ಬಾಳಿಲ: ಕೃಷಿಕ ಎನ್ನಲು ಭಯ ಬೇಡ, ಪ್ರತಿಯೊಬ್ಬರಿಗೂ ಹೆಮ್ಮೆ ಇರಬೇಕು. ಬದುಕಿನ ಕೊನೆಯವರೆಗೂ ಕೃಷಿಕನಾಗಿಯೇ ಇರಬೇಕು. ಅದಕ್ಕಾಗಿಯೇ ಕೆಲವು ಸೂತ್ರಗಳನ್ನು ಕೃಷಿಕ ಅಳವಡಿಸಿಕೊಳ್ಳಬೇಕು ಎಂದು ಕೃಷಿಕ ಕಡಮಜಲು ಸುಭಾಶ್ ರೈ ಹೇಳಿದರು.
ಅವರು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಭಾನುವಾರ ಭಾರತೀಯ ಕಿಸಾನ್ ಸಂಘ ಬಾಳಿಲ-ಮುಪ್ಪೇರ್ಯ ಹಾಗೂ ಭಾರತೀಯ ಕಿಸಾನ್ ಸಂಘ ಸುಳ್ಯ, ಗುತ್ತಿಗಾರು-ನಾಲ್ಕೂರು , ಎಣ್ಮೂರು ಇವುಗಳ ಸಹಭಾಗಿತ್ವದಲ್ಲಿ ನಡೆದ 16 ನೇ ವಾರ್ಷಿಕೋತ್ಸವ ಹಾಗೂ ಬಲರಾಮ ಜಯಂತಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಕೃಷಿಕ ಕೃಷಿಯಲ್ಲಿ ಯಶಸ್ಸು ಕಾಣಲು ಪರಿಶ್ರಮ, ಕೃಷಿ ಮಾಹಿತಿ, ಯೋಜನೆ-ಯೋಚನೆಯನ್ನು ಹೊಂದಬೇಕು. ಅದರ ಜೊತೆಗೆ ಮಿಶ್ರಬೆಳೆಯತ್ತ ಗಮನಹರಿಸಬೇಕು. ಆಗ ಮಾತ್ರಾ ಆದಾಯ ದ್ವಿಗುಣವಾಗಿ ಲಾಭ ಪಡೆಯಲು ಸಾಧ್ಯವಿದೆ. ಯಾವುದೇ ಕೃಷಿ ಮಾಡುವ ಮೊದಲು ಸೂಕ್ತ ಜಾಗ ಹಾಗೂ ಸೂಕ್ತವಾದ ಯೋಜನೆ ಹಮ್ಮಿಕೊಳ್ಳಬೇಕು ಎಂದರು.
ಸಭಾಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ವಹಿಸಿದ್ದರು. ಈ ಸಂದರ್ಭ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಬಾಳಿಲ ಶಾಖೆಯ ಜಿನಸು ವಿಭಾಗ ನಿವೃತ್ತ ವ್ಯವಸ್ಥಾಪಕ ಪಿ. ಸದಾಶಿವ ನಾಯಕ್ , ಹಿರಿಯ ಇಲೆಕ್ಟ್ರೀಷಿಯನ್ ರುಕ್ಮಯ್ಯ ಗೌಡ ಇಂದ್ರಾಜೆ ಹಾಗೂ ಹೈನುಗಾರರಾದ ಭಾನುಪ್ರಕಾಶ್ ಮರಂಗಳ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಜಯಪ್ರಸಾದ್ ಜೋಶಿ, ಬಾಳಿಲ ಭಾಕಿಸಂ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಕರ್ವಂಕಲ್ಲು , ಮಂಗಳೂರು ವಿಭಾಗ ಅಂಚೆ ಅಧೀಕ್ಷಕ ಶ್ರೀಹರ್ಷ , ಗುತ್ತಿಗಾರು ಭಾಕಿಸಂ ಕಾರ್ಯದರ್ಶಿ ಕುಮಾರಸ್ವಾಮಿ ಮೇಲ್ತೋಟ ಮೊದಲಾದವರು ಉಪಸ್ಥಿತರಿದ್ದರು.
ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಅಧ್ಯಕ್ಷ ನೆಟ್ಟಾರು ಗೋಪಾಲಕೃಷ್ಣ ಭಟ್ , ಗುತ್ತಿಗಾರು ನಾಲ್ಕೂರು ವಲಯದ ಅಧ್ಯಕ್ಷ ಕುಮಾರಸ್ವಾಮಿ, ಬಾಳಿಲ ಮುಪ್ಪೇರ್ಯ ವಲಯದ ಕಾರ್ಯದರ್ಶಿ ಸಿ.ವಿ. ರಾಜಾರಾಮ ವರದಿ ವಾಚಿಸಿದರು.
ಬಾಳಿಲ ಮುಪ್ಪೇರ್ಯ ವಲಯದ ಅಧ್ಯಕ್ಷ ಕರ್ವಂಕಲ್ಲು ಗೋಪಾಲಕೃಷ್ಣ ಭಟ್ ಸ್ವಾಗತಿಸಿದರು. ವಿಜಯ ಬಾಳಿಲ ಪ್ರಾರ್ಥಿಸಿದರು. ವಿಜಯ ಬಾಳಿಲ ಮತ್ತು ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…