Advertisement
ಸುದ್ದಿಗಳು

ಕುದ್ಲೂರಿನಲ್ಲಿ ಶಾಹ್ ಉಸ್ತಾದ್ ಅನುಸ್ಮರಣೆ

Share

ಕುದ್ಲೂರು: ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿ ಹಾಗೂ SKSSF ಶಾಖೆ ವತಿಯಿಂದ ಕುದ್ಲೂರಿನಲ್ಲಿ ಶಾಹ್ ಉಸ್ತಾದ್ ಅನುಸ್ಮರಣೆ  ನಡೆಯಿತು.

ಮುಬಾರಕ್ ಜುಮಾ ಮಸೀದಿ ಕುದ್ಲೂರು ಹಾಗೂ ಎಸ್.ಕೆ.ಎಸ್.ಎಸ್.ಎಫ್ ಕುದ್ಲೂರು ಶಾಖೆ ಇದರ ಜಂಟಿ ಆಶ್ರಯದಲ್ಲಿ ಮಸೀದಿಯ ಸ್ಥಾಪಿತ ಕಾಲದಿಂದ ಗೌರವಾಧ್ಯಕ್ಷರಾಗಿದ್ದ ಉಸ್ತಾದ್ ಡಾ.ಶಾಹ್ ಮುಸ್ಲಿಯಾರ್ ಅನುಸ್ಮರಣಾ ಸಂಗಮ ಜಮಾಅತ್ ಅಧ್ಯಕ್ಷ ಅಬ್ದುರ್ರಹ್ಮಾನ್ ಮರ್ವೇಲು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಆತೂರು ಮುದರ್ರಿಸ್ ಸಯ್ಯಿದ್ ಜುನೈದ್ ಜಿಫ್ರಿ ತಂಙಳ್ ಸಭೆಯನ್ನು ಉದ್ಘಾಟಿಸಿ ಉಸ್ತಾದರಜೀವನ ಶೈಲಿ ಜನರನ್ನು ಒಳಿತಿನೆಡೆಗೆ ಹಾಗೂ ಮರಣ ಸ್ಮರಣೆಗೆ ಸೆಳೆಯುತ್ತಿದೆ ಎಂದು ಹೇಳಿದರು.

ಮುಖ್ಯ ಭಾಷಣ ಮಾಡಿದ ಕುಂತೂರು ಬೇಳ್ಪಾಡಿ ಎ  ಬಿ ಜುಮಾ ಮಸೀದಿ ಖತೀಬ್ ಮಜೀದ್ ದಾರಿಮಿ ಇಬಾದತ್ ಯಾವ ರೀತಿಯಾಗಬೇಕೆಂದು ಸ್ಮರಣೆಗೆ ಹೇತುವಾಗಲು ಏನೆಲ್ಲಾ ಮಾಡಬೇಕೆಂದು ತನ್ನ ಜೀವನ ಶೈಲಿಯಿಂದ ಉಸ್ತಾದ್ ತೋರಿಸಿಕೊಟ್ಟಿದ್ದರೆಂದು ಅಭಿಪ್ರಾಯಪಟ್ಟರು. ನಂತರ ಮಾಜಿ ಖತೀಬ್ ನಿಯಾಝ್ ಫೈಝಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮದ್ರಸ ಅಧ್ಯಾಪಕರಾದ ಮುಹಮ್ಮದ್ ಮುಸ್ಲಿಯಾರ್ ಕೋಲ್ಪೆ ಸಹಿತ ಹಲವು ಉಲಮಾಗಳು ಜಮಾಅತ್ ಕಮಿಟಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕೆ.ವೈ ಕೋಶಾಧಿಕಾರಿ ಅಬ್ದುಲ್ ಖಾದರ್ ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಅಶ್ರಫ್ ಕೊರೆಪದವು ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಕೋಶಾಧಿಕಾರಿ ನಝೀರ್ ಮೌಲವಿ ಮುಂತಾದ ಊರ ಗಣ್ಯರು ಉಪಸ್ಥಿತರಿದ್ದರು.

ಜುನೈದ್ ಜಿಫ್ರಿ ತಂಙಳ್ ಆತೂರು ನೇತೃತ್ವದಲ್ಲಿ ಧಿಕ್ರ್ ದುಆ ಮಜ್ಲಿಸ್ ನಡೆಯಿತು. ಸಂಗಮದಲ್ಲಿ ಸ್ಥಳೀಯ ಖತೀಬ್ ಅಶ್ರಫ್ ರಹ್ಮಾನಿ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

31 seconds ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

18 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

24 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

24 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

24 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

24 hours ago