ಸುಬ್ರಹ್ಮಣ್ಯ: ಐತಿಹಾಸಿಕ ಕುಲ್ಕುಂದದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಪ್ರಯುಕ್ತ ಮಹಾಗಣಪತಿ ಹೋಮ, ವರುಣ ಜಪ ಸಹಿತ ಪರ್ಜನ್ಯ ಹೋಮ,ಶ್ರೀ ಬಸವೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನೆರವೇರಿತು. ಅಲ್ಲದೆ ವಿಶೇಷವಾಗಿ ಏಕಾದಶ ರುದ್ರಾಭಿಷೇಕ, ಮಹಾಗಣಪತಿ ಹೋಮ, ಪರ್ಜನ್ಯ ಹೋಮ, ರಂಗಪೂಜೆ ಮತ್ತು ನಾಗತಂಬಿಲ ಸೇವೆಗಳು ನಡೆಯಿತು.
ಅಧಿಕಾರ ಸ್ವೀಕಾರ:
ಇದೇ ಸಂದರ್ಭದಲ್ಲಿ ಶ್ರೀ ದೇವಳದ ನೂತನ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರ ಸಮಾರಂಭ ನೆರವೇರಿತು.ಆಡಳಿತ ಮಂಡಳಿ ನೂತನ ಅಧ್ಯಕ್ಷ ಗಿರಿಧರ ಸ್ಕಂಧ ಅವರಿಗೆ ನಿರ್ಗಮನ ಅಧ್ಯಕ್ಷ ಶಿವಣ್ಣ ಗೌಡ ಜಾಡಿಮನೆ ಅಧಿಕಾರ ಹಸ್ತಾಂತರಿಸಿದರು.ಅಲ್ಲದೆ ವಾರ್ಷಿಕ ಲೆಕ್ಕಪತ್ರ ಮಂಡನೆ ನೆರವೇರಿತು.ಸಮಾರಂಭದಲ್ಲಿ ಶ್ರೀ ಬಸವೇಶ್ವರ ದೇವಳದ ಮನವಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ್ ಸ್ಕಂಧ ವಹಿಸಿದ್ದರು.ವಾಸ್ತುಶಿಲ್ಪಿ ಎಸ್.ಎಂ.ಪ್ರಸಾದ್ ಮುನಿಯಂಗಳ, ಕಲಾವಿದ ಕೆ.ಯಜ್ಞೇಶ್ ಆಚಾರ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ದೇವರಾಜ್ ಕೆ.ಎಸ್, ಅಧ್ಯಕ್ಷ ಎನ್.ಕೆ.ಮನೋಹರ ನಾಳ, ಬ್ರಹ್ಮಕಲಶೋತ್ಸವ ಸಮಿತಿಯ ಎ.ವೆಂಕಟ್ರಾಜ್, ರವೀಂದ್ರ ಕುಮಾರ್ ರುದ್ರಪಾದ, ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಶಿವಣ್ಣ ಗೌಡ ಜಾಡಿಮನೆ, ದಿನೇಶ್ ಬಿ.ಎನ್, ನಾಗೇಶ್ ಕೈಕಂಬ, ಗುಡ್ಡಪ್ಪ ಗೌಡ ಬೀಡಿನಗದ್ದೆ, ಶೀನಪ್ಪ ಗೌಡ ನಡುತೋಟ, ಶಿವರಾಮ ಪಳ್ಳಿಗದ್ದೆ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…