MIRROR FOCUS

ಕೃಷಿಗೆ ಕಾಡುವ ಕಾಡಾನೆಯ ಮುದ್ದಿಸುವ ಕೃಷಿಕರು ಇವರು…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಾಳುಗೋಡು : ಅದು ಕಾಡಾನೆ. ಸದಾ ಕೃಷಿಗೆ ಹಾನಿ ಮಾಡುವ ಮದ್ದಾನೆ ಅದು. ಆನೆ ದಾಳಿಗೆ ಸದಾ ಶಪಿಸುವ ಜನ ಅವರು. ಇಂದು ಕಾಡಾನೆಯನ್ನು ಮುದ್ದಿಸುತ್ತಾರೆ, ತಮ್ಮ ಮನೆಯ ಸಾಕು ಪ್ರಾಣಿಗೆ ನೋವಾದ ಸಂಕಟ ಅವರಲ್ಲಿದೆ. ಇದು ಬಾಳುಗೋಡಿನಲ್ಲಿ ನೋವಿನಿಂದ ಚಡಪಡಿಸುವ ಆನೆಯ ಕತೆ.

Advertisement
Advertisement

ಬಾಳುಗೋಡು ಮೀಸಲು ಅರಣ್ಯದಲ್ಲಿ ಸಲಗಗಳ ನಡುವೆ ಕಾಳಗ ನಡೆದು ಒಂದು ಆನೆಗೆ ಗಾಯವಾಗಿತ್ತು. ಗಾಯಗೊಂಡ  ಕಾಡಾನೆಗೆ ಹೇಗೂ ಬುಧವಾರ ಚಿಕಿತ್ಸೆ ನೀಡಲಾಯಿತು. ಬುಧವಾರ ಸಂಜೆ ಸ್ವಲ್ಪ ಚೇತರಿಸಿಕೊಂಡರು ಕೊಂಚ ಓಡಾಟಕ್ಕೆ ಶುರು ಮಾಡಿತು. ಭಾನುವಾರ  ಮತ್ತೆ ಕಾಡಾನೆಗಳ ಕಾದಾಟದಿಂದ ಆನೆಗೆ ಮತ್ತೆ ನೋವಾಗಿದೆ. ಈಗ ಕಾಡಿನಲ್ಲಿ  ಮತ್ತೆ ಚಡಪಡಿಸುತ್ತಿದೆ.

ಮಂಗಳವಾರ ಮತ್ತೆ ಇನ್ನೊಂದು ಕಾಡಾನೆ ನಾಡಿನ ಕಡೆಗೆ ಬಂದಿದೆ. ಆದರೆ  ಏನೂ ಮಾಡಿಲ್ಲ. ಗಾಯಗೊಂಡ ಆನೆಯ ಪಕ್ಕ ಬಂದಿದೆ. ಜೊತೆಗೆ ಕೃಷಿ ಭೂಮಿಗೂ ಹಾನಿ ಮಾಡಿದೆ. ಭಾನುವಾರ ತಡರಾತ್ರಿ ಬಾಳುಗೋಡು  ಭಾಗದ ಹಲವು ಮಂದಿ  ಕೃಷಿಕರ ತೋಟಗಳಿಗೆ ನುಗ್ಗಿವೆ. ಇಂತಹ ಪುಂಡಾನೆಯ ಸ್ಥಳಾಂತರ ಮಾಡಬೇಕು ಎಂದು ಅರಣ್ಯ ಇಲಾಖೆಗೆ ಕೃಷಿಕರು ಹೇಳಿದ್ದಾರೆ. ಆದರೂ ಇಲಾಖೆ ಈ ಬಗ್ಗೆ ಗಂಭೀರವಾಗಿ ಪರಿಗಣಿಸಲಿಲ್ಲ ಎಂಬ ಅಸಮಾಧಾನ ಜನರಿಗೆ ಇದೆ.

ಆದರೆ ಈ ಸಿಟ್ಟು ಆನೆಯ ಮೇಲೆ ಜನರಿಗೆ ಇಲ್ಲ. ಆನೆಯ ಮೇಲೆ ಪ್ರೀತಿ ಇದೆ. ಪೆಟ್ಟಾಗಿ ನರಳುತ್ತಿದ್ದ ಆನೆಯ ಮೇಲೆ ರಕ್ಷಣೆಗೆ   ಇಲಾಖೆಗಿಂತಲೂ ಹೆಚ್ಚು ಕಾಳಜಿ, ಪ್ರೀತಿ ಜನರಿಗೆ ಇತ್ತು. ಚಿಕಿತ್ಸೆ ಪಡೆದ ಕಾಡಾನೆಗೆ ಇನ್ನೊಂದು ಆನೆ ತಿವಿಯುವುದು  ಹಾಗೂ ಜಗಳ ಮಾಡುವ ಬಗ್ಗೆ ರಾತ್ರಿ ಸ್ಥಳೀಯರಿಗೆ ತಿಳಿಯಿತು. ಆದರೆ  ಬೆಳಗ್ಗೆ ಸ್ಥಳೀಯರು ಕಾಡಿಗೆ ತೆರಳಿದ್ದು ಈ ವೇಳೆ ಗಾಯಗೊಂಡ ಆನೆಯ ಮತ್ತು ಮತ್ತೊಂದು ಬ್ರಹತ್ ಗಾತ್ರದ ದಂತವಿರುವ ಆನೆ ಮಧ್ಯೆ ಘರ್ಷಣೆ ನಡೆಯುತ್ತಿತ್ತು. ಈ ವೇಳೆ ಸ್ಥಳಿಯರು ಆನೆಯನ್ನು ಶಬ್ಧ ಮಾಡಿ ಓಡಿಸುವ ಪ್ರಯತ್ನ ನಡೆಸಿ ಗಾಯಗೊಂಡ ಆನೆಯನ್ನು ಧಾಳಿಯಿಂದ ರಕ್ಷಿಸುವ ಪ್ರಯತ್ನಿಸಿದರು. ಈ ವೇಳೆ ಆನೆ  ಸ್ಥಳಿಯರನ್ನು ಬೆನ್ನಟ್ಟಿದೆ. ಜನರ ಈ ಪ್ರೀತಿ ಗಾಯಗೊಂಡ ಆನೆಯೂ ಕೃತಜ್ಞತೆ ಸಲ್ಲಿಸುತ್ತಿದೆ. ಆನೆಯ  ಧಾಳಿಯಿಂದ ಬೆದರಿದ ಆನೆ ಕಾಡಿನತ್ತ ತೆರಳಲು ಹಿಂದೇಟು ಹಾಕುತಿದ್ದು. ಜನವಸತಿ ಪ್ರದೇಶದತ್ತ ಬರಲು ಹವಣಿಸುತ್ತಿದೆ. ಕಳೆದ ಮೂರು ದಿನಗಳಿಂದ ಆನೆಗೆ ಆಹಾರದ ಕೊರತೆ ಆಗದಂತೆ ಬೈನೆಮರದ ಮೇವನ್ನು ಸ್ಥಳಿಯರು ಕಾಡಿಗೆ ತೆಗೆದುಕೊಂಡು ಹೋಗಿ ಆನೆಗೆ ಪೂರೈಸುತ್ತಿದ್ದಾರೆ.

ಇದು ಒಂದು ಆನೆಯ ಕತೆ.

Advertisement

ಕಾಡಾನೆ ಕೃಷಿಗೆ ತೊಂದರೆ ನೀಡುತ್ತಿದ್ದರೂ ಕೃಷಿಕರು ಆನೆಯ ರಕ್ಷಣೆಗೆ ಈಗ ಮುಂದಾಗಿದ್ದಾರೆ. ಆನೆಯ ಜೀವ ಉಳಿಯಬೇಕು ಎಂದು ಪಣ ತೊಟ್ಟಿದ್ದಾರೆ. ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸುತ್ತಾರೆ. ಹಾಗಂತ ಇಲಾಖೆಯೂ ಸುಮ್ಮನೆ ಕುಳಿತಿಲ್ಲ. ಪ್ರಯತ್ನ ಮಾಡುತ್ತಿದೆ. ಊರ ಮಂದಿ ಮಾತ್ರಾ ದಿನವೂ ಆನೆಯ ಚಲನವಲನ ಗಮಿಸುತ್ತಾರೆ. ಆನೆಗೆ ಆಹಾರ ಕೊಡುತ್ತಾರೆ. ಈಗ ಆನೆಯನ್ನು ವರ್ಗಾವಣೆ ಮಾಡಿ ಅಂತ ಜನರೇ ಇಲಾಖೆಯನ್ನು ಒತ್ತಾಯ ಮಾಡುತ್ತಿದ್ದಾರೆ.

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ | ಜನರು ಆತಂಕ ಪಡುವ ಅಗತ್ಯವಿಲ್ಲ | ಸಚಿವ ದಿನೇಶ್ ಗುಂಡೂರಾವ್

ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

2 hours ago

ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ರೆಡ್‌-ಎಲ್ಲೋ ಎಲರ್ಟ್‌ |

ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…

2 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…

8 hours ago

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

13 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

14 hours ago