Advertisement
ಸುದ್ದಿಗಳು

ಕೃಷಿಕರ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ರೈತ ಮುಖಂಡರ ಸಭೆ, ಮುಖ್ಯಮಂತ್ರಿ ಭೇಟಿ : ಕೋಟ ಶ್ರೀನಿವಾಸ ಪೂಜಾರಿ

Share

ಸುಳ್ಯ: ಕೃಷಿಕ ವಲಯದಲ್ಲಿರುವ ಅಡಿಕೆ ಹಳದಿ ರೋಗ, ಕಾಡು ಪ್ರಾಣಿಗಳ ಹಾವಳಿ, ಕೋವಿ ಪರವಾನಿಗೆ ನಿಯಮ ಸೇರಿದಂತೆ ಕೃಷಿಕರ ಸಮಸ್ಯೆ ಪರಿಹಾರಕ್ಕೆ ಜ.15ರೊಳಗೆ ಜಿಲ್ಲಾ ಮಟ್ಟದಲ್ಲಿ ಸಭೆ ಕರೆಯಲಾಗುವುದು. ಆ ಬಳಿಕ ಮುಖ್ಯಮಂತ್ರಿಗಳನ್ನೂ ಭೇಟಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಡಪ್ಪಾಡಿಯಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮ ಮತ್ತು ಸಮಾರೋಪ ಸಮಾರಂಭದಲ್ಲಿ ಅವರು ಗ್ರಾಮಸ್ಥರು ಮುಂದಿರಿಸಿದ ವಿವಿಧ ಬೇಡಿಕೆಗಳಿಗೆ ಉತ್ತರಿಸಿ ಮಾತನಾಡಿದರು. ಮಡಪ್ಪಾಡಿಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡುವ ನಿಟ್ಟಿನಲ್ಲಿ ಏನಾದರೂ ಮಾಡಲು ಸಾಧ್ಯವೇ ಎಂದು ಶಾಸಕರೊಂದಿಗೆ ಸೇರಿ ಚರ್ಚಿಸುವುದಾಗಿ ಸಚಿವರು ಹೇಳಿದರು.

ಶಾಸಕ ಎಸ್.ಅಂಗಾರ ಮಾತನಾಡಿ ಮಡಪ್ಪಾಡಿ ಗ್ರಾಮದಲ್ಲಿ ಒಟ್ಟು 64 ಕಿ.ಮಿ. ಉದ್ದದ 38 ಗ್ರಾಮೀಣ ರಸ್ತೆಗಳಿವೆ. ಈ ಪೈಕಿ ಆದ್ಯತೆಯ ಮೇರೆಗೆ ಪ್ರಮುಖ ರಸ್ತೆಗಳನ್ನು ಗುರುತಿಸಿ ಅಭಿವೃದ್ಧಿಪಡಿಸಲಾಗುವುದು. ಸರ್ಕಾರದ ವಿವಿಧ ಯೋಜನೆಗಳು ಯಾರಿಗೆ ತಲುಪಿಲ್ಲ ಹಾಗೂ ಯಾರಿಗೆ ತಲುಪಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ನೀಡುವಂತೆ ಗ್ರಾಮ ಪಂಚಾಯಿತಿಗಳಿಗೆ ಸೂಚಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಅವರನ್ನು ಸನ್ಮಾನಿಸಲಾಯಿತು.
ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯೆ ಆಶಾ ತಿಮ್ಮಪ್ಪ, ತಾ.ಪಂ.ಸದಸ್ಯ ಉದಯಕುಮಾರ್ ಕೊಪ್ಪಡ್ಕ, ಗ್ರಾ.ಪಂ.ಅಧ್ಯಕ್ಷೆ ಶಕುಂತಲಾ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಎ.ಪಿ.ಎಂ.ಸಿ.ನಿರ್ದೇಶಕ ವಿನಯಕುಮಾರ್ ಮುಳುಗಾಡು, ಮಡಪ್ಪಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಂ ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿ, ಲೋಕೇಶ್ ಪೆರ್ಲಂಪಾಡಿ ವಂದಿಸಿದರು. ಕಿರಣ್‍ಪ್ರಸಾದ್ ಕುಂಡಡ್ಕ ಸಂದೇಶ ವಾಚಿಸಿದರು. ಪತ್ರಕರ್ತ ಬಿ.ಎನ್.ಪುಷ್ಪರಾಜ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

1 day ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago