Advertisement
ಸುದ್ದಿಗಳು

ಕುಮಾರಪರ್ವತ ಚಾರಣದ ವೇಳೆ ಯುವಕ ನಾಪತ್ತೆ ಪ್ರಕರಣ : ಗಿರಿಗದ್ದೆ ಬಳಿ ಹುಡುಕಾಟ

Share

ಸುಬ್ರಹ್ಮಣ್ಯ: ಕುಮಾರಪರ್ವತ ಚಾರಣಕ್ಕೆ ಹೋದ 12 ಜನ  ಯುವಕರ ತಂಡದಲ್ಲಿದ್ದ ಬೆಂಗಳೂರಿನ ಖಾಸಗಿ ಉದ್ಯೋಗಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ 25 ವರ್ಷದ ಯುವಕ ಸಂತೋಷ್  ಭಾನುವಾರ ಸಂಜೆ ನಾಪತ್ತೆಯಾಗಿದ್ದಾರೆ. ಇದೀಗ ಹುಡುಕಾಟ ಆರಂಭವಾಗಿದ್ದು ಗಿರಿಗದ್ದೆ ಬಳಿ 9 ಜನರ ತಂಡ ಹುಡುಕಾಟ ನಡೆಸುತ್ತಿದೆ.

ಬೆಂಗಳೂರಿನ 12 ಜನರ ಚಾರಣಿಗರ ತಂಡವು ಶನಿವಾರ ಬೆಳಗ್ಗೆ ಸುಬ್ರಹ್ಮಣ್ಯದಿಂದ ಕುಮಾರಪರ್ವತಕ್ಕೆ ಚಾರಣ ಬೆಳೆಸಿ ರಾತ್ರಿ ಗಿರಿಗದ್ದೆಯಲ್ಲಿ  ವಾಸ್ತವ್ಯ ಹೂಡಿ ಭಾನುವಾರ ಬೆಳಗ್ಗೆ ಕುಮಾರಪರ್ವತ ಏರಿತ್ತು. ಮಧ್ಯಾಹ್ನದ ನಂತರ ವಾಪಾಸು ಗಿರಿಗದ್ದೆಗೆ ಬಂದು ಸಂಜೆ ಸುಬ್ರಹ್ಮಣ್ಯದ ಕಡೆಗೆ ಪ್ರಯಾಣ ಬೆಳೆಸಿತ್ತು.  ಮಳೆ ಸುರಿದ ಹಿನ್ನೆಲೆಯಲ್ಲಿ  ಜಾಕೆಟ್ ಬದಲಿಸಲೆಂದು ನಿಂತಿದ್ದ ಸಂತೋಷ್ ಬಳಿಕ ಪತ್ತೆಯಾಗಲಿಲ್ಲ ಎಂದು ತಂಡದ ಸದಸ್ಯರು ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ಬೆಳ್ಳಾರೆ ,ಸುಳ್ಯ , ಸುಬ್ರಹ್ಮಣ್ಯ ಹಾಗೂ ಪುತ್ತೂರು ಪೊಲೀಸರ ತಂಡ ಹಾಗೂ ಅರಣ್ಯ ಇಲಾಖೆಯ ಸಿಬಂದಿಗಳ ತಂಡ ಪರ್ವತದ ವಿವಿಧ ಕಡೆಗಳಲ್ಲಿ  ಹುಡುಕಾಟ ಆರಂಭಿಸಿದೆ. ಇದುವರೆಗೆ ಯಾವುದೇ ಸುಳಿವು ಪತ್ತೆಯಾಗಿಲ್ಲ.

ಇದೀಗ ಒಂದು ತಂಡ ಗಿರಿಗದ್ದೆ ಬಳಿ ಹುಡುಕಾಟ ನಡೆಸುತ್ತಿದೆ. 9 ಜನರ ತಂಡ ಇಲ್ಲಿದೆ. ಈ ತಂಡದಲ್ಲಿ  ಪುತ್ತೂರು ಎಸ್ ಐ ರಾಜ್ ಕುಮಾರ್ , ಸುಬ್ರಹ್ಮಣ್ಯ ಠಾಣೆಯ  ತಾರನಾಥ್ , ಸಂಪ್ಯ ಪೊಲೀಸ್ ಠಾಣೆಯ ಕಾನ್ಟೇಬಲ್ ಗಳು ಹಾಗೂ ಸ್ಥಳೀಯರಾದ ಸುಬ್ರಹ್ಮಣ್ಯ ಗ್ರಾಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ, ಸಂಪತ್, ಜಯಪ್ರಕಾಶ್ ಸೇರಿದಂತೆ ಸ್ಥಳೀಯರು ಜೊತೆಗಿದ್ದಾರೆ.

ಬೆಳಗ್ಗಿನಿಂದ 5 ತಂಡಗಳಲ್ಲಿ ಹುಡುಕಾಟ ಆರಂಭವಾಗಿದೆ. ಪುತ್ತೂರು ಡಿ.ವೈ.ಎಸ್.ಪಿ ದಿನಕರ ಶೆಟ್ಟಿ,  ಬೆಳ್ಳಾರೆಯ ಎಸ್.ಐ ಈರಯ್ಯ, ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ಸತೀಶ್ ಕುಮಾರ್, ಸುಬ್ರಹ್ಮಣ್ಯ ಎ.ಎಸ್.ಐ ಚಂದಪ್ಪ, ಎಸ್.ಐ.ಹರೀಶ್ , ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದಲ್ಲಿ ಹುಡುಕಾಟ ನಡೆಯುತ್ತಿದೆ. ಚಾರಣ ನಡೆಸಿದ ಯುವಕರ ತಂಡ ಸುಬ್ರಹ್ಮಣ್ಯದಲ್ಲಿ ಹಾಗೂ ಕೆಲವು ಯುವಕರು ಹುಡುಕಾಟಕ್ಕಾಗಿ ಜೊತೆಯಲ್ಲಿ ತೆರಳಿದ್ದಾರೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

10 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

18 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

19 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

20 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago