಕ್ತಾದಿಗಳ ಬೇಡಿಕೆಯಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…