ಸುಬ್ರಹ್ಮಣ್ಯ: ಕುಮಾರಪರ್ವತ ಚಾರಣ ಹೋದ ಯುವಕರ ತಂಡದಲ್ಲಿದ್ದ ಒಬ್ಬ ಯುವಕ ನಾಪತ್ತೆಯಾಗಿದ್ದಾನೆ. ಒಟ್ಟು 12 ಜನರ ತಂಡ ಕುಮಾರ ಪರ್ವತಕ್ಕೆ ಚಾರಣ ಬೆಳೆಸಿತ್ತು. ಈ ತಂಡದಲ್ಲಿದ್ದ ಬೆಂಗಳೂರಿನ ಖಾಸಗಿ ಉದ್ಯೋಗಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ 25 ವರ್ಷದ ಯುವಕ ಸಂತೋಷ್ ಭಾನುವಾರ ಸಂಜೆ ನಾಪತ್ತೆಯಾಗಿದ್ದಾರೆ. ಇದೀಗ ಹುಡುಕಾಟ ಆರಂಭವಾಗಿದೆ. ನಾಳೆ ಬೆಳಗ್ಗೆ ಪೊಲೀಸ್ ಹಾಗೂ ಅರಣ್ಯ ಇಲಾಖಾ ಅಧಿಕಾರಿಗಳ 5 ತಂಡ ಹುಡುಕಾಟ ನಡೆಸಲಿದೆ.
ಬೆಂಗಳೂರಿನ 12 ಜನರ ಚಾರಣಿಗರ ತಂಡವು ಶನಿವಾರ ಬೆಳಗ್ಗೆ ಸುಬ್ರಹ್ಮಣ್ಯದಿಂದ ಕುಮಾರಪರ್ವತಕ್ಕೆ ಚಾರಣ ಬೆಳೆಸಿ ರಾತ್ರಿ ಗಿರಿಗದ್ದೆಯಲ್ಲಿ ವಾಸ್ತವ್ಯ ಹೂಡಿ ಭಾನುವಾರ ಬೆಳಗ್ಗೆ ಕುಮಾರಪರ್ವತ ಏರಿತ್ತು. ಮಧ್ಯಾಹ್ನದ ನಂತರ ವಾಪಾಸು ಗಿರಿಗದ್ದೆಗೆ ಬಂದು ಸಂಜೆ ಸುಬ್ರಹ್ಮಣ್ಯದ ಕಡೆಗೆ ಪ್ರಯಾಣ ಬೆಳೆಸಿತ್ತು. 12 ಜನರ ತಂಡದಲ್ಲಿದ್ದವರು ಸುಸ್ತಾದ್ದರಿಂದ ತಂಡ ತಂಡವಾಗಿ ನಡೆದುಕೊಂಡು ಬರುತ್ತಿದ್ದರು. 5 ಮಂದಿ ಮುಂದೆ ಹಾಗೂ ಆ ನಂತರ 6 ಜನ ಹಾಗೂ ನಡುವೆ ನಾಪತ್ತೆಯಾದ ಸಂತೋಷ್ ಒಬ್ಬರೇ ಬರುತ್ತಿದ್ದರು. ಈ ಸಂದರ್ಭ ಸಂತೋಷ್ ಹೇಗೆ ನಾಪತ್ತೆಯಾದರು ಎನ್ನುವುದು ಕುತೂಹಲ ಮೂಡಿಸಿದೆ. ಸೋಮವಾರ ಬೆಳಗ್ಗೆ ನಾಪತ್ತೆಯಾದ ಯುವಕನ ಪತ್ತೆಗೆ ಪ್ರಯತ್ನ ನಡೆಸಲಾಗಿದೆ. ಸಂಜೆಯವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಾಣೆಯಾದ ವ್ಯಕ್ತಿಯ ಪತ್ತೆಯ ನಿಮಿತ್ತ ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ 5 ತಂಡಗಳು ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಕಾರ್ಯಚರಣೆ ಪ್ರಾರಂಭಿಸಲಿದೆ.
ಬೆಂಗಳೂರು ಕಾಳಿಕಾ ನಗರ ನಿವಾಸಿ ದರ್ಶನ್ ನೀಡಿದ ದೂರಿನಂತೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…