ಸುಬ್ರಹ್ಮಣ್ಯ : ವಇಂದಿನ ಮಕ್ಕಳು ದೇಶದ ಭವಿಷ್ಯದ ನಾಯಕರಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಸಂಸತ್ ಪ್ರಯೋಜನಕಾರಿ. ಆಡಳಿತ ಪಕ್ಷದ ಜವಾಬ್ದಾರಿ ಮತ್ತು ವಿರೋಧ ಪಕ್ಷದ ಕರ್ತವ್ಯದ ಪ್ರಜ್ಞೆ ವಿದ್ಯಾರ್ಥಿಗಳು ಅರಿಯಬೇಕಿದೆ ಎಂದು ಯುವ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಹೇಳಿದರು.
ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ನಡೆದ ನೂತನ ವಿದ್ಯಾರ್ಥಿ ಸರಕಾರದ ಉದ್ಘಾಟನೆ, ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಪಾಲ್ಗೊಂಡು ಮಾತನಾಡಿದರು.
ಮುಖ್ಯ ಶಿಕ್ಷಕಿ ವಿದ್ಯಾರತ್ನ ಪ್ರತಿಜ್ಞಾವಿಧಿ ಬೋಧಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಚಂದ್ರಶೇಖರ್ ನಾಯರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಸುಮಂತ್ ರೈ ಸ್ವಾಗತಿಸಿ, ಕೃತಿ ಎಂ.ಜಿ ವಂದಿಸಿದರು. ಸ್ಮೃ ತಿ ಜಿ.ಕೆ. ಕಾರ್ಯಕ್ರಮ ನಿರೂಪಿಸಿದರು.
ಮುಖ್ಯ ಮಂತ್ರಿಯಾಗಿ ಪ್ರಾರ್ಥನ್ ಎಸ್ ಜಿ , ಉಪ ಮುಖ್ಯಮಂತ್ರಿಯಾಗಿ ಅಧಿತಿ ಕೆ ಕೆ ಹಾಗೂ ವಿವಿಧ ಖಾತೆಯ ಮಂತ್ರಿಗಳಾಗಿ ಪ್ರಥಮೇಶ್ ಕಾಮತ್ , ಸುಬ್ರಹ್ಮಣ್ಯ ಜಿ , ಶಿಶಾಂತ್ , ನಿಹಾಲ್ , ಸಾಗರಿಕ , ನಿಶಾನ್ , ರಿಯಾ ಜಾನಿ ಪ್ರಮಾಣ ವಚನ ಸ್ವೀಕರಿಸಿದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…