ಸುಬ್ರಹ್ಮಣ್ಯ : ವಇಂದಿನ ಮಕ್ಕಳು ದೇಶದ ಭವಿಷ್ಯದ ನಾಯಕರಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಸಂಸತ್ ಪ್ರಯೋಜನಕಾರಿ. ಆಡಳಿತ ಪಕ್ಷದ ಜವಾಬ್ದಾರಿ ಮತ್ತು ವಿರೋಧ ಪಕ್ಷದ ಕರ್ತವ್ಯದ ಪ್ರಜ್ಞೆ ವಿದ್ಯಾರ್ಥಿಗಳು ಅರಿಯಬೇಕಿದೆ ಎಂದು ಯುವ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಹೇಳಿದರು.
ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ನಡೆದ ನೂತನ ವಿದ್ಯಾರ್ಥಿ ಸರಕಾರದ ಉದ್ಘಾಟನೆ, ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಪಾಲ್ಗೊಂಡು ಮಾತನಾಡಿದರು.
ಮುಖ್ಯ ಶಿಕ್ಷಕಿ ವಿದ್ಯಾರತ್ನ ಪ್ರತಿಜ್ಞಾವಿಧಿ ಬೋಧಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಚಂದ್ರಶೇಖರ್ ನಾಯರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಸುಮಂತ್ ರೈ ಸ್ವಾಗತಿಸಿ, ಕೃತಿ ಎಂ.ಜಿ ವಂದಿಸಿದರು. ಸ್ಮೃ ತಿ ಜಿ.ಕೆ. ಕಾರ್ಯಕ್ರಮ ನಿರೂಪಿಸಿದರು.
ಮುಖ್ಯ ಮಂತ್ರಿಯಾಗಿ ಪ್ರಾರ್ಥನ್ ಎಸ್ ಜಿ , ಉಪ ಮುಖ್ಯಮಂತ್ರಿಯಾಗಿ ಅಧಿತಿ ಕೆ ಕೆ ಹಾಗೂ ವಿವಿಧ ಖಾತೆಯ ಮಂತ್ರಿಗಳಾಗಿ ಪ್ರಥಮೇಶ್ ಕಾಮತ್ , ಸುಬ್ರಹ್ಮಣ್ಯ ಜಿ , ಶಿಶಾಂತ್ , ನಿಹಾಲ್ , ಸಾಗರಿಕ , ನಿಶಾನ್ , ರಿಯಾ ಜಾನಿ ಪ್ರಮಾಣ ವಚನ ಸ್ವೀಕರಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…