Advertisement
MIRROR FOCUS

ಕೃಷಿಗೆ ಕಾಡುವ ಕಾಡಾನೆಯ ಮುದ್ದಿಸುವ ಕೃಷಿಕರು ಇವರು…!

Share

ಬಾಳುಗೋಡು : ಅದು ಕಾಡಾನೆ. ಸದಾ ಕೃಷಿಗೆ ಹಾನಿ ಮಾಡುವ ಮದ್ದಾನೆ ಅದು. ಆನೆ ದಾಳಿಗೆ ಸದಾ ಶಪಿಸುವ ಜನ ಅವರು. ಇಂದು ಕಾಡಾನೆಯನ್ನು ಮುದ್ದಿಸುತ್ತಾರೆ, ತಮ್ಮ ಮನೆಯ ಸಾಕು ಪ್ರಾಣಿಗೆ ನೋವಾದ ಸಂಕಟ ಅವರಲ್ಲಿದೆ. ಇದು ಬಾಳುಗೋಡಿನಲ್ಲಿ ನೋವಿನಿಂದ ಚಡಪಡಿಸುವ ಆನೆಯ ಕತೆ.

ಬಾಳುಗೋಡು ಮೀಸಲು ಅರಣ್ಯದಲ್ಲಿ ಸಲಗಗಳ ನಡುವೆ ಕಾಳಗ ನಡೆದು ಒಂದು ಆನೆಗೆ ಗಾಯವಾಗಿತ್ತು. ಗಾಯಗೊಂಡ  ಕಾಡಾನೆಗೆ ಹೇಗೂ ಬುಧವಾರ ಚಿಕಿತ್ಸೆ ನೀಡಲಾಯಿತು. ಬುಧವಾರ ಸಂಜೆ ಸ್ವಲ್ಪ ಚೇತರಿಸಿಕೊಂಡರು ಕೊಂಚ ಓಡಾಟಕ್ಕೆ ಶುರು ಮಾಡಿತು. ಭಾನುವಾರ  ಮತ್ತೆ ಕಾಡಾನೆಗಳ ಕಾದಾಟದಿಂದ ಆನೆಗೆ ಮತ್ತೆ ನೋವಾಗಿದೆ. ಈಗ ಕಾಡಿನಲ್ಲಿ  ಮತ್ತೆ ಚಡಪಡಿಸುತ್ತಿದೆ.

ಮಂಗಳವಾರ ಮತ್ತೆ ಇನ್ನೊಂದು ಕಾಡಾನೆ ನಾಡಿನ ಕಡೆಗೆ ಬಂದಿದೆ. ಆದರೆ  ಏನೂ ಮಾಡಿಲ್ಲ. ಗಾಯಗೊಂಡ ಆನೆಯ ಪಕ್ಕ ಬಂದಿದೆ. ಜೊತೆಗೆ ಕೃಷಿ ಭೂಮಿಗೂ ಹಾನಿ ಮಾಡಿದೆ. ಭಾನುವಾರ ತಡರಾತ್ರಿ ಬಾಳುಗೋಡು  ಭಾಗದ ಹಲವು ಮಂದಿ  ಕೃಷಿಕರ ತೋಟಗಳಿಗೆ ನುಗ್ಗಿವೆ. ಇಂತಹ ಪುಂಡಾನೆಯ ಸ್ಥಳಾಂತರ ಮಾಡಬೇಕು ಎಂದು ಅರಣ್ಯ ಇಲಾಖೆಗೆ ಕೃಷಿಕರು ಹೇಳಿದ್ದಾರೆ. ಆದರೂ ಇಲಾಖೆ ಈ ಬಗ್ಗೆ ಗಂಭೀರವಾಗಿ ಪರಿಗಣಿಸಲಿಲ್ಲ ಎಂಬ ಅಸಮಾಧಾನ ಜನರಿಗೆ ಇದೆ.

ಆದರೆ ಈ ಸಿಟ್ಟು ಆನೆಯ ಮೇಲೆ ಜನರಿಗೆ ಇಲ್ಲ. ಆನೆಯ ಮೇಲೆ ಪ್ರೀತಿ ಇದೆ. ಪೆಟ್ಟಾಗಿ ನರಳುತ್ತಿದ್ದ ಆನೆಯ ಮೇಲೆ ರಕ್ಷಣೆಗೆ   ಇಲಾಖೆಗಿಂತಲೂ ಹೆಚ್ಚು ಕಾಳಜಿ, ಪ್ರೀತಿ ಜನರಿಗೆ ಇತ್ತು. ಚಿಕಿತ್ಸೆ ಪಡೆದ ಕಾಡಾನೆಗೆ ಇನ್ನೊಂದು ಆನೆ ತಿವಿಯುವುದು  ಹಾಗೂ ಜಗಳ ಮಾಡುವ ಬಗ್ಗೆ ರಾತ್ರಿ ಸ್ಥಳೀಯರಿಗೆ ತಿಳಿಯಿತು. ಆದರೆ  ಬೆಳಗ್ಗೆ ಸ್ಥಳೀಯರು ಕಾಡಿಗೆ ತೆರಳಿದ್ದು ಈ ವೇಳೆ ಗಾಯಗೊಂಡ ಆನೆಯ ಮತ್ತು ಮತ್ತೊಂದು ಬ್ರಹತ್ ಗಾತ್ರದ ದಂತವಿರುವ ಆನೆ ಮಧ್ಯೆ ಘರ್ಷಣೆ ನಡೆಯುತ್ತಿತ್ತು. ಈ ವೇಳೆ ಸ್ಥಳಿಯರು ಆನೆಯನ್ನು ಶಬ್ಧ ಮಾಡಿ ಓಡಿಸುವ ಪ್ರಯತ್ನ ನಡೆಸಿ ಗಾಯಗೊಂಡ ಆನೆಯನ್ನು ಧಾಳಿಯಿಂದ ರಕ್ಷಿಸುವ ಪ್ರಯತ್ನಿಸಿದರು. ಈ ವೇಳೆ ಆನೆ  ಸ್ಥಳಿಯರನ್ನು ಬೆನ್ನಟ್ಟಿದೆ. ಜನರ ಈ ಪ್ರೀತಿ ಗಾಯಗೊಂಡ ಆನೆಯೂ ಕೃತಜ್ಞತೆ ಸಲ್ಲಿಸುತ್ತಿದೆ. ಆನೆಯ  ಧಾಳಿಯಿಂದ ಬೆದರಿದ ಆನೆ ಕಾಡಿನತ್ತ ತೆರಳಲು ಹಿಂದೇಟು ಹಾಕುತಿದ್ದು. ಜನವಸತಿ ಪ್ರದೇಶದತ್ತ ಬರಲು ಹವಣಿಸುತ್ತಿದೆ. ಕಳೆದ ಮೂರು ದಿನಗಳಿಂದ ಆನೆಗೆ ಆಹಾರದ ಕೊರತೆ ಆಗದಂತೆ ಬೈನೆಮರದ ಮೇವನ್ನು ಸ್ಥಳಿಯರು ಕಾಡಿಗೆ ತೆಗೆದುಕೊಂಡು ಹೋಗಿ ಆನೆಗೆ ಪೂರೈಸುತ್ತಿದ್ದಾರೆ.

ಇದು ಒಂದು ಆನೆಯ ಕತೆ.

ಕಾಡಾನೆ ಕೃಷಿಗೆ ತೊಂದರೆ ನೀಡುತ್ತಿದ್ದರೂ ಕೃಷಿಕರು ಆನೆಯ ರಕ್ಷಣೆಗೆ ಈಗ ಮುಂದಾಗಿದ್ದಾರೆ. ಆನೆಯ ಜೀವ ಉಳಿಯಬೇಕು ಎಂದು ಪಣ ತೊಟ್ಟಿದ್ದಾರೆ. ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸುತ್ತಾರೆ. ಹಾಗಂತ ಇಲಾಖೆಯೂ ಸುಮ್ಮನೆ ಕುಳಿತಿಲ್ಲ. ಪ್ರಯತ್ನ ಮಾಡುತ್ತಿದೆ. ಊರ ಮಂದಿ ಮಾತ್ರಾ ದಿನವೂ ಆನೆಯ ಚಲನವಲನ ಗಮಿಸುತ್ತಾರೆ. ಆನೆಗೆ ಆಹಾರ ಕೊಡುತ್ತಾರೆ. ಈಗ ಆನೆಯನ್ನು ವರ್ಗಾವಣೆ ಮಾಡಿ ಅಂತ ಜನರೇ ಇಲಾಖೆಯನ್ನು ಒತ್ತಾಯ ಮಾಡುತ್ತಿದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago