ಸುದ್ದಿಗಳು

ಕೃಷಿಕರ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ರೈತ ಮುಖಂಡರ ಸಭೆ, ಮುಖ್ಯಮಂತ್ರಿ ಭೇಟಿ : ಕೋಟ ಶ್ರೀನಿವಾಸ ಪೂಜಾರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕೃಷಿಕ ವಲಯದಲ್ಲಿರುವ ಅಡಿಕೆ ಹಳದಿ ರೋಗ, ಕಾಡು ಪ್ರಾಣಿಗಳ ಹಾವಳಿ, ಕೋವಿ ಪರವಾನಿಗೆ ನಿಯಮ ಸೇರಿದಂತೆ ಕೃಷಿಕರ ಸಮಸ್ಯೆ ಪರಿಹಾರಕ್ಕೆ ಜ.15ರೊಳಗೆ ಜಿಲ್ಲಾ ಮಟ್ಟದಲ್ಲಿ ಸಭೆ ಕರೆಯಲಾಗುವುದು. ಆ ಬಳಿಕ ಮುಖ್ಯಮಂತ್ರಿಗಳನ್ನೂ ಭೇಟಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Advertisement
Advertisement

ಮಡಪ್ಪಾಡಿಯಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮ ಮತ್ತು ಸಮಾರೋಪ ಸಮಾರಂಭದಲ್ಲಿ ಅವರು ಗ್ರಾಮಸ್ಥರು ಮುಂದಿರಿಸಿದ ವಿವಿಧ ಬೇಡಿಕೆಗಳಿಗೆ ಉತ್ತರಿಸಿ ಮಾತನಾಡಿದರು. ಮಡಪ್ಪಾಡಿಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡುವ ನಿಟ್ಟಿನಲ್ಲಿ ಏನಾದರೂ ಮಾಡಲು ಸಾಧ್ಯವೇ ಎಂದು ಶಾಸಕರೊಂದಿಗೆ ಸೇರಿ ಚರ್ಚಿಸುವುದಾಗಿ ಸಚಿವರು ಹೇಳಿದರು.

ಶಾಸಕ ಎಸ್.ಅಂಗಾರ ಮಾತನಾಡಿ ಮಡಪ್ಪಾಡಿ ಗ್ರಾಮದಲ್ಲಿ ಒಟ್ಟು 64 ಕಿ.ಮಿ. ಉದ್ದದ 38 ಗ್ರಾಮೀಣ ರಸ್ತೆಗಳಿವೆ. ಈ ಪೈಕಿ ಆದ್ಯತೆಯ ಮೇರೆಗೆ ಪ್ರಮುಖ ರಸ್ತೆಗಳನ್ನು ಗುರುತಿಸಿ ಅಭಿವೃದ್ಧಿಪಡಿಸಲಾಗುವುದು. ಸರ್ಕಾರದ ವಿವಿಧ ಯೋಜನೆಗಳು ಯಾರಿಗೆ ತಲುಪಿಲ್ಲ ಹಾಗೂ ಯಾರಿಗೆ ತಲುಪಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ನೀಡುವಂತೆ ಗ್ರಾಮ ಪಂಚಾಯಿತಿಗಳಿಗೆ ಸೂಚಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಅವರನ್ನು ಸನ್ಮಾನಿಸಲಾಯಿತು.
ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯೆ ಆಶಾ ತಿಮ್ಮಪ್ಪ, ತಾ.ಪಂ.ಸದಸ್ಯ ಉದಯಕುಮಾರ್ ಕೊಪ್ಪಡ್ಕ, ಗ್ರಾ.ಪಂ.ಅಧ್ಯಕ್ಷೆ ಶಕುಂತಲಾ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಎ.ಪಿ.ಎಂ.ಸಿ.ನಿರ್ದೇಶಕ ವಿನಯಕುಮಾರ್ ಮುಳುಗಾಡು, ಮಡಪ್ಪಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಂ ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿ, ಲೋಕೇಶ್ ಪೆರ್ಲಂಪಾಡಿ ವಂದಿಸಿದರು. ಕಿರಣ್‍ಪ್ರಸಾದ್ ಕುಂಡಡ್ಕ ಸಂದೇಶ ವಾಚಿಸಿದರು. ಪತ್ರಕರ್ತ ಬಿ.ಎನ್.ಪುಷ್ಪರಾಜ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

4 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

10 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago