Advertisement
ಜಿಲ್ಲೆ

ಕುವೈತ್‌ನಲ್ಲಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ತವರು ಸೇರಿದ 19 ಮಂದಿ

Share

ಮಂಗಳೂರು:ಕುವೈತ್‌ನಲ್ಲಿ ಉದ್ಯೋಗ ವಂಚನೆಗೆ ಒಳಗಾಗಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ಪೈಕಿ, ಕರಾವಳಿ ಮೂಲದ 19 ಮಂದಿ ಯುವಕರು  ಮರಳಿ ತವರು ಸೇರಿದ್ದಾರೆ.

ನಷೂದ್ (ಮಂಜೇಶ್ವರ), ವರುಣ್ (ಆಕಾಶ್ ಭವನ), ಕಲಂದರ್ ಶಫೀಕ್ (ಮೂಡುಬಿದಿರೆ), ನಷೂದ್ (ಕೊಪ್ಪ), ರಫೀಕ್ (ಕೊಪ್ಪ), ಯಕೂಬ್ ಮುಲ್ಲಾ ( ಶಿರ್ಸಿ), ಪಾರ್ಲ್ಟ್ರಿಕ್ ಫೆರ್ನಾಂಡಿಸ್ (ಭಟ್ಕಳ), ಜಗದೀಶ್, ಆಶೀಕ್ (ಉಡುಪಿ), ಪಾರ್ಥಿಕ್ (ಉಡುಪಿ), ಮಹಮ್ಮದ್ ಹಸನ್ (ಕೊಲ್ನಾಡು), ಮಹಮ್ಮದ್ ಇಸ್ಮಾಯಿಲ್ (ಕೊಲ್ನಾಡು), ಅಬ್ದುಲ್ ಮಸೀದ್ (ಕಾರ್ಕಳ), ಮಹಮ್ಮದ್ ಸುಹೇಲ್ (ಉಳ್ಳಾಲ), ನೌಫಾಲ್ ಹುಸೈನ್ (ಉಳ್ಳಾಲ), ಮಹಮ್ಮದ್ ಶಕೀರ್ (ಉಳ್ಳಾಲ), ಅಬ್ದುಲ್ ಲತೀಫ್ (ತುಂಬೆ) ಫಯಾಝ್ (ಕುತ್ತಾರ್), ಅಬುಬಕ್ಕರ್ ಸಿದ್ದೀಕ್ (ಬಜಾಲ್) ತವರಿಗೆ ಬಂದಿಳಿದ ಕರಾವಳಿ ಮೂಲದ ಸಂತ್ರಸ್ತ ಯುವಕರು.

ಈ 19 ಮಂದಿಗೆ ಕುವೈತ್‌ನಿಂದ ಮುಂಬೈಗೆ ವಿಮಾನ ಟಿಕೆಟ್‌ ಮತ್ತು ಅಲ್ಲಿಂದ ಮಂಗಳೂರಿಗೆ ಬಸ್‌ ಟಿಕೆಟ್‌ ಅನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್‌ ವ್ಯವಸ್ಥೆ ಮಾಡಿದ್ದರು. ಇನ್‌ಸ್ಟಿಟ್ಯೂಷನ್‌ ಆಫ್‌ ಎಂಜಿನಿಯರ್ಸ್‌ನ ಕುವೈತ್‌ ಶಾಖೆಯ ಮಾಜಿ ಅಧ್ಯಕ್ಷ ಮಂಜೇಶ್ವರ ಮೋಹನದಾಸ್‌ ಕಾಮತ್‌, ಅನಿವಾಸಿ ಭಾರತೀಯ ಉದ್ಯಮಿಗಳಾದ ರಾಜ್‌ ಭಂಡಾರಿ, ವಿಜಯ್‌ ಫರ್ನಾಂಡಿಸ್‌ ಕುವೈತ್‌ ವಿಮಾನ ನಿಲ್ದಾಣದಲ್ಲಿ ಈ ಕಾರ್ಮಿಕರನ್ನು ಬೀಳ್ಕೊಟ್ಟಿದ್ದರು. ಸದ್ಯ 19 ಮಂದಿ ಯುವಕರು ಮರಳಿ ಮಂಗಳೂರು ಸೇರಿದ್ದಾರೆ.

ಯುವಕರ ಬಿಡುಗಡೆ ವಿಚಾರದಲ್ಲಿ ತಕ್ಷಣ ಸ್ಪಂದಿಸಿರುವ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರ ಕಾರ್ಯವೈಖರಿಯನ್ನು ಭಾರತೀಯ ರಾಯಭಾರಿ ಕಚೇರಿಯ ದ್ವಿತೀಯ ಕಾರ್ಯದರ್ಶಿ ಸಿಬಿ ಯು. ಶ್ಲಾಘಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

1 day ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

1 day ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

1 day ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago