ಬಾಳುಗೋಡು : ಅದು ಕಾಡಾನೆ. ಸದಾ ಕೃಷಿಗೆ ಹಾನಿ ಮಾಡುವ ಮದ್ದಾನೆ ಅದು. ಆನೆ ದಾಳಿಗೆ ಸದಾ ಶಪಿಸುವ ಜನ ಅವರು. ಇಂದು ಕಾಡಾನೆಯನ್ನು ಮುದ್ದಿಸುತ್ತಾರೆ, ತಮ್ಮ ಮನೆಯ ಸಾಕು ಪ್ರಾಣಿಗೆ ನೋವಾದ ಸಂಕಟ ಅವರಲ್ಲಿದೆ. ಇದು ಬಾಳುಗೋಡಿನಲ್ಲಿ ನೋವಿನಿಂದ ಚಡಪಡಿಸುವ ಆನೆಯ ಕತೆ.
ಬಾಳುಗೋಡು ಮೀಸಲು ಅರಣ್ಯದಲ್ಲಿ ಸಲಗಗಳ ನಡುವೆ ಕಾಳಗ ನಡೆದು ಒಂದು ಆನೆಗೆ ಗಾಯವಾಗಿತ್ತು. ಗಾಯಗೊಂಡ ಕಾಡಾನೆಗೆ ಹೇಗೂ ಬುಧವಾರ ಚಿಕಿತ್ಸೆ ನೀಡಲಾಯಿತು. ಬುಧವಾರ ಸಂಜೆ ಸ್ವಲ್ಪ ಚೇತರಿಸಿಕೊಂಡರು ಕೊಂಚ ಓಡಾಟಕ್ಕೆ ಶುರು ಮಾಡಿತು. ಭಾನುವಾರ ಮತ್ತೆ ಕಾಡಾನೆಗಳ ಕಾದಾಟದಿಂದ ಆನೆಗೆ ಮತ್ತೆ ನೋವಾಗಿದೆ. ಈಗ ಕಾಡಿನಲ್ಲಿ ಮತ್ತೆ ಚಡಪಡಿಸುತ್ತಿದೆ.
ಮಂಗಳವಾರ ಮತ್ತೆ ಇನ್ನೊಂದು ಕಾಡಾನೆ ನಾಡಿನ ಕಡೆಗೆ ಬಂದಿದೆ. ಆದರೆ ಏನೂ ಮಾಡಿಲ್ಲ. ಗಾಯಗೊಂಡ ಆನೆಯ ಪಕ್ಕ ಬಂದಿದೆ. ಜೊತೆಗೆ ಕೃಷಿ ಭೂಮಿಗೂ ಹಾನಿ ಮಾಡಿದೆ. ಭಾನುವಾರ ತಡರಾತ್ರಿ ಬಾಳುಗೋಡು ಭಾಗದ ಹಲವು ಮಂದಿ ಕೃಷಿಕರ ತೋಟಗಳಿಗೆ ನುಗ್ಗಿವೆ. ಇಂತಹ ಪುಂಡಾನೆಯ ಸ್ಥಳಾಂತರ ಮಾಡಬೇಕು ಎಂದು ಅರಣ್ಯ ಇಲಾಖೆಗೆ ಕೃಷಿಕರು ಹೇಳಿದ್ದಾರೆ. ಆದರೂ ಇಲಾಖೆ ಈ ಬಗ್ಗೆ ಗಂಭೀರವಾಗಿ ಪರಿಗಣಿಸಲಿಲ್ಲ ಎಂಬ ಅಸಮಾಧಾನ ಜನರಿಗೆ ಇದೆ.
ಆದರೆ ಈ ಸಿಟ್ಟು ಆನೆಯ ಮೇಲೆ ಜನರಿಗೆ ಇಲ್ಲ. ಆನೆಯ ಮೇಲೆ ಪ್ರೀತಿ ಇದೆ. ಪೆಟ್ಟಾಗಿ ನರಳುತ್ತಿದ್ದ ಆನೆಯ ಮೇಲೆ ರಕ್ಷಣೆಗೆ ಇಲಾಖೆಗಿಂತಲೂ ಹೆಚ್ಚು ಕಾಳಜಿ, ಪ್ರೀತಿ ಜನರಿಗೆ ಇತ್ತು. ಚಿಕಿತ್ಸೆ ಪಡೆದ ಕಾಡಾನೆಗೆ ಇನ್ನೊಂದು ಆನೆ ತಿವಿಯುವುದು ಹಾಗೂ ಜಗಳ ಮಾಡುವ ಬಗ್ಗೆ ರಾತ್ರಿ ಸ್ಥಳೀಯರಿಗೆ ತಿಳಿಯಿತು. ಆದರೆ ಬೆಳಗ್ಗೆ ಸ್ಥಳೀಯರು ಕಾಡಿಗೆ ತೆರಳಿದ್ದು ಈ ವೇಳೆ ಗಾಯಗೊಂಡ ಆನೆಯ ಮತ್ತು ಮತ್ತೊಂದು ಬ್ರಹತ್ ಗಾತ್ರದ ದಂತವಿರುವ ಆನೆ ಮಧ್ಯೆ ಘರ್ಷಣೆ ನಡೆಯುತ್ತಿತ್ತು. ಈ ವೇಳೆ ಸ್ಥಳಿಯರು ಆನೆಯನ್ನು ಶಬ್ಧ ಮಾಡಿ ಓಡಿಸುವ ಪ್ರಯತ್ನ ನಡೆಸಿ ಗಾಯಗೊಂಡ ಆನೆಯನ್ನು ಧಾಳಿಯಿಂದ ರಕ್ಷಿಸುವ ಪ್ರಯತ್ನಿಸಿದರು. ಈ ವೇಳೆ ಆನೆ ಸ್ಥಳಿಯರನ್ನು ಬೆನ್ನಟ್ಟಿದೆ. ಜನರ ಈ ಪ್ರೀತಿ ಗಾಯಗೊಂಡ ಆನೆಯೂ ಕೃತಜ್ಞತೆ ಸಲ್ಲಿಸುತ್ತಿದೆ. ಆನೆಯ ಧಾಳಿಯಿಂದ ಬೆದರಿದ ಆನೆ ಕಾಡಿನತ್ತ ತೆರಳಲು ಹಿಂದೇಟು ಹಾಕುತಿದ್ದು. ಜನವಸತಿ ಪ್ರದೇಶದತ್ತ ಬರಲು ಹವಣಿಸುತ್ತಿದೆ. ಕಳೆದ ಮೂರು ದಿನಗಳಿಂದ ಆನೆಗೆ ಆಹಾರದ ಕೊರತೆ ಆಗದಂತೆ ಬೈನೆಮರದ ಮೇವನ್ನು ಸ್ಥಳಿಯರು ಕಾಡಿಗೆ ತೆಗೆದುಕೊಂಡು ಹೋಗಿ ಆನೆಗೆ ಪೂರೈಸುತ್ತಿದ್ದಾರೆ.
ಇದು ಒಂದು ಆನೆಯ ಕತೆ.
ಕಾಡಾನೆ ಕೃಷಿಗೆ ತೊಂದರೆ ನೀಡುತ್ತಿದ್ದರೂ ಕೃಷಿಕರು ಆನೆಯ ರಕ್ಷಣೆಗೆ ಈಗ ಮುಂದಾಗಿದ್ದಾರೆ. ಆನೆಯ ಜೀವ ಉಳಿಯಬೇಕು ಎಂದು ಪಣ ತೊಟ್ಟಿದ್ದಾರೆ. ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸುತ್ತಾರೆ. ಹಾಗಂತ ಇಲಾಖೆಯೂ ಸುಮ್ಮನೆ ಕುಳಿತಿಲ್ಲ. ಪ್ರಯತ್ನ ಮಾಡುತ್ತಿದೆ. ಊರ ಮಂದಿ ಮಾತ್ರಾ ದಿನವೂ ಆನೆಯ ಚಲನವಲನ ಗಮಿಸುತ್ತಾರೆ. ಆನೆಗೆ ಆಹಾರ ಕೊಡುತ್ತಾರೆ. ಈಗ ಆನೆಯನ್ನು ವರ್ಗಾವಣೆ ಮಾಡಿ ಅಂತ ಜನರೇ ಇಲಾಖೆಯನ್ನು ಒತ್ತಾಯ ಮಾಡುತ್ತಿದ್ದಾರೆ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…