Advertisement
ಜಿಲ್ಲೆ

ಕುವೈತ್‌ನಲ್ಲಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ತವರು ಸೇರಿದ 19 ಮಂದಿ

Share

ಮಂಗಳೂರು:ಕುವೈತ್‌ನಲ್ಲಿ ಉದ್ಯೋಗ ವಂಚನೆಗೆ ಒಳಗಾಗಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ಪೈಕಿ, ಕರಾವಳಿ ಮೂಲದ 19 ಮಂದಿ ಯುವಕರು  ಮರಳಿ ತವರು ಸೇರಿದ್ದಾರೆ.

ನಷೂದ್ (ಮಂಜೇಶ್ವರ), ವರುಣ್ (ಆಕಾಶ್ ಭವನ), ಕಲಂದರ್ ಶಫೀಕ್ (ಮೂಡುಬಿದಿರೆ), ನಷೂದ್ (ಕೊಪ್ಪ), ರಫೀಕ್ (ಕೊಪ್ಪ), ಯಕೂಬ್ ಮುಲ್ಲಾ ( ಶಿರ್ಸಿ), ಪಾರ್ಲ್ಟ್ರಿಕ್ ಫೆರ್ನಾಂಡಿಸ್ (ಭಟ್ಕಳ), ಜಗದೀಶ್, ಆಶೀಕ್ (ಉಡುಪಿ), ಪಾರ್ಥಿಕ್ (ಉಡುಪಿ), ಮಹಮ್ಮದ್ ಹಸನ್ (ಕೊಲ್ನಾಡು), ಮಹಮ್ಮದ್ ಇಸ್ಮಾಯಿಲ್ (ಕೊಲ್ನಾಡು), ಅಬ್ದುಲ್ ಮಸೀದ್ (ಕಾರ್ಕಳ), ಮಹಮ್ಮದ್ ಸುಹೇಲ್ (ಉಳ್ಳಾಲ), ನೌಫಾಲ್ ಹುಸೈನ್ (ಉಳ್ಳಾಲ), ಮಹಮ್ಮದ್ ಶಕೀರ್ (ಉಳ್ಳಾಲ), ಅಬ್ದುಲ್ ಲತೀಫ್ (ತುಂಬೆ) ಫಯಾಝ್ (ಕುತ್ತಾರ್), ಅಬುಬಕ್ಕರ್ ಸಿದ್ದೀಕ್ (ಬಜಾಲ್) ತವರಿಗೆ ಬಂದಿಳಿದ ಕರಾವಳಿ ಮೂಲದ ಸಂತ್ರಸ್ತ ಯುವಕರು.

ಈ 19 ಮಂದಿಗೆ ಕುವೈತ್‌ನಿಂದ ಮುಂಬೈಗೆ ವಿಮಾನ ಟಿಕೆಟ್‌ ಮತ್ತು ಅಲ್ಲಿಂದ ಮಂಗಳೂರಿಗೆ ಬಸ್‌ ಟಿಕೆಟ್‌ ಅನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್‌ ವ್ಯವಸ್ಥೆ ಮಾಡಿದ್ದರು. ಇನ್‌ಸ್ಟಿಟ್ಯೂಷನ್‌ ಆಫ್‌ ಎಂಜಿನಿಯರ್ಸ್‌ನ ಕುವೈತ್‌ ಶಾಖೆಯ ಮಾಜಿ ಅಧ್ಯಕ್ಷ ಮಂಜೇಶ್ವರ ಮೋಹನದಾಸ್‌ ಕಾಮತ್‌, ಅನಿವಾಸಿ ಭಾರತೀಯ ಉದ್ಯಮಿಗಳಾದ ರಾಜ್‌ ಭಂಡಾರಿ, ವಿಜಯ್‌ ಫರ್ನಾಂಡಿಸ್‌ ಕುವೈತ್‌ ವಿಮಾನ ನಿಲ್ದಾಣದಲ್ಲಿ ಈ ಕಾರ್ಮಿಕರನ್ನು ಬೀಳ್ಕೊಟ್ಟಿದ್ದರು. ಸದ್ಯ 19 ಮಂದಿ ಯುವಕರು ಮರಳಿ ಮಂಗಳೂರು ಸೇರಿದ್ದಾರೆ.

ಯುವಕರ ಬಿಡುಗಡೆ ವಿಚಾರದಲ್ಲಿ ತಕ್ಷಣ ಸ್ಪಂದಿಸಿರುವ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರ ಕಾರ್ಯವೈಖರಿಯನ್ನು ಭಾರತೀಯ ರಾಯಭಾರಿ ಕಚೇರಿಯ ದ್ವಿತೀಯ ಕಾರ್ಯದರ್ಶಿ ಸಿಬಿ ಯು. ಶ್ಲಾಘಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

10 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

10 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

11 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

11 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

11 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

19 hours ago