Advertisement
ಸುದ್ದಿಗಳು

ಕುರುಂಜಿಯವರ ದೃಷ್ಟಿಕೋನ ಗಾಂಧಿ ಪ್ರೇರಿತ – ಅರವಿಂದ ಚೊಕ್ಕಾಡಿ

Share

ಸುಳ್ಯ:ಸಾಮಾನ್ಯ ರೈತ ಕುಟುಂಬವೊಂದರಿಂದ ಬಂದ ವೆಂಕಟ್ರಮಣ ಗೌಡರು ಕಂಡ ಕನಸುಗಳು ನನಸಾದ ಬಗೆಯೇ ರೋಚಕತೆಯನ್ನು ಉದ್ದೀಪಿಸಿ ಬಿಡುತ್ತದೆ. ಅವರ ದೃಷ್ಟಿಕೋನ ಗಾಂಧಿ ಪ್ರೇರಿತ. ಅದು ಧಾರ್ಮಿಕ ಕಾಠಿಣ್ಯದ ಧೋರಣೆಯದ್ದಲ್ಲ: ಧರ್ಮನಿರಪೇಕ್ಷೆಯದ್ದೂ ಅಲ್ಲದ ಧರ್ಮದ ಮೂಲಕವೇ ಆದ ಲಿಬರಲ್ ಆಲೋಚನೆಗಳಿಂದಾದುದು. ಅವರದ್ದು ಆಕಾಡೆಮಿ ಆಫ್ ಲಿಬರಲ್ ಪರಿಕಲ್ಪನೆಯ ಸಂಸ್ಥೆಗಳೇ ಇದಕ್ಕೆ ಸಾಕ್ಷಿಯಾಗಿವೆ ಎಂದು ಬರಹಗಾರ, ಚಿಂತಕ ಅವಿಂದ ಚೊಕ್ಕಾಡಿ ಹೇಳಿದರು.

ಅವರು ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘ, ವಿದ್ಯಾರ್ಥಿಸಂಘ ಮತ್ತು ಸಾಹಿತ್ಯ ಪರಿಷತ್ತು ತಾಲೂಕು ಘಟಕ ಸುಳ್ಯ ಸಹಯೋಗದಲ್ಲಿ ಆದಿ ಚುಂಚನಗಿರಿ ವಿಶ್ವ ವಿದ್ಯಾನಿಲಯ ಪ್ರಕಟಿಸಿರುವ ಡಾ. ಪೂವಪ್ಪ ಕಣಿಯೂರು ಬರೆದ ‘ಸಲ್ಲಕ್ಷಣದ ಕೈ-ಕುರುಂಜಿ ವೆಂಕಟರಮಣ ಗೌಡ’ ಕೃತಿಯನ್ನು ಕಾಲೇಜಿನ ಸಭಾಂಗಣದಲ್ಲಿ ಬಿಡುಗಡೆ ಸಮಾರಂಭದಲ್ಲಿ ಕೃತಿಪರಿಚಯ ಮಾಡಿದರು. ಸಲ್ಲಕ್ಷಣದ ಕೈ ಕುರುಂಜಿ ವೆಂಕಟರಮಣ ಗೌಡ ಎನ್ನುವ ಕೃತಿ ಶೀರ್ಷಿಕೆಯೆ ಗೌಡರ ಇಡೀ ವ್ಯಕ್ತಿತ್ವಕ್ಕೆ ಕೈ ಕನ್ನಡಿಯಾಗಿದೆ.ಇಲ್ಲಿ ಕೃತಿಗಾರ ಪೂವಪ್ಪ ಕಣಿಯೂರರು ಗೌಡರ ಜೀವನ ಚರಿತ್ರೆಗಿಂತ ಹೆಚ್ಚಾಗಿ ಅವರ ವ್ಯಕ್ತಿತ್ವದ ಚಿತ್ರಣವನ್ನು ಯಾವುದೇ ಭಾವುಕತೆ ಇಲ್ಲದೆ ಕೃತಿಯ ಪರಿಧಿಯಲ್ಲಿ ನಿಂತು ನಿರ್ಲಿಪ್ತವಾಗಿ, ಅತ್ಯಂತ ಸೊಗಸಾದ ಸಾಹಿತ್ಯಕ ಭಾಷೆಯಲ್ಲಿ ಕಟ್ಟಿಕೊಟ್ಟಿದ್ದಾರೆ.ಈ ಕೃತಿ ಒಂದು ನುಡಿ ಚಿತ್ರದಂತೆ ಗೌಡರನ್ನು ಕಣ್ಣೆದುರು ನಿಲ್ಲಿಸಿ ಅವರ ಬಹುರೂಪಿಯಾದ ಶೈಕ್ಷಣಿಕ, ಸಾಮಾಜಿಕ,ಸಾಂಸ್ಕೃತಿಕ, ಧಾರ್ಮಿಕ ಮುಖಗಳನ್ನುಆಪ್ತವಾಗಿ ಕಟ್ಟಿಕೊಡುತ್ತದೆ ಎಂದರು.

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ)ಸುಳ್ಯ ಇದರ ನಿರ್ದೇಶಕ ಡಾ.ಕುರುಂಜಿಯವರ ಮೊಮ್ಮಗ ಅಕ್ಷಯ್ ಕೆ.ಸಿಯವರು ಕೃತಿ ಬಿಡುಗಡೆಗೊಳಿಸಿ,ತಾತನೊಂದಿಗೆ ತಾನು ಬಾಲ್ಯದ ದಿನಗಳಲ್ಲಿ ಪಡೆದ ಅವಿಸ್ಮರಣಿಯ ನೆನಪುಗಳನ್ನುಮೆಲುಕು ಹಾಕಿದರು. ನನ್ನ ತಾತನವರಲ್ಲಿ ಸರಳ ಜೀವನದ ಕೆಲ ಸೂತ್ರಗಳಿದುವು ಜೊತೆಗೆ ಉನ್ನತವಾದ ಆದರ್ಶಗಳಿದ್ದುವು.ಅವರಲ್ಲಿದ್ದ ಸೂಪರ್ ನ್ಯಾಚುರಲ್ ಶಕ್ತಿ ನನ್ನನ್ನು ಬೆರಗುಗೊಳಿಸುತ್ತಿತ್ತು.ಆ ಶಕ್ತಿಯೇ ಇಂದೂ ನನಗೆ ಪ್ರೇರಣೆಯಾಗಿದೆಯೆಂದು ನೆನಪು ಮಾಡಿಕೊಂಡರು.

ಕೃತಿಕಾರರಾದ ಪ್ರಾಧ್ಯಾಪಕ ಡಾ.ಪೂವಪ್ಪ ಕಣಿಯೂರು ಅವರು ಈ ಕೃತಿಯನ್ನು ನಾನು ಭಿನ್ನ ಕಾರಣಗಳ ಒತ್ತಡದಿಂದಲೇ ಬರೆದಿದ್ದೇನೆ. ಬರೆಯುವ ಸಂದರ್ಭದಲ್ಲಿ ಇಂದು ಇಲ್ಲದಿರುವ ಕುರುಂಜಿಯವರನ್ನು ನಾನು ನನ್ನ ಅಂತ:ಪಟಲದಲ್ಲಿ ಪ್ರತ್ಯಕ್ಷ ದರ್ಶಿಸಿಕೊಂಡು ಬರೆದಿದ್ದೇನೆ. ಗೌಡರ ವ್ಯಕ್ತಿತ್ವ ಬಾಹುಳ್ಯ ವಿಸ್ತಾರವಾದುದು .ಅದೆಲ್ಲವನ್ನು ಈ ಕೃತಿ ಒಳಗೊಂಡಿದೆ ಎನ್ನುವ ತೃಪ್ತಿ ನನಗಿಲ್ಲವಾದ್ದರಿಂದ ಇದೇ ಅಂತಿಮವಲ್ಲ ಎಂದರು.

ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಹರಪ್ರಸಾದ ತುದಿಯಡ್ಕ ಹಾಗೂ ಅಧ್ಯಕ್ಷ ಸ್ಥಾನ ವಹಿಸಿದ್ದ ಪ್ರಾಂಶುಪಾಲ ಡಾ.ಕೆ ಗಿರಿಧರ ಗೌಡ ಅವರುಗಳು ಕುರುಂಜಿ ವೆಂಕಟರಮಣ ಗೌಡರೊಂದಿಗಿನ ತಮ್ಮ ಒಡನಾಟದ ಅನುಭವಗಳನ್ನು ಸ್ಮರಿಸಿಕೊಡರು.

ಉಪನ್ಯಾಸಕ ಸಂಜೀವ ಕುದ್ಪಾಜೆ ನಿರೂಸಿದರು, ವಿದ್ಯಾರ್ಥಿನಿ ಮೋನಿಕ ವಂದಿಸಿರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

8 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

9 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

9 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

19 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

20 hours ago