ಸುಬ್ರಹ್ಮಣ್ಯ : ವಇಂದಿನ ಮಕ್ಕಳು ದೇಶದ ಭವಿಷ್ಯದ ನಾಯಕರಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಸಂಸತ್ ಪ್ರಯೋಜನಕಾರಿ. ಆಡಳಿತ ಪಕ್ಷದ ಜವಾಬ್ದಾರಿ ಮತ್ತು ವಿರೋಧ ಪಕ್ಷದ ಕರ್ತವ್ಯದ ಪ್ರಜ್ಞೆ ವಿದ್ಯಾರ್ಥಿಗಳು ಅರಿಯಬೇಕಿದೆ ಎಂದು ಯುವ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಹೇಳಿದರು.
ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ನಡೆದ ನೂತನ ವಿದ್ಯಾರ್ಥಿ ಸರಕಾರದ ಉದ್ಘಾಟನೆ, ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಪಾಲ್ಗೊಂಡು ಮಾತನಾಡಿದರು.
ಮುಖ್ಯ ಶಿಕ್ಷಕಿ ವಿದ್ಯಾರತ್ನ ಪ್ರತಿಜ್ಞಾವಿಧಿ ಬೋಧಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಚಂದ್ರಶೇಖರ್ ನಾಯರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಸುಮಂತ್ ರೈ ಸ್ವಾಗತಿಸಿ, ಕೃತಿ ಎಂ.ಜಿ ವಂದಿಸಿದರು. ಸ್ಮೃ ತಿ ಜಿ.ಕೆ. ಕಾರ್ಯಕ್ರಮ ನಿರೂಪಿಸಿದರು.
ಮುಖ್ಯ ಮಂತ್ರಿಯಾಗಿ ಪ್ರಾರ್ಥನ್ ಎಸ್ ಜಿ , ಉಪ ಮುಖ್ಯಮಂತ್ರಿಯಾಗಿ ಅಧಿತಿ ಕೆ ಕೆ ಹಾಗೂ ವಿವಿಧ ಖಾತೆಯ ಮಂತ್ರಿಗಳಾಗಿ ಪ್ರಥಮೇಶ್ ಕಾಮತ್ , ಸುಬ್ರಹ್ಮಣ್ಯ ಜಿ , ಶಿಶಾಂತ್ , ನಿಹಾಲ್ , ಸಾಗರಿಕ , ನಿಶಾನ್ , ರಿಯಾ ಜಾನಿ ಪ್ರಮಾಣ ವಚನ ಸ್ವೀಕರಿಸಿದರು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…