ಸುದ್ದಿಗಳು

ಕುರುಂಜಿಯವರ ದೃಷ್ಟಿಕೋನ ಗಾಂಧಿ ಪ್ರೇರಿತ – ಅರವಿಂದ ಚೊಕ್ಕಾಡಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ಸಾಮಾನ್ಯ ರೈತ ಕುಟುಂಬವೊಂದರಿಂದ ಬಂದ ವೆಂಕಟ್ರಮಣ ಗೌಡರು ಕಂಡ ಕನಸುಗಳು ನನಸಾದ ಬಗೆಯೇ ರೋಚಕತೆಯನ್ನು ಉದ್ದೀಪಿಸಿ ಬಿಡುತ್ತದೆ. ಅವರ ದೃಷ್ಟಿಕೋನ ಗಾಂಧಿ ಪ್ರೇರಿತ. ಅದು ಧಾರ್ಮಿಕ ಕಾಠಿಣ್ಯದ ಧೋರಣೆಯದ್ದಲ್ಲ: ಧರ್ಮನಿರಪೇಕ್ಷೆಯದ್ದೂ ಅಲ್ಲದ ಧರ್ಮದ ಮೂಲಕವೇ ಆದ ಲಿಬರಲ್ ಆಲೋಚನೆಗಳಿಂದಾದುದು. ಅವರದ್ದು ಆಕಾಡೆಮಿ ಆಫ್ ಲಿಬರಲ್ ಪರಿಕಲ್ಪನೆಯ ಸಂಸ್ಥೆಗಳೇ ಇದಕ್ಕೆ ಸಾಕ್ಷಿಯಾಗಿವೆ ಎಂದು ಬರಹಗಾರ, ಚಿಂತಕ ಅವಿಂದ ಚೊಕ್ಕಾಡಿ ಹೇಳಿದರು.

Advertisement
Advertisement

ಅವರು ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘ, ವಿದ್ಯಾರ್ಥಿಸಂಘ ಮತ್ತು ಸಾಹಿತ್ಯ ಪರಿಷತ್ತು ತಾಲೂಕು ಘಟಕ ಸುಳ್ಯ ಸಹಯೋಗದಲ್ಲಿ ಆದಿ ಚುಂಚನಗಿರಿ ವಿಶ್ವ ವಿದ್ಯಾನಿಲಯ ಪ್ರಕಟಿಸಿರುವ ಡಾ. ಪೂವಪ್ಪ ಕಣಿಯೂರು ಬರೆದ ‘ಸಲ್ಲಕ್ಷಣದ ಕೈ-ಕುರುಂಜಿ ವೆಂಕಟರಮಣ ಗೌಡ’ ಕೃತಿಯನ್ನು ಕಾಲೇಜಿನ ಸಭಾಂಗಣದಲ್ಲಿ ಬಿಡುಗಡೆ ಸಮಾರಂಭದಲ್ಲಿ ಕೃತಿಪರಿಚಯ ಮಾಡಿದರು. ಸಲ್ಲಕ್ಷಣದ ಕೈ ಕುರುಂಜಿ ವೆಂಕಟರಮಣ ಗೌಡ ಎನ್ನುವ ಕೃತಿ ಶೀರ್ಷಿಕೆಯೆ ಗೌಡರ ಇಡೀ ವ್ಯಕ್ತಿತ್ವಕ್ಕೆ ಕೈ ಕನ್ನಡಿಯಾಗಿದೆ.ಇಲ್ಲಿ ಕೃತಿಗಾರ ಪೂವಪ್ಪ ಕಣಿಯೂರರು ಗೌಡರ ಜೀವನ ಚರಿತ್ರೆಗಿಂತ ಹೆಚ್ಚಾಗಿ ಅವರ ವ್ಯಕ್ತಿತ್ವದ ಚಿತ್ರಣವನ್ನು ಯಾವುದೇ ಭಾವುಕತೆ ಇಲ್ಲದೆ ಕೃತಿಯ ಪರಿಧಿಯಲ್ಲಿ ನಿಂತು ನಿರ್ಲಿಪ್ತವಾಗಿ, ಅತ್ಯಂತ ಸೊಗಸಾದ ಸಾಹಿತ್ಯಕ ಭಾಷೆಯಲ್ಲಿ ಕಟ್ಟಿಕೊಟ್ಟಿದ್ದಾರೆ.ಈ ಕೃತಿ ಒಂದು ನುಡಿ ಚಿತ್ರದಂತೆ ಗೌಡರನ್ನು ಕಣ್ಣೆದುರು ನಿಲ್ಲಿಸಿ ಅವರ ಬಹುರೂಪಿಯಾದ ಶೈಕ್ಷಣಿಕ, ಸಾಮಾಜಿಕ,ಸಾಂಸ್ಕೃತಿಕ, ಧಾರ್ಮಿಕ ಮುಖಗಳನ್ನುಆಪ್ತವಾಗಿ ಕಟ್ಟಿಕೊಡುತ್ತದೆ ಎಂದರು.

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ)ಸುಳ್ಯ ಇದರ ನಿರ್ದೇಶಕ ಡಾ.ಕುರುಂಜಿಯವರ ಮೊಮ್ಮಗ ಅಕ್ಷಯ್ ಕೆ.ಸಿಯವರು ಕೃತಿ ಬಿಡುಗಡೆಗೊಳಿಸಿ,ತಾತನೊಂದಿಗೆ ತಾನು ಬಾಲ್ಯದ ದಿನಗಳಲ್ಲಿ ಪಡೆದ ಅವಿಸ್ಮರಣಿಯ ನೆನಪುಗಳನ್ನುಮೆಲುಕು ಹಾಕಿದರು. ನನ್ನ ತಾತನವರಲ್ಲಿ ಸರಳ ಜೀವನದ ಕೆಲ ಸೂತ್ರಗಳಿದುವು ಜೊತೆಗೆ ಉನ್ನತವಾದ ಆದರ್ಶಗಳಿದ್ದುವು.ಅವರಲ್ಲಿದ್ದ ಸೂಪರ್ ನ್ಯಾಚುರಲ್ ಶಕ್ತಿ ನನ್ನನ್ನು ಬೆರಗುಗೊಳಿಸುತ್ತಿತ್ತು.ಆ ಶಕ್ತಿಯೇ ಇಂದೂ ನನಗೆ ಪ್ರೇರಣೆಯಾಗಿದೆಯೆಂದು ನೆನಪು ಮಾಡಿಕೊಂಡರು.

ಕೃತಿಕಾರರಾದ ಪ್ರಾಧ್ಯಾಪಕ ಡಾ.ಪೂವಪ್ಪ ಕಣಿಯೂರು ಅವರು ಈ ಕೃತಿಯನ್ನು ನಾನು ಭಿನ್ನ ಕಾರಣಗಳ ಒತ್ತಡದಿಂದಲೇ ಬರೆದಿದ್ದೇನೆ. ಬರೆಯುವ ಸಂದರ್ಭದಲ್ಲಿ ಇಂದು ಇಲ್ಲದಿರುವ ಕುರುಂಜಿಯವರನ್ನು ನಾನು ನನ್ನ ಅಂತ:ಪಟಲದಲ್ಲಿ ಪ್ರತ್ಯಕ್ಷ ದರ್ಶಿಸಿಕೊಂಡು ಬರೆದಿದ್ದೇನೆ. ಗೌಡರ ವ್ಯಕ್ತಿತ್ವ ಬಾಹುಳ್ಯ ವಿಸ್ತಾರವಾದುದು .ಅದೆಲ್ಲವನ್ನು ಈ ಕೃತಿ ಒಳಗೊಂಡಿದೆ ಎನ್ನುವ ತೃಪ್ತಿ ನನಗಿಲ್ಲವಾದ್ದರಿಂದ ಇದೇ ಅಂತಿಮವಲ್ಲ ಎಂದರು.

ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಹರಪ್ರಸಾದ ತುದಿಯಡ್ಕ ಹಾಗೂ ಅಧ್ಯಕ್ಷ ಸ್ಥಾನ ವಹಿಸಿದ್ದ ಪ್ರಾಂಶುಪಾಲ ಡಾ.ಕೆ ಗಿರಿಧರ ಗೌಡ ಅವರುಗಳು ಕುರುಂಜಿ ವೆಂಕಟರಮಣ ಗೌಡರೊಂದಿಗಿನ ತಮ್ಮ ಒಡನಾಟದ ಅನುಭವಗಳನ್ನು ಸ್ಮರಿಸಿಕೊಡರು.

Advertisement

ಉಪನ್ಯಾಸಕ ಸಂಜೀವ ಕುದ್ಪಾಜೆ ನಿರೂಸಿದರು, ವಿದ್ಯಾರ್ಥಿನಿ ಮೋನಿಕ ವಂದಿಸಿರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

2 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

3 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

3 hours ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

18 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago