ಕೃಪಾ ಮನೆಯಲ್ಲಿ ಸಂತಸ

April 30, 2019
9:26 AM

ಪಂಜ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 624 ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ  ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ  ಕೃಪಾ ಕೆ ಆರ್ ಮನೆಯಲ್ಲಿ ಹೆತ್ತವರಿಗೆ ಸಂಭ್ರಮ ಹಾಗೂ ಸಂತಸ. ಕೃಪಾಗೆ ಈಗ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದಿದೆ.

Advertisement

ಕಡಬ ತಾಲೂಕಿನ ಬಳ್ಪ ಸಮೀಪದ ಕಣ್ಕಲ್ ರವಿ ಅಮ್ಮಣ್ಣಾಯ ಅವರ ಪುತ್ರಿ ಕೃಪಾ ಕೆ ಆರ್ ನಿರಂತರ ಅಭ್ಯಾಸದ ಮೂಲಕ  ಉತ್ತಮ ಅಂಕ ಪಡೆದಿದ್ದಾರೆ. ಗ್ರಾಮೀಣ ಭಾಗದ ಈ ವಿದ್ಯಾರ್ಥಿನಿ ಯಾವುದೇ ಕೋಚಿಂಗ್ ಗೆ ತೆರಳದದೆ ಸತತ ಅಭ್ಯಾಸದ ಮೂಲಕ ಈ ಸಾಧನೆ ಮಾಡಿದ್ದಾರೆ. ಕೃಪಾ ಈ ಸಾಧನೆಗೆ ಕುಮಾರಸ್ವಾಮಿ ಆಂಗ್ಲಮಾದ್ಯಮ ಶಾಲೆಯ ಸಂಚಾಲಕ ಗಣೇಶ್ ಪ್ರಸಾದ್ , ಚಂದ್ರಶೇಖರ್  ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ ಅಭಿನಂದನೆ ಸಲ್ಲಿಸಿದ್ದಾರೆ.

ಉತ್ತಮ ಅಂಕದ ನಿರೀಕ್ಷೆ ಇತ್ತು ಎನ್ನುವ ಕೃಪಾ , ವಿಜ್ಞಾನ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗುವ ನಿರೀಕ್ಷೆ ಇತ್ತು, ಆದರೆ ಆಂಗ್ಲ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗಿದೆ ಎನ್ನುತ್ತಾರೆ. ಈ ಸಾಧನೆಗೆ ಹೆತ್ತವರು ಹಾಗೂ ಶಾಲೆಯ ಸಹಕಾರವೇ ಕಾರಣ ಎನ್ನುತ್ತಾರೆ.

ಅಭಿನಂದನೆ ಸಲ್ಲಿಸಿದ ಪಂಜದ ವೆಂಕಟ್ರಮಣ ಭಟ್

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್
July 20, 2025
7:24 AM
by: ದ ರೂರಲ್ ಮಿರರ್.ಕಾಂ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group