Advertisement
MIRROR FOCUS

ಕುಡಿಯುವ ನೀರು ಸರಬರಾಜಿಗೆ ಪಯಸ್ವಿನಿಯಲ್ಲಿ ತಾತ್ಕಾಲಿಕ ಕಟ್ಟ

Share

ಸುಳ್ಯ: ಬೇಸಿಗೆ ಉರಿ ಏರುತ್ತಿದ್ದಂತೆ ಎಲ್ಲೆಡೆ ನೀರಿನ ಹರಿವು ಮತ್ತು ಲಭ್ಯತೆ ಕಡಿಮೆಯಾಗುತ್ತಿದೆ. ಸುಳ್ಯಕ್ಕೆ ನೀರುಣಿಸುವ ಪಯಸ್ವಿನಿ ನದಿಯಲ್ಲಿಯೂ ನೀರಿನ ಹರಿವು ಕಡಿಮೆಯಾಗಿದೆ. ಈ ಹಿನ್ನಲೆಯಲ್ಲಿ ಸುಳ್ಯ ನಗರಕ್ಕೆ ನೀರು ಸರಬರಾಜು ಮಾಡಲು ನಗರ ಪಂಚಾಯಿತಿ ವತಿಯಿಂದ ಪಯಸ್ವಿನಿ ನದಿಯಲ್ಲಿ ತಾತ್ಕಾಲಿಕ ಕಟ್ಟ ನಿರ್ಮಿಸಲಾಗಿದೆ.

ಮರಳು ತುಂಬಿದ ಚೀಲ ಬಳಸಿ ನಗರಕ್ಕೆ ನೀರು ಸರಬರಾಜು ಮಾಡಲು ನದಿಯಿಂದ ನೀರೆತ್ತುವ ಕಲ್ಲುಮುಟ್ಲುವಿನಲ್ಲಿ ಕಟ್ಟ ನಿರ್ಮಿಸಲಾಗಿದೆ. ಬೇಸಿಗೆಯಲ್ಲಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗುವ ಸಂದರ್ಭದಲ್ಲಿ ಪ್ರತಿ ವರ್ಷವೂ ಈ ರೀತಿ ಮರಳಿನ ಕಟ್ಟ ನಿರ್ಮಿಸಲಾಗುತ್ತದೆ. ಪಂಪ್ ಮೂಲಕ ನೀರೆತ್ತುವ ಪಯಸ್ವಿನಿ ನದಿಯ ಹೊಂಡದ ಕೆಳಗೆ ಪಯಸ್ವಿನಿ ನದಿಗೆ ಅಡ್ಡಲಾಗಿ ಸುಮಾರು 150 ಮೀಟರ್ ಉದ್ದಕ್ಕೆ ಮರಳಿನ ಕಟ್ಟ ನಿರ್ಮಿಸಲಾಗಿದೆ. ಹೊಂಡದಲ್ಲಿ ತುಂಬಿದ ಹೂಳು ಮತ್ತು ಮರಳನ್ನು ತೆಗೆದು ಬಳಿಕ ಕಟ್ಟ ನಿರ್ಮಿಸಲಾಗಿದೆ.

ಕಲ್ಲುಮುಟ್ಲುವಿನ ಪಂಪ್ ಹೌಸ್‍ನಿಂದ 50 ಹೆಚ್‍ಪಿಯ ಎರಡು ಮತ್ತು 45 ಹೆಚ್‍ಪಿಯ ಒಂದು ಪಂಪ್‍ನ ಮೂಲಕ ನೀರೆತ್ತಲಾಗುತ್ತದೆ. ಪ್ರತಿ ವರ್ಷವೂ ನದಿಯ ಹೊಂಡದ ಹೂಳೆತ್ತಿ ಕಟ್ಟ ನಿರ್ಮಿಸಲು ಸುಮಾರು ನಾಲ್ಕರಿಂದ 5 ಲಕ್ಷ ರೂ ವೆಚ್ಚ ತಗುಲುತ್ತದೆ. ನಗರಕ್ಕೆ ಕುಡಿಯುವ ನೀರಿನ ಸರಬರಾಜಿಗೆ ಶಾಶ್ವತ ಯೋಜನೆ ರೂಪಿಸಬೇಕೆಂಬುದು ಸುಮಾರು ಎರಡು ದಶಕಗಳ ಬೇಡಿಕೆಯಾಗಿದೆ. ಕಿಂಡಿ ಅಣೆಕಟ್ಟು ನಿರ್ಮಿಸಲು ಸುಮಾರು 18 ವರ್ಷಗಳ ಹಿಂದೆಯ ಯೋಜನೆ ರೂಪಿಸಲಾಗಿದ್ದರೂ ಅದು ಕೈಗೂಡಿಲ್ಲ. ಸುಳ್ಯ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ 65 ಕೋಟಿಯ ಯೋಜನೆ ತಯಾರಿಸಿ ಕೆಲವು ವರ್ಷಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಸಮರ್ಪಿಸಲಾಗಿದೆ. ಆದರೆ ಅದು ಇನ್ನೂ ಅಂತಿಮಗೊಂಡಿಲ್ಲ. ಹೀಗೆ ಸುಳ್ಯ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಕೈಗೂಡದ ಕಾರಣ ಪ್ರತಿ ವರ್ಷವೂ ತಾತ್ಕಾಲಿಕ ಕಟ್ಟ ನಿರ್ಮಿಸುವುದು ಅನಿವಾರ್ಯವಾಗಿದೆ.

45 ಕೊಳವೆ ಬಾವಿಗಳು: ಪಯಸ್ವಿನಿ ನದಿಯಿಂದ ನೀರೆತ್ತಿ ಸರಬರಾಜು ಮಾಡುವುದಲ್ಲದೆ 45 ಕೊಳವೆ ಬಾವಿಗಳ ಮೂಲಕವೂ ಸುಳ್ಯ ನಗರಕ್ಕೆ ನೀರು ಸರಬರಾಜಾಗುತ್ತದೆ. ಸುಳ್ಯ ನಗರದ 20 ವಾರ್ಡ್‍ಗಳಲ್ಲಿ ವಾಣೀಜ್ಯ ಸಂಸ್ಥೆಗಳು, ಮನೆಗಳು ಸೇರಿ ಒಟ್ಟು 5,240 ಇದೆ. ಇದರಲ್ಲಿ 4,020ಕ್ಕೆ ನಗರ ಪಂಚಾಯಿತಿಯ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ನದಿಗೆ ಅಡ್ಡಲಾಗಿ ಕಟ್ಟ ನಿರ್ಮಿಸುವುದರ ಜೊತೆಗೆ ಹೊಸ ಕೊಳವೆ ಬಾವಿಗಳನ್ನು ಕೊರೆದು ಹಳೆಯ ಕೊಳವೆ ಬಾವಿಗಳನ್ನು ನವೀಕರಿಸಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಲು ಸಿದ್ಧತೆ ನಡೆಸಲಾಗಿದೆ ಎಂದು ನಗರ ಪಂಚಾಯಿತಿ ಇಂಜಿನಿಯರ್ ಶಿವಕುಮಾರ್ ತಿಳಿಸಿದ್ದಾರೆ. ಬೇಸಿಗೆ ಆರಂಭವಾದೊಡನೆ ನೀರಿನ ಲಭ್ಯತೆ ಕಡಿಮೆಯಗುತ್ತಿದ್ದು ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಎರಡು ದಿನಕ್ಕೊಮ್ಮೆ ನೀರು ಸರಬರಾಜು ಮಾಡುವ ಸ್ಥಿತಿ ಬರಬಹುದು ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

2 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

4 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

11 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

13 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

19 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago