Advertisement
MIRROR FOCUS

ಕುಮಾರಪರ್ವತ ಟ್ರಕ್ಕಿಂಗ್ ಮಾಡುವವರಿಗೆ ಬೇಕು ಸರಿಯಾದ ಮಾಹಿತಿ….

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೇ ಕೆಲವು ಟ್ರಕ್ಕಿಂಗ್ ಜಾಗಗಳು ಇವೆ. ಇದರಲ್ಲಿ ಕುಮಾರಪರ್ವತವೂ ಒಂದು. ಆದರೆ ಕುಮಾರಪರ್ವತಕ್ಕೆ ಟ್ರಕ್ಕಿಂಗ್ ಮಾಡಲು ಮಳೆಗಾಲದ ಅವಧಿ ಸೂಕ್ತವಲ್ಲ. ಈಗಂತೂ ಭಾರೀ ಮಳೆ ಹಾಗೂ ಗುಡ್ಡ ಕುಸಿದತಂಹ ಸಂದರ್ಭಗಳು ಹೆಚ್ಚಾಗುತ್ತಿರುವ ಕಾರಣದಿಂದ ಚಾರಣಿಗರಿಗೆ ಸೂಕ್ತ ಮಾಹಿತಿ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಹೇಳಬೇಕಿದೆ….


ಚಾರಣ, ಟ್ರಕ್ಕಿಂಗ್ ಎಂದರೆ ಯುವಕರಿಗೆ ಮಾತ್ರವಲ್ಲ ಹಲವಾರು ಮಂದಿಗೆ ಆಸಕ್ತಿ. ಯುವಕರು ಮುಂಚೂಣಿಯಲ್ಲಿದ್ದರೆ ವಯಸ್ಕರೂ ಆಸಕ್ತಿಯಿಂದ ಭಾಗವಹಿಸುತ್ತಾರೆ. ಏಕೆಂದರೆ ಚಾರಣ ನೀಡುವ ಖುಷಿ ಅಂತಹದ್ದು. ಪರಿಸರದ ನಡುವೆ ಓಡಾಡುತ್ತಾ ಸುಂದರ ದೃಶ್ಯಗಳು ಮನಸ್ಸಿಗೆ ಆಹ್ಲಾದ ನೀಡುತ್ತದೆ.  ರಾಜ್ಯದ ಹಲವು ಕಡೆ ಟ್ರಕ್ಕಿಂಗ್ ಸ್ಫಾಟ್ ಇದೆ. ಇಲ್ಲಿ ಹಸಿರಿನಿಂದ ಕೂಡಿದ ಕಾಡು-ಮೇಡು, ನದಿ, ಝರಿ, ಗುಡ್ಡ ,ಪರ್ವತ, ಕಣಿವೆ, ಶಿಖರಗಳು ಸೆಳೆಯುತ್ತವೆ.  ಕೆಲವು ಜನರು ಟ್ರಕ್ಕಿಂಗ್ ಅನ್ನು ಒಂದು ಹವ್ಯಾಸವಾಗಿ ರೂಢಿಸಿಕೊಂಡು ಆಗಾಗ್ಗೆ ಕಾಡು ಮೇಡು ಅಲೆಯುತ್ತಿರುತಾರೆ. ಹೀಗಾಗಿ ಚಾರಣ ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಸಂದರ್ಭದಲ್ಲಿ ಸ್ಥಳೀಯವಾಗಿ ಮಾಹಿತಿ ಇಲ್ಲದೆ ಅಲೆದಾಟ ಮಾಡಬೇಕಾದ ಸ್ಥಿತಿ ಬರುತ್ತದೆ. ಇದಕ್ಕಾಗಿ ಸೂಕ್ತ ಮಾಹಿತಿ ಅಗತ್ಯವಾಗಿದೆ.

ಅನುಮತಿ ಪಡೆದೇ ಚಾರಣ ಮಾಡಬೇಕು. ಅದಕ್ಕೆ ಒಂದಷ್ಟು ಸಿದ್ದತೆ ಮುಖ್ಯ. ನಡೆಯುವ ಅಭ್ಯಾಸ ಇಲ್ಲದಿರುವವರು ಚಾರಣಕ್ಕೆ ಹೋಗುವ ಮುನ್ನ ನಡೆಯುವ ಅಭ್ಯಾಸ ಇಟ್ಟುಕೊಂಡರೆ ಚಾರಣ ಮಾಡುವುದಕ್ಕೆ ಅನುಕೂಲ. ಟ್ರಕ್ಕಿಂಗ್ ಬ್ಯಾಗ್, ಷೂ, ವಾಟರ್ ಬಾಟಲ್ ,ಟಾರ್ಚ್, ಟಿ ಷರ್ಟ್ ಬರ್ಮುಡ ಚಡ್ಡಿ , ಕ್ಯಾಪ್ ಬೇಕಾದ ಸಾಮಾಗ್ರಿಗಳು ರಾತ್ರಿ ಟೆಂಟ್ ವ್ಯವಸ್ಥೆ ಇದ್ದರೆ ಅದಕ್ಕೆ ಒಂದಷ್ಟು ವಸ್ತುಗಳು ಬೇಕು.ಟ್ರಕ್ಕಿಂಗ್ ಗೈಡ್ ಪೂರ್ವ ಸಿದ್ಧತೆ ಬಗ್ಗೆ ತಿಳಿಸುತ್ತಾರೆ. ಇದರ ಜೊತೆಗೆ ಅತೀ ಮುಖ್ಯವಾಗಿ ಟ್ರಕ್ಕಿಂಕ್ ವೇಳೆ ದಾರಿ ತಪ್ಪಿದರೆ ಹೇಗೆ ವಾಪಾಸ್ ನಗರಕ್ಕೆ ಬರಬೇಕು ಎಂಬುದೂ ಟ್ರಕ್ಕಿಂಗ್ ಮಾಡುವವರಿಗೆ ತಿಳಿದಿರಬೇಕಾದ್ದು ಅಗತ್ಯ.

( ಆನ್ ಲೈನ್ ಮಾಹಿತಿಗಳು )

ಕುಮಾರಪರ್ವತದ ಚಾರಣ ಮಾಡಿದ ಮಂದಿಗೂ ಆದದ್ದು ಇದೇ ಸಮಸ್ಯೆ. ಟ್ರಕ್ಕಿಂಗ್ ಮಾಡಿದ ಖುಷಿಗಿಂತಲೂ ಜೊತೆಗಾರ ನಾಪತ್ತೆಯಾದ್ದೇ ದೊಡ್ಡ ತಲೆನೋವಾಯಿತು. ಕೊನೆಗೆ ಸುರಕ್ಷಿತವಾಗಿ ನಾಡು ಸೇರಿದಾಗ ಖುಷಿಯೂ ಆಗಿತ್ತು. ಕುಮಾರಪರ್ವತ ಚಾರಣ ಈ ಸಮಯದಲ್ಲಿ  ಅಷ್ಟೊಂದು ಸೂಕ್ತವಲ್ಲ. ಮಳೆ ಜೋರಾದ ಸಂದರ್ಭ ಗಿರಿಗದ್ದೆ ನಂತರದ ಪ್ರದೇಶದಲ್ಲಿ ಸರಿಯಾದ ದಾರಿಗಳು ಸಿಗುವುದು ಕಷ್ಟ. ಕಾಡು ಬೆಳೆದಿರುತ್ತದೆ, ಹಾವುಗಳಿಂದ ತೊಡಗಿ ಕೀಟಗಳು ಹೆಚ್ಚಾಗಿ ಇರುತ್ತದೆ. ಇನ್ನೊಂದು ಪ್ರಮುಖವಾದ ಅಂಶವೆಂದರೆ ಈಗ ಭಾರೀ ಮಳೆಯ ಕಾರಣದಿಂದ ಗುಡ್ಡ ಕುಸಿತದಂತಹ ಘಟನೆಗಳು ನಡೆಯುತ್ತಿರುತ್ತದೆ. ಹೀಗಾಗಿ ಸುರಕ್ಷತೆಯ ಕಾರಣದಿಂದ ನವೆಂಬರ್ ನಂತರವೇ ಕುಮಾರಪರ್ವತ ಚಾರಣ ಸೂಕ್ತವಾಗಿದೆ. ಗಿರಿಗದ್ದೆಯವರೆಗೆ ಯಾವುದೇ ಸಮಸ್ಯೆ ಇಲ್ಲ. ಆ ನಂತರದ ದಾರಿ ಕ್ಲಿಷ್ಟವಾಗಿದೆ.

ಕೆಲವು ಸಂಸ್ಥೆಗಳೂ ಕುಮಾರಪರ್ವತ ಟ್ರಕ್ಕಿಂಗ್ ಆಯೋಜನೆ ಮಾಡುತ್ತವೆ. ಅವುಗಳು ಜೂನ್ ತಿಂಗಳಿನಿಂದ ಸೆಪ್ಟಂಬರ್ ವರೆಗೆ ಸೂಕ್ತ ಸಮಯ ಎಂದು ಹೇಳುತ್ತವೆ. ಹೀಗಾಗಿ ಇದನ್ನೇ ನಂಬಿ ಕೆಲವು ತಾವೇ ತಂಡ ಮಾಡಿಕೊಂಡು ಇದೇ ಸಮಯದಲ್ಲಿ ಬಂದು ಸಿಕ್ಕಿಹಾಕಿಕೊಳ್ಳುತ್ತಾರೆ. ಮೊನ್ನೆ ಕುಮಾರಪರ್ವತ ಚಾರಣ ಮಾಡಿರುವ ಮಂದಿ ಯಾವುದೇ ಅಡ್ಡಿ ಇಲ್ಲದೆ ಚಾರಣ ಮಾಡಿ ಬಂದಿದ್ದಾರೆ. ಆದರೆ ಗಿರಿಗದ್ದೆ ಬಳಿಕ ಬೆಟ್ಟ ಇಳಿಯುವ ಸಂದರ್ಭ ಭಾರೀ ಮಳೆ ಸುರಿಯಿತು. ಹೀಗಾಗಿ  ಜಾಕೆಟ್ ಬದಲಾವಣೆ ಮಾಡುವ ವೇಳೆ ಸ್ವಲ್ಪ ಹಿಂದೆಯಾದ ಯುವಕ ದಾರಿಯಲ್ಲಿ ಬರುವಾಗ ಎರಡು ದಾರಿ ಕಂಡಿತು. ಒಂದು ಚೆನ್ನಾದ ದಾರಿಯಾಗಿತ್ತು ಇನ್ನೊಂದು ಸವೆಯದ ದಾರಿ ಇತ್ತು. ಯುವಕ ಸವೆದ ದಾರಿಯಲ್ಲಿ ಬಂದಾಗ ಮರಬಿದ್ದಿತ್ತು ಎಂದು ಹಿಂದೆ ಹೋಗಿ ಮತ್ತೊಂದು ದಾರಿಯಲ್ಲಿ ಹೋದಾಗ ದಾರಿ ತಪ್ಪಿ ಬೇರೆ ಕಡೆಗೆ ಇಳಿಯಬೇಕಾಯಿತು. ಬಂಡೆಕಲ್ಲುಗಳ ಮೇಲೆ ರಾತ್ರಿ ಕಳೆದು ನೀರಿನ ಮೂಲ ಹಿಡಿದು ಅದೇ ದಾರಿಯಲ್ಲಿ ಬಂದು ಸುಬ್ರಹ್ಮಣ್ಯ ತಲಪಿದ. ಆಹಾರದ ಬದಲಿಗೆ ನೀರು ಕುಡಿಯಲು ಸಾಧ್ಯವಾಯಿತು. ಇಲ್ಲಿ ಮಳೆಯ ಕಾರಣದಿಂದ ದಾರಿ ತಪ್ಪಲು ಕಾರಣವಾಯಿತು. ಈ ಕಾರಣದಿಂದ ಮುಂದೆ ಚಾರಣಿಗರಿಗೆ ಕುಮಾರಪರ್ವತ ಏರಲು ಸೂಕ್ತ ಸಮಯ ಯಾವುದು ಎಂಬುದರ ಬಗ್ಗೆ ಮಾಹಿತಿ ನೀಡಿದರೆ ಉತ್ತಮವಾಗಿರುತ್ತದೆ. ಸಂಕಷ್ಟಗಳು, ಆತಂಕಗಗಳು ದೂರವಾಗುತ್ತವೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

10 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago