MIRROR FOCUS

ಕೃಷಿಗೆ ಕಾಡುವ ಕಾಡಾನೆಯ ಮುದ್ದಿಸುವ ಕೃಷಿಕರು ಇವರು…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಾಳುಗೋಡು : ಅದು ಕಾಡಾನೆ. ಸದಾ ಕೃಷಿಗೆ ಹಾನಿ ಮಾಡುವ ಮದ್ದಾನೆ ಅದು. ಆನೆ ದಾಳಿಗೆ ಸದಾ ಶಪಿಸುವ ಜನ ಅವರು. ಇಂದು ಕಾಡಾನೆಯನ್ನು ಮುದ್ದಿಸುತ್ತಾರೆ, ತಮ್ಮ ಮನೆಯ ಸಾಕು ಪ್ರಾಣಿಗೆ ನೋವಾದ ಸಂಕಟ ಅವರಲ್ಲಿದೆ. ಇದು ಬಾಳುಗೋಡಿನಲ್ಲಿ ನೋವಿನಿಂದ ಚಡಪಡಿಸುವ ಆನೆಯ ಕತೆ.

Advertisement
Advertisement

ಬಾಳುಗೋಡು ಮೀಸಲು ಅರಣ್ಯದಲ್ಲಿ ಸಲಗಗಳ ನಡುವೆ ಕಾಳಗ ನಡೆದು ಒಂದು ಆನೆಗೆ ಗಾಯವಾಗಿತ್ತು. ಗಾಯಗೊಂಡ  ಕಾಡಾನೆಗೆ ಹೇಗೂ ಬುಧವಾರ ಚಿಕಿತ್ಸೆ ನೀಡಲಾಯಿತು. ಬುಧವಾರ ಸಂಜೆ ಸ್ವಲ್ಪ ಚೇತರಿಸಿಕೊಂಡರು ಕೊಂಚ ಓಡಾಟಕ್ಕೆ ಶುರು ಮಾಡಿತು. ಭಾನುವಾರ  ಮತ್ತೆ ಕಾಡಾನೆಗಳ ಕಾದಾಟದಿಂದ ಆನೆಗೆ ಮತ್ತೆ ನೋವಾಗಿದೆ. ಈಗ ಕಾಡಿನಲ್ಲಿ  ಮತ್ತೆ ಚಡಪಡಿಸುತ್ತಿದೆ.

ಮಂಗಳವಾರ ಮತ್ತೆ ಇನ್ನೊಂದು ಕಾಡಾನೆ ನಾಡಿನ ಕಡೆಗೆ ಬಂದಿದೆ. ಆದರೆ  ಏನೂ ಮಾಡಿಲ್ಲ. ಗಾಯಗೊಂಡ ಆನೆಯ ಪಕ್ಕ ಬಂದಿದೆ. ಜೊತೆಗೆ ಕೃಷಿ ಭೂಮಿಗೂ ಹಾನಿ ಮಾಡಿದೆ. ಭಾನುವಾರ ತಡರಾತ್ರಿ ಬಾಳುಗೋಡು  ಭಾಗದ ಹಲವು ಮಂದಿ  ಕೃಷಿಕರ ತೋಟಗಳಿಗೆ ನುಗ್ಗಿವೆ. ಇಂತಹ ಪುಂಡಾನೆಯ ಸ್ಥಳಾಂತರ ಮಾಡಬೇಕು ಎಂದು ಅರಣ್ಯ ಇಲಾಖೆಗೆ ಕೃಷಿಕರು ಹೇಳಿದ್ದಾರೆ. ಆದರೂ ಇಲಾಖೆ ಈ ಬಗ್ಗೆ ಗಂಭೀರವಾಗಿ ಪರಿಗಣಿಸಲಿಲ್ಲ ಎಂಬ ಅಸಮಾಧಾನ ಜನರಿಗೆ ಇದೆ.

ಆದರೆ ಈ ಸಿಟ್ಟು ಆನೆಯ ಮೇಲೆ ಜನರಿಗೆ ಇಲ್ಲ. ಆನೆಯ ಮೇಲೆ ಪ್ರೀತಿ ಇದೆ. ಪೆಟ್ಟಾಗಿ ನರಳುತ್ತಿದ್ದ ಆನೆಯ ಮೇಲೆ ರಕ್ಷಣೆಗೆ   ಇಲಾಖೆಗಿಂತಲೂ ಹೆಚ್ಚು ಕಾಳಜಿ, ಪ್ರೀತಿ ಜನರಿಗೆ ಇತ್ತು. ಚಿಕಿತ್ಸೆ ಪಡೆದ ಕಾಡಾನೆಗೆ ಇನ್ನೊಂದು ಆನೆ ತಿವಿಯುವುದು  ಹಾಗೂ ಜಗಳ ಮಾಡುವ ಬಗ್ಗೆ ರಾತ್ರಿ ಸ್ಥಳೀಯರಿಗೆ ತಿಳಿಯಿತು. ಆದರೆ  ಬೆಳಗ್ಗೆ ಸ್ಥಳೀಯರು ಕಾಡಿಗೆ ತೆರಳಿದ್ದು ಈ ವೇಳೆ ಗಾಯಗೊಂಡ ಆನೆಯ ಮತ್ತು ಮತ್ತೊಂದು ಬ್ರಹತ್ ಗಾತ್ರದ ದಂತವಿರುವ ಆನೆ ಮಧ್ಯೆ ಘರ್ಷಣೆ ನಡೆಯುತ್ತಿತ್ತು. ಈ ವೇಳೆ ಸ್ಥಳಿಯರು ಆನೆಯನ್ನು ಶಬ್ಧ ಮಾಡಿ ಓಡಿಸುವ ಪ್ರಯತ್ನ ನಡೆಸಿ ಗಾಯಗೊಂಡ ಆನೆಯನ್ನು ಧಾಳಿಯಿಂದ ರಕ್ಷಿಸುವ ಪ್ರಯತ್ನಿಸಿದರು. ಈ ವೇಳೆ ಆನೆ  ಸ್ಥಳಿಯರನ್ನು ಬೆನ್ನಟ್ಟಿದೆ. ಜನರ ಈ ಪ್ರೀತಿ ಗಾಯಗೊಂಡ ಆನೆಯೂ ಕೃತಜ್ಞತೆ ಸಲ್ಲಿಸುತ್ತಿದೆ. ಆನೆಯ  ಧಾಳಿಯಿಂದ ಬೆದರಿದ ಆನೆ ಕಾಡಿನತ್ತ ತೆರಳಲು ಹಿಂದೇಟು ಹಾಕುತಿದ್ದು. ಜನವಸತಿ ಪ್ರದೇಶದತ್ತ ಬರಲು ಹವಣಿಸುತ್ತಿದೆ. ಕಳೆದ ಮೂರು ದಿನಗಳಿಂದ ಆನೆಗೆ ಆಹಾರದ ಕೊರತೆ ಆಗದಂತೆ ಬೈನೆಮರದ ಮೇವನ್ನು ಸ್ಥಳಿಯರು ಕಾಡಿಗೆ ತೆಗೆದುಕೊಂಡು ಹೋಗಿ ಆನೆಗೆ ಪೂರೈಸುತ್ತಿದ್ದಾರೆ.

ಇದು ಒಂದು ಆನೆಯ ಕತೆ.

Advertisement

ಕಾಡಾನೆ ಕೃಷಿಗೆ ತೊಂದರೆ ನೀಡುತ್ತಿದ್ದರೂ ಕೃಷಿಕರು ಆನೆಯ ರಕ್ಷಣೆಗೆ ಈಗ ಮುಂದಾಗಿದ್ದಾರೆ. ಆನೆಯ ಜೀವ ಉಳಿಯಬೇಕು ಎಂದು ಪಣ ತೊಟ್ಟಿದ್ದಾರೆ. ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸುತ್ತಾರೆ. ಹಾಗಂತ ಇಲಾಖೆಯೂ ಸುಮ್ಮನೆ ಕುಳಿತಿಲ್ಲ. ಪ್ರಯತ್ನ ಮಾಡುತ್ತಿದೆ. ಊರ ಮಂದಿ ಮಾತ್ರಾ ದಿನವೂ ಆನೆಯ ಚಲನವಲನ ಗಮಿಸುತ್ತಾರೆ. ಆನೆಗೆ ಆಹಾರ ಕೊಡುತ್ತಾರೆ. ಈಗ ಆನೆಯನ್ನು ವರ್ಗಾವಣೆ ಮಾಡಿ ಅಂತ ಜನರೇ ಇಲಾಖೆಯನ್ನು ಒತ್ತಾಯ ಮಾಡುತ್ತಿದ್ದಾರೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

11 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

21 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

22 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

23 hours ago