Advertisement
MIRROR FOCUS

ಕುಡಿಯುವ ನೀರು ಸರಬರಾಜಿಗೆ ಪಯಸ್ವಿನಿಯಲ್ಲಿ ತಾತ್ಕಾಲಿಕ ಕಟ್ಟ

Share

ಸುಳ್ಯ: ಬೇಸಿಗೆ ಉರಿ ಏರುತ್ತಿದ್ದಂತೆ ಎಲ್ಲೆಡೆ ನೀರಿನ ಹರಿವು ಮತ್ತು ಲಭ್ಯತೆ ಕಡಿಮೆಯಾಗುತ್ತಿದೆ. ಸುಳ್ಯಕ್ಕೆ ನೀರುಣಿಸುವ ಪಯಸ್ವಿನಿ ನದಿಯಲ್ಲಿಯೂ ನೀರಿನ ಹರಿವು ಕಡಿಮೆಯಾಗಿದೆ. ಈ ಹಿನ್ನಲೆಯಲ್ಲಿ ಸುಳ್ಯ ನಗರಕ್ಕೆ ನೀರು ಸರಬರಾಜು ಮಾಡಲು ನಗರ ಪಂಚಾಯಿತಿ ವತಿಯಿಂದ ಪಯಸ್ವಿನಿ ನದಿಯಲ್ಲಿ ತಾತ್ಕಾಲಿಕ ಕಟ್ಟ ನಿರ್ಮಿಸಲಾಗಿದೆ.

ಮರಳು ತುಂಬಿದ ಚೀಲ ಬಳಸಿ ನಗರಕ್ಕೆ ನೀರು ಸರಬರಾಜು ಮಾಡಲು ನದಿಯಿಂದ ನೀರೆತ್ತುವ ಕಲ್ಲುಮುಟ್ಲುವಿನಲ್ಲಿ ಕಟ್ಟ ನಿರ್ಮಿಸಲಾಗಿದೆ. ಬೇಸಿಗೆಯಲ್ಲಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗುವ ಸಂದರ್ಭದಲ್ಲಿ ಪ್ರತಿ ವರ್ಷವೂ ಈ ರೀತಿ ಮರಳಿನ ಕಟ್ಟ ನಿರ್ಮಿಸಲಾಗುತ್ತದೆ. ಪಂಪ್ ಮೂಲಕ ನೀರೆತ್ತುವ ಪಯಸ್ವಿನಿ ನದಿಯ ಹೊಂಡದ ಕೆಳಗೆ ಪಯಸ್ವಿನಿ ನದಿಗೆ ಅಡ್ಡಲಾಗಿ ಸುಮಾರು 150 ಮೀಟರ್ ಉದ್ದಕ್ಕೆ ಮರಳಿನ ಕಟ್ಟ ನಿರ್ಮಿಸಲಾಗಿದೆ. ಹೊಂಡದಲ್ಲಿ ತುಂಬಿದ ಹೂಳು ಮತ್ತು ಮರಳನ್ನು ತೆಗೆದು ಬಳಿಕ ಕಟ್ಟ ನಿರ್ಮಿಸಲಾಗಿದೆ.

ಕಲ್ಲುಮುಟ್ಲುವಿನ ಪಂಪ್ ಹೌಸ್‍ನಿಂದ 50 ಹೆಚ್‍ಪಿಯ ಎರಡು ಮತ್ತು 45 ಹೆಚ್‍ಪಿಯ ಒಂದು ಪಂಪ್‍ನ ಮೂಲಕ ನೀರೆತ್ತಲಾಗುತ್ತದೆ. ಪ್ರತಿ ವರ್ಷವೂ ನದಿಯ ಹೊಂಡದ ಹೂಳೆತ್ತಿ ಕಟ್ಟ ನಿರ್ಮಿಸಲು ಸುಮಾರು ನಾಲ್ಕರಿಂದ 5 ಲಕ್ಷ ರೂ ವೆಚ್ಚ ತಗುಲುತ್ತದೆ. ನಗರಕ್ಕೆ ಕುಡಿಯುವ ನೀರಿನ ಸರಬರಾಜಿಗೆ ಶಾಶ್ವತ ಯೋಜನೆ ರೂಪಿಸಬೇಕೆಂಬುದು ಸುಮಾರು ಎರಡು ದಶಕಗಳ ಬೇಡಿಕೆಯಾಗಿದೆ. ಕಿಂಡಿ ಅಣೆಕಟ್ಟು ನಿರ್ಮಿಸಲು ಸುಮಾರು 18 ವರ್ಷಗಳ ಹಿಂದೆಯ ಯೋಜನೆ ರೂಪಿಸಲಾಗಿದ್ದರೂ ಅದು ಕೈಗೂಡಿಲ್ಲ. ಸುಳ್ಯ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ 65 ಕೋಟಿಯ ಯೋಜನೆ ತಯಾರಿಸಿ ಕೆಲವು ವರ್ಷಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಸಮರ್ಪಿಸಲಾಗಿದೆ. ಆದರೆ ಅದು ಇನ್ನೂ ಅಂತಿಮಗೊಂಡಿಲ್ಲ. ಹೀಗೆ ಸುಳ್ಯ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಕೈಗೂಡದ ಕಾರಣ ಪ್ರತಿ ವರ್ಷವೂ ತಾತ್ಕಾಲಿಕ ಕಟ್ಟ ನಿರ್ಮಿಸುವುದು ಅನಿವಾರ್ಯವಾಗಿದೆ.

45 ಕೊಳವೆ ಬಾವಿಗಳು: ಪಯಸ್ವಿನಿ ನದಿಯಿಂದ ನೀರೆತ್ತಿ ಸರಬರಾಜು ಮಾಡುವುದಲ್ಲದೆ 45 ಕೊಳವೆ ಬಾವಿಗಳ ಮೂಲಕವೂ ಸುಳ್ಯ ನಗರಕ್ಕೆ ನೀರು ಸರಬರಾಜಾಗುತ್ತದೆ. ಸುಳ್ಯ ನಗರದ 20 ವಾರ್ಡ್‍ಗಳಲ್ಲಿ ವಾಣೀಜ್ಯ ಸಂಸ್ಥೆಗಳು, ಮನೆಗಳು ಸೇರಿ ಒಟ್ಟು 5,240 ಇದೆ. ಇದರಲ್ಲಿ 4,020ಕ್ಕೆ ನಗರ ಪಂಚಾಯಿತಿಯ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ನದಿಗೆ ಅಡ್ಡಲಾಗಿ ಕಟ್ಟ ನಿರ್ಮಿಸುವುದರ ಜೊತೆಗೆ ಹೊಸ ಕೊಳವೆ ಬಾವಿಗಳನ್ನು ಕೊರೆದು ಹಳೆಯ ಕೊಳವೆ ಬಾವಿಗಳನ್ನು ನವೀಕರಿಸಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಲು ಸಿದ್ಧತೆ ನಡೆಸಲಾಗಿದೆ ಎಂದು ನಗರ ಪಂಚಾಯಿತಿ ಇಂಜಿನಿಯರ್ ಶಿವಕುಮಾರ್ ತಿಳಿಸಿದ್ದಾರೆ. ಬೇಸಿಗೆ ಆರಂಭವಾದೊಡನೆ ನೀರಿನ ಲಭ್ಯತೆ ಕಡಿಮೆಯಗುತ್ತಿದ್ದು ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಎರಡು ದಿನಕ್ಕೊಮ್ಮೆ ನೀರು ಸರಬರಾಜು ಮಾಡುವ ಸ್ಥಿತಿ ಬರಬಹುದು ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

14 minutes ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

6 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

7 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

15 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

17 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

23 hours ago