Advertisement
ಕೃಷಿ

ಕೃಷಿಕ ಎನ್ನಲು ಭಯ ಬೇಡ, ಹೆಮ್ಮೆ ಇರಲಿ – ಕಡಮಜಲು ಸುಭಾಶ್ ರೈ

Share

ಬಾಳಿಲ: ಕೃಷಿಕ ಎನ್ನಲು ಭಯ ಬೇಡ, ಪ್ರತಿಯೊಬ್ಬರಿಗೂ ಹೆಮ್ಮೆ ಇರಬೇಕು. ಬದುಕಿನ ಕೊನೆಯವರೆಗೂ ಕೃಷಿಕನಾಗಿಯೇ ಇರಬೇಕು. ಅದಕ್ಕಾಗಿಯೇ ಕೆಲವು ಸೂತ್ರಗಳನ್ನು ಕೃಷಿಕ ಅಳವಡಿಸಿಕೊಳ್ಳಬೇಕು ಎಂದು ಕೃಷಿಕ ಕಡಮಜಲು ಸುಭಾಶ್ ರೈ ಹೇಳಿದರು.

ಅವರು  ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಭಾನುವಾರ ಭಾರತೀಯ ಕಿಸಾನ್ ಸಂಘ ಬಾಳಿಲ-ಮುಪ್ಪೇರ್ಯ ಹಾಗೂ ಭಾರತೀಯ ಕಿಸಾನ್ ಸಂಘ ಸುಳ್ಯ, ಗುತ್ತಿಗಾರು-ನಾಲ್ಕೂರು , ಎಣ್ಮೂರು ಇವುಗಳ ಸಹಭಾಗಿತ್ವದಲ್ಲಿ ನಡೆದ 16 ನೇ ವಾರ್ಷಿಕೋತ್ಸವ ಹಾಗೂ ಬಲರಾಮ ಜಯಂತಿ  ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಕೃಷಿಕ ಕೃಷಿಯಲ್ಲಿ ಯಶಸ್ಸು ಕಾಣಲು ಪರಿಶ್ರಮ, ಕೃಷಿ ಮಾಹಿತಿ, ಯೋಜನೆ-ಯೋಚನೆಯನ್ನು  ಹೊಂದಬೇಕು. ಅದರ ಜೊತೆಗೆ ಮಿಶ್ರಬೆಳೆಯತ್ತ ಗಮನಹರಿಸಬೇಕು. ಆಗ ಮಾತ್ರಾ ಆದಾಯ ದ್ವಿಗುಣವಾಗಿ ಲಾಭ ಪಡೆಯಲು ಸಾಧ್ಯವಿದೆ. ಯಾವುದೇ ಕೃಷಿ ಮಾಡುವ ಮೊದಲು ಸೂಕ್ತ ಜಾಗ ಹಾಗೂ ಸೂಕ್ತವಾದ ಯೋಜನೆ ಹಮ್ಮಿಕೊಳ್ಳಬೇಕು ಎಂದರು.

Advertisement

ಸಭಾಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ವಹಿಸಿದ್ದರು. ಈ ಸಂದರ್ಭ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಬಾಳಿಲ ಶಾಖೆಯ ಜಿನಸು ವಿಭಾಗ ನಿವೃತ್ತ ವ್ಯವಸ್ಥಾಪಕ ಪಿ. ಸದಾಶಿವ ನಾಯಕ್ , ಹಿರಿಯ ಇಲೆಕ್ಟ್ರೀಷಿಯನ್ ರುಕ್ಮಯ್ಯ ಗೌಡ ಇಂದ್ರಾಜೆ ಹಾಗೂ  ಹೈನುಗಾರರಾದ ಭಾನುಪ್ರಕಾಶ್ ಮರಂಗಳ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ  ಜಯಪ್ರಸಾದ್ ಜೋಶಿ, ಬಾಳಿಲ ಭಾಕಿಸಂ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಕರ್ವಂಕಲ್ಲು , ಮಂಗಳೂರು ವಿಭಾಗ ಅಂಚೆ ಅಧೀಕ್ಷಕ‌ ಶ್ರೀಹರ್ಷ , ಗುತ್ತಿಗಾರು ಭಾಕಿಸಂ ಕಾರ್ಯದರ್ಶಿ  ಕುಮಾರಸ್ವಾಮಿ ಮೇಲ್ತೋಟ ಮೊದಲಾದವರು ಉಪಸ್ಥಿತರಿದ್ದರು.

Advertisement

ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಅಧ್ಯಕ್ಷ ನೆಟ್ಟಾರು ಗೋಪಾಲಕೃಷ್ಣ ಭಟ್ , ಗುತ್ತಿಗಾರು ನಾಲ್ಕೂರು ವಲಯದ ಅಧ್ಯಕ್ಷ ಕುಮಾರಸ್ವಾಮಿ, ಬಾಳಿಲ ಮುಪ್ಪೇರ್ಯ ವಲಯದ ಕಾರ್ಯದರ್ಶಿ ಸಿ.ವಿ. ರಾಜಾರಾಮ ವರದಿ ವಾಚಿಸಿದರು.

ಬಾಳಿಲ ಮುಪ್ಪೇರ್ಯ ವಲಯದ ಅಧ್ಯಕ್ಷ ಕರ್ವಂಕಲ್ಲು ಗೋಪಾಲಕೃಷ್ಣ ಭಟ್ ಸ್ವಾಗತಿಸಿದರು.  ವಿಜಯ ಬಾಳಿಲ ಪ್ರಾರ್ಥಿಸಿದರು. ವಿಜಯ ಬಾಳಿಲ‌ ಮತ್ತು ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago