Advertisement
ಯಕ್ಷಗಾನ : ಮಾತು-ಮಸೆತ

‘ಕುಮಾರ’ ಶಬ್ದದ ಅರ್ಥವೇನು? ವೇದಾಂತಿಗಳು ಹೇಳುತ್ತಾರೆ……

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶೂರಪದ್ಮ’)
ಪ್ರಸಂಗ : ಕುಮಾರ ವಿಜಯ

Advertisement
Advertisement

(ಸಂದರ್ಭ : ಷಣ್ಮುಖ ಮತ್ತು ಶೂರಪದ್ಮ ಯುದ್ಧದ ಸನ್ನಿವೇಶ. ಕೊನೆಗೆ ಷಣ್ಮುಖನು ವಿಶ್ವರೂಪ ತೋರಿಸಿದಾಗ)

“.. ಒಳಗಣ್ಣಿನಿಂದ ನೋಡಿದೆ.. ಈ ಪ್ರಪಂಚದಲ್ಲಿ ‘ಆದಿ-ಮಧ್ಯ-ಅಂತ್ಯ’ ಇಲ್ಲದೇ ಇದ್ದ ಶುದ್ಧ ಚೇತನವಿದು. ಶಕ್ತಿಯಿದು. ಅದಕ್ಕೆ ಹೆಸರಿಲ್ಲ, ರೂಪವಿಲ್ಲ. ಎಷ್ಟು ನಾಮಪದಗಳಿವೆ, ಎಷ್ಟು ರೂಪ ವಿನ್ಯಾಸಗಳಿವೆ. ಅವೆಲ್ಲವೂ ಇದೆ. ಶಾಸ್ತ್ರ ಓದಿದ್ದೇನೆ. ಅಧ್ಯಯನ ಮಾಡಿದ್ದು ಮಾತ್ರವಲ್ಲ, ಸಾಧನೆ ಮಾಡಿದ್ದೇನೆ. ತಪಸ್ಸನ್ನಾಚರಿಸಿದ್ದೇನೆ. ಆಮೇಲೆ ಪ್ರವೃತ್ತಿಯಲ್ಲಿ ಅಸುರನಾಗಿ ದುಡಿದಿದ್ದೇನೆ. ಈಗ ಸತ್ಯವನ್ನು ಕಂಡೆ. ಯಾವ ಬ್ರಹ್ಮದಿಂದ ಸಿಡಿದು ಶಬ್ದ, ಸ್ಪರ್ಶ, ರೂಪ, ರಸ, ಗಂಧ ಮೊದಲಾದ ಮೂಲದ್ರವ್ಯಗಳು ವಿಕಾಸಗೊಂಡು ’ಪ್ರಪಂಚ’ ಅನ್ನಿಸಿತು. ‘ಕೂರ್ಮ’ ಅರ್ಥಾತ್ ಆಮೆ. ಇದು ಜಲದಲ್ಲೇ ಇರುತ್ತದೆ. ಇದಕ್ಕೆ ಈಜಬೇಕು ಅಂತ ತೋರಿದಾಗ ಒಂದೊಂದು ಅವಯವಗಳನ್ನು ತನ್ನ ಚಿಪ್ಪಿನಿಂದ ಹೊರ ಚಾಚುತ್ತದೆ. ಸಾಕು ಅಂತ ತೋರಿದಾಗ ಒಂದೊಂದೇ ಅವಯವಗಳನ್ನು ಒಳಗೆ ಎಳೆದುಕೊಳ್ಳುತ್ತದೆ. ಈ ಆಮೆಯ ಅವಯವಗಳನ್ನು ತನ್ನ ತಪಸ್ಸಿನಿಂದ, ಆತ್ಮವರ್ಚಸ್ಸಿನಿಂದ ನನ್ನ ನಿಯಂತ್ರಣಕ್ಕೆ ತಂದುಕೊಂಡಿದ್ದೇನೆ. ಆದ ಕಾರಣ ಕಾಣುವವರ ಕಣ್ಣಿಗೆ ಇದು ಕಾಣಿಸಲಿಲ್ಲ. ಆದರೆ ಇವನಿಗೆ ಕಂಡೀತಲ್ಲ. ನಾನು ಈ ಪ್ರಪಂಚವನ್ನು ಚಿದಾಕಾಶದಲ್ಲಿ ನಿಂತು ವಿಸ್ತಾರಗೊಳಿಸಿದುದನ್ನು ಇವನು ಹೀರುತ್ತಾ ಇದ್ದಾನೆ. ಸಾವಿರ ಮುಖಗಳು, ಸಾವಿರ ಬಾಹುಗಳು, ಸಾವಿರ ಮುಖಗಳಲ್ಲಿ ಸಾವಿರ ಭಾವಗಳು, ಸಾವಿರ ಭಾವಗಳಲ್ಲಿ ಸಾವಿರ ಕೃತಿಗಳು. ಇದಲ್ಲವೇ ಪರಮಾತ್ಮನ ಪ್ರಪಂಚ ವ್ಯಾಪಾರ, ವ್ಯವಹಾರ. ಇದು ವಿಶ್ವರ ರೂಪ…. ಕುಮಾರ……

‘ಕುಮಾರ’ ಶಬ್ದದ ಅರ್ಥವೇನು? ವೇದಾಂತಿಗಳು ಹೇಳುತ್ತಾರೆ, ಇದು ಸದಾ ಕೌಮಾರ, ಬಾಲ್ಯವಿಲ್ಲ. ಬಾಲ್ಯ ಇದ್ದರೆ ಹುಡುಗಾಟಿಕೆಯಾಗುತ್ತದೆ. ಆ ಕೌಮಾರ ದಾಟಿದರೆ ಯೌವನ ಬಂದು ಇತರ ಇಂದ್ರಿಯ ದಾಹಗಳು ಹುಟ್ಟಿಕೊಳ್ಳುತ್ತಾವೆ. ಆವಾಗ ಭೋಗಾಸಕ್ತಿಯಿಂದ ಒಂದು ಎರಡಾಗುತ್ತದೆ. ಎರಡು ಹನ್ನೆರಡಾಗುತ್ತದೆ, ಅನಂತವಾಗುತ್ತದೆ. ಹಾಗೆನೇ ಕುಮಾರ ಕೌಮಾರ ಆದ ಕಾರಣವೇ ಸುಬ್ರಹ್ಮಣ್ಯ ಬ್ರಹ್ಮಣ್ಯ. ಅಂದರೆ ಬ್ರಹ್ಮ ತೇಜಸ್ಸು. ಇದಕ್ಕೆ ‘ಸು’ ವಿಶೇಷಣ ಹಚ್ಚಿದರೆ ಅದರಿಂದಾಚೆ ಬ್ರಾಹ್ಮಣ್ಯವಿಲ್ಲ.

ಅಗ್ನಿ ಅಂದರೆ ಜ್ಞಾನ. ಉರಿಯುವ ಬೇಂಕಿಯು ಪಾಪ, ಪುಣ್ಯ ಎಲ್ಲವನ್ನು ಸುಟ್ಟುಬಿಡುತ್ತದೆ. ದ್ರವ್ಯವನ್ನು ಕಾಣಿಸದೆ ಎಲ್ಲವನ್ನು ಹಿಡಿ ಬೂದಿಯಾಗಿಸುತ್ತದೆ. ಆದ ಕಾರಣವೇ ಬ್ರಹ್ಮಣ್ಯ ಸುಬ್ರಹ್ಮಣ್ಯ. ಇವನ ಹುಟ್ಟು ಅಗ್ನಿಯಲ್ಲಿ. ಎದ್ದು ಬಂದುದು ಶರಜನ್ಮ. ಅದು ದರ್ಭೆಹುಲ್ಲು. ದರ್ಭೆ ಎನ್ನುವುದು ನಮ್ಮ ಸನಾತನ ಕರ್ಮಕಾಂಡದಲ್ಲಿ ಬಿಡಲಾಗದೆ ಇದ್ದಂತಹ ಒಂದು ಹುಲ್ಲು. ಬ್ರಹ್ಮಚಾರಿಗೆ ಮುಂಚೆ ಹಲ್ಲು. ಹಾಗಾಗಿ ಶರವಣ, ಭವ, ಗುರು, ಗುಹ, ಸುಬ್ರಹ್ಮಣ್ಯ.. ಆಹಾ ಇವನ ಮುಂದೆ ನನ್ನ ಮಾಯೆ ಅಗದ್ದು ಮಾತ್ರವಲ್ಲ, ನಾನೇ ಅಡಗಿಬಿಟ್ಟೆ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

8 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago