MIRROR FOCUS

ಕುಡಿಯುವ ನೀರು ಸರಬರಾಜಿಗೆ ಪಯಸ್ವಿನಿಯಲ್ಲಿ ತಾತ್ಕಾಲಿಕ ಕಟ್ಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಬೇಸಿಗೆ ಉರಿ ಏರುತ್ತಿದ್ದಂತೆ ಎಲ್ಲೆಡೆ ನೀರಿನ ಹರಿವು ಮತ್ತು ಲಭ್ಯತೆ ಕಡಿಮೆಯಾಗುತ್ತಿದೆ. ಸುಳ್ಯಕ್ಕೆ ನೀರುಣಿಸುವ ಪಯಸ್ವಿನಿ ನದಿಯಲ್ಲಿಯೂ ನೀರಿನ ಹರಿವು ಕಡಿಮೆಯಾಗಿದೆ. ಈ ಹಿನ್ನಲೆಯಲ್ಲಿ ಸುಳ್ಯ ನಗರಕ್ಕೆ ನೀರು ಸರಬರಾಜು ಮಾಡಲು ನಗರ ಪಂಚಾಯಿತಿ ವತಿಯಿಂದ ಪಯಸ್ವಿನಿ ನದಿಯಲ್ಲಿ ತಾತ್ಕಾಲಿಕ ಕಟ್ಟ ನಿರ್ಮಿಸಲಾಗಿದೆ.

Advertisement
Advertisement

ಮರಳು ತುಂಬಿದ ಚೀಲ ಬಳಸಿ ನಗರಕ್ಕೆ ನೀರು ಸರಬರಾಜು ಮಾಡಲು ನದಿಯಿಂದ ನೀರೆತ್ತುವ ಕಲ್ಲುಮುಟ್ಲುವಿನಲ್ಲಿ ಕಟ್ಟ ನಿರ್ಮಿಸಲಾಗಿದೆ. ಬೇಸಿಗೆಯಲ್ಲಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗುವ ಸಂದರ್ಭದಲ್ಲಿ ಪ್ರತಿ ವರ್ಷವೂ ಈ ರೀತಿ ಮರಳಿನ ಕಟ್ಟ ನಿರ್ಮಿಸಲಾಗುತ್ತದೆ. ಪಂಪ್ ಮೂಲಕ ನೀರೆತ್ತುವ ಪಯಸ್ವಿನಿ ನದಿಯ ಹೊಂಡದ ಕೆಳಗೆ ಪಯಸ್ವಿನಿ ನದಿಗೆ ಅಡ್ಡಲಾಗಿ ಸುಮಾರು 150 ಮೀಟರ್ ಉದ್ದಕ್ಕೆ ಮರಳಿನ ಕಟ್ಟ ನಿರ್ಮಿಸಲಾಗಿದೆ. ಹೊಂಡದಲ್ಲಿ ತುಂಬಿದ ಹೂಳು ಮತ್ತು ಮರಳನ್ನು ತೆಗೆದು ಬಳಿಕ ಕಟ್ಟ ನಿರ್ಮಿಸಲಾಗಿದೆ.

ಕಲ್ಲುಮುಟ್ಲುವಿನ ಪಂಪ್ ಹೌಸ್‍ನಿಂದ 50 ಹೆಚ್‍ಪಿಯ ಎರಡು ಮತ್ತು 45 ಹೆಚ್‍ಪಿಯ ಒಂದು ಪಂಪ್‍ನ ಮೂಲಕ ನೀರೆತ್ತಲಾಗುತ್ತದೆ. ಪ್ರತಿ ವರ್ಷವೂ ನದಿಯ ಹೊಂಡದ ಹೂಳೆತ್ತಿ ಕಟ್ಟ ನಿರ್ಮಿಸಲು ಸುಮಾರು ನಾಲ್ಕರಿಂದ 5 ಲಕ್ಷ ರೂ ವೆಚ್ಚ ತಗುಲುತ್ತದೆ. ನಗರಕ್ಕೆ ಕುಡಿಯುವ ನೀರಿನ ಸರಬರಾಜಿಗೆ ಶಾಶ್ವತ ಯೋಜನೆ ರೂಪಿಸಬೇಕೆಂಬುದು ಸುಮಾರು ಎರಡು ದಶಕಗಳ ಬೇಡಿಕೆಯಾಗಿದೆ. ಕಿಂಡಿ ಅಣೆಕಟ್ಟು ನಿರ್ಮಿಸಲು ಸುಮಾರು 18 ವರ್ಷಗಳ ಹಿಂದೆಯ ಯೋಜನೆ ರೂಪಿಸಲಾಗಿದ್ದರೂ ಅದು ಕೈಗೂಡಿಲ್ಲ. ಸುಳ್ಯ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ 65 ಕೋಟಿಯ ಯೋಜನೆ ತಯಾರಿಸಿ ಕೆಲವು ವರ್ಷಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಸಮರ್ಪಿಸಲಾಗಿದೆ. ಆದರೆ ಅದು ಇನ್ನೂ ಅಂತಿಮಗೊಂಡಿಲ್ಲ. ಹೀಗೆ ಸುಳ್ಯ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಕೈಗೂಡದ ಕಾರಣ ಪ್ರತಿ ವರ್ಷವೂ ತಾತ್ಕಾಲಿಕ ಕಟ್ಟ ನಿರ್ಮಿಸುವುದು ಅನಿವಾರ್ಯವಾಗಿದೆ.

45 ಕೊಳವೆ ಬಾವಿಗಳು: ಪಯಸ್ವಿನಿ ನದಿಯಿಂದ ನೀರೆತ್ತಿ ಸರಬರಾಜು ಮಾಡುವುದಲ್ಲದೆ 45 ಕೊಳವೆ ಬಾವಿಗಳ ಮೂಲಕವೂ ಸುಳ್ಯ ನಗರಕ್ಕೆ ನೀರು ಸರಬರಾಜಾಗುತ್ತದೆ. ಸುಳ್ಯ ನಗರದ 20 ವಾರ್ಡ್‍ಗಳಲ್ಲಿ ವಾಣೀಜ್ಯ ಸಂಸ್ಥೆಗಳು, ಮನೆಗಳು ಸೇರಿ ಒಟ್ಟು 5,240 ಇದೆ. ಇದರಲ್ಲಿ 4,020ಕ್ಕೆ ನಗರ ಪಂಚಾಯಿತಿಯ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ನದಿಗೆ ಅಡ್ಡಲಾಗಿ ಕಟ್ಟ ನಿರ್ಮಿಸುವುದರ ಜೊತೆಗೆ ಹೊಸ ಕೊಳವೆ ಬಾವಿಗಳನ್ನು ಕೊರೆದು ಹಳೆಯ ಕೊಳವೆ ಬಾವಿಗಳನ್ನು ನವೀಕರಿಸಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಲು ಸಿದ್ಧತೆ ನಡೆಸಲಾಗಿದೆ ಎಂದು ನಗರ ಪಂಚಾಯಿತಿ ಇಂಜಿನಿಯರ್ ಶಿವಕುಮಾರ್ ತಿಳಿಸಿದ್ದಾರೆ. ಬೇಸಿಗೆ ಆರಂಭವಾದೊಡನೆ ನೀರಿನ ಲಭ್ಯತೆ ಕಡಿಮೆಯಗುತ್ತಿದ್ದು ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಎರಡು ದಿನಕ್ಕೊಮ್ಮೆ ನೀರು ಸರಬರಾಜು ಮಾಡುವ ಸ್ಥಿತಿ ಬರಬಹುದು ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

7 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

7 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

10 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

10 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

10 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago