ಪಂಜ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 624 ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕೃಪಾ ಕೆ ಆರ್ ಮನೆಯಲ್ಲಿ ಹೆತ್ತವರಿಗೆ ಸಂಭ್ರಮ ಹಾಗೂ ಸಂತಸ. ಕೃಪಾಗೆ ಈಗ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದಿದೆ.
ಕಡಬ ತಾಲೂಕಿನ ಬಳ್ಪ ಸಮೀಪದ ಕಣ್ಕಲ್ ರವಿ ಅಮ್ಮಣ್ಣಾಯ ಅವರ ಪುತ್ರಿ ಕೃಪಾ ಕೆ ಆರ್ ನಿರಂತರ ಅಭ್ಯಾಸದ ಮೂಲಕ ಉತ್ತಮ ಅಂಕ ಪಡೆದಿದ್ದಾರೆ. ಗ್ರಾಮೀಣ ಭಾಗದ ಈ ವಿದ್ಯಾರ್ಥಿನಿ ಯಾವುದೇ ಕೋಚಿಂಗ್ ಗೆ ತೆರಳದದೆ ಸತತ ಅಭ್ಯಾಸದ ಮೂಲಕ ಈ ಸಾಧನೆ ಮಾಡಿದ್ದಾರೆ. ಕೃಪಾ ಈ ಸಾಧನೆಗೆ ಕುಮಾರಸ್ವಾಮಿ ಆಂಗ್ಲಮಾದ್ಯಮ ಶಾಲೆಯ ಸಂಚಾಲಕ ಗಣೇಶ್ ಪ್ರಸಾದ್ , ಚಂದ್ರಶೇಖರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ ಅಭಿನಂದನೆ ಸಲ್ಲಿಸಿದ್ದಾರೆ.
ಉತ್ತಮ ಅಂಕದ ನಿರೀಕ್ಷೆ ಇತ್ತು ಎನ್ನುವ ಕೃಪಾ , ವಿಜ್ಞಾನ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗುವ ನಿರೀಕ್ಷೆ ಇತ್ತು, ಆದರೆ ಆಂಗ್ಲ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗಿದೆ ಎನ್ನುತ್ತಾರೆ. ಈ ಸಾಧನೆಗೆ ಹೆತ್ತವರು ಹಾಗೂ ಶಾಲೆಯ ಸಹಕಾರವೇ ಕಾರಣ ಎನ್ನುತ್ತಾರೆ.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
View Comments
ಇದು ಸುಳ್ಯ ತಾಲೂಕಿಗೆ ಸಂತಸ..ಸಡಗರ..
ನಮ್ಮ ಊರಿನ ಹಿರಿಮೆಯನ್ನು ಶಿಕ್ಶಣ ಕ್ಷೇತ್ರದಲ್ಲಿ ಪಸರಿಸಿದ ಕೃಪ ರವರಿಗೆ ದನ್ಯವಾದಗಳು. ಮುಂದಿನ ನಿಮ್ಮ ಗುರಿ ಉತ್ತಮ್ಮ ವಾಗಿ ಸಾಗಲಿ