Advertisement
MIRROR FOCUS

ಕೃಷಿ ಅಭಿವೃದ್ಧಿಯತ್ತ ವಿದ್ಯಾರ್ಥಿಗಳ ಚಿತ್ತ : ಸಬ್ ಜೂನಿಯರ್ ವಿದ್ಯಾರ್ಥಿಗಳಿಂದ 153 ಟೆಕ್ನಿಕ್….!

Share

ಅಗ್ರಿಟಿಂಕರಿಂಗ್ ಫೆಸ್ಟ್ ನ ವಿವಿಧ ಸಂಶೋಧನೆಗಳ ಕಡೆಗೆ ಹೆಜ್ಜೆ ಹಾಕುತ್ತಿದ್ದಾಗ ಪುಟ್ಟ ಹುಡುಗನೊಬ್ಬ ಕೈ ಹಿಡಿದು ಎಳೆದು ” ನನ್ನ ಸಂಶೋಧನೆ ನೋಡಿ….” ಎಂದು ನಿರರ್ಗಳವಾಗಿ ವಿವರಿಸಿದ. ಆತ 4 ನೇ ತರಗತಿ ವಿದ್ಯಾರ್ಥಿ. ಇನ್ನೊಬ್ಬ ಕೀಟಗಳ ನಿಯಂತ್ರಣದ ಕಡೆಗೆ ತನ್ನದೇ ಆಲೋಚನೆ ಹರಿಯಬಿಟ್ಟ, ಇನ್ನೊಂದು ಕಡೆ ಗಿಡಗಳಿಗೆ ಸುಲಭವಾಗಿ ಗೊಬ್ಬರ ಉಣಿಸುವ ರೀತಿಯನ್ನು ವಿವರಿಸುತ್ತಿದ್ದ. ಇಲ್ಲರೂ ಪುಟ್ಟ ಪುಟ್ಟ ಮಕ್ಕಳು… !. ಇವರ ಆಲೋಚನೆಗಳು ಕೃಷಿಯತ್ತ , ಕೃಷಿ ಅಭಿವೃದ್ಧಿ ಕಡೆಗೆ ಇದೆ. ಈ ಯೋಚನೆಗಳಿಗೆ ಈಗ ಪ್ರೋತ್ಸಾಹ ನೀಡಬೇಕಾದ್ದು ಕೃಷಿಕರೇ… ಏಕೆಂದರೆ ಇದೆಲ್ಲಾ ಭವಿಷ್ಯ. ಕೃಷಿ ದೇಶ ಉಳಿಯಬೇಕಾದರೆ ಈ ಯೋಚನೆಗಳಿಗೆ ನೀರೆರೆಯಬೇಕಿದೆ.

ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ವಠಾರದಲ್ಲಿ ಅಂಗ್ರಿ ಟಿಂಕರಿಂಗ್ ಫೆಸ್ಟ್ ನಡೆಯುತ್ತಿದೆ. ಕೃಷಿ ಅನ್ವೇಷಣೆಗಳ ಪ್ರದರ್ಶನ ಇದು. ಇದರಲ್ಲಿ  4 ವಿಭಾಗ ಮಾಡಿದ್ದಾರೆ. ಸಬ್ ಜೂನಿಯರ್ . ಜೂನಿಯರ್ , ಸೀನಿಯರ್ ಹಾಗೂ ಜನರಲ್ ಪಬ್ಲಿಕ್. ಹೀಗೆ ಒಟ್ಟು ಬಂದಿರುವ ಅನ್ವೇಷಣೆಗಳು 307. ಇದರಲ್ಲಿ  ಸಬ್ ಜೂನಿಯರ್ ವಿಭಾಗದಲ್ಲಿ 153 ಅನ್ವೇಷಣೆ ಇದೆ. ಅಂದರೆ ಪುಟ್ಟ ಪುಟ್ಟ ಮಕ್ಕಳ ಆಸಕ್ತಿಯ ಸಂಶೋಧನೆ ಇದು. ಉಳಿದಂತೆ ಜೂನಿಯರ್ ವಿಭಾಗದಲ್ಲಿ 110 , ಸೀನಿಯರ್ ವಿಭಾಗದಲ್ಲಿ 23, ಜನರಲ್ ಪಬ್ಲಿಕ್ ವಿಭಾಗದಲ್ಲಿ 23 ಸಂಶೋಧನೆಗಳು ಪ್ರದರ್ಶನಗೊಂಡಿವೆ. ಗಮನಿಸಬೇಕಾದ್ದು ಎಳೆಯ ಮಕ್ಕಳ ಸಂಶೋಧನಾ ಮನಸ್ಸುಗಳು, ಗಿಡ, ಕೃಷಿ ಕಡೆಗಿನ ಮನಸ್ಸು ಏಕೆ ಬದಲಾಗುತ್ತಿದೆ. ಈ ಬದಲಾವಣೆ ತಡೆಗೆ ಏನು ಪರಿಹಾರ ? ಈ ಬಾರಿಯ ವಿದ್ಯಾರ್ಥಿಗಳ ಈ ಸಂಶೋಧನಾ ಫೆಸ್ಟ್ ನಲ್ಲಿ  ಭಾಗವಹಿಸಿ ಆ ಪುಟಾಣಿಗಳಿಗೆ ಪ್ರೋತ್ಸಾಹಿಸಿದರೆ ಇದೇ ಭವಿಷ್ಯದ ಕೃಷಿ ಬದಲಾವಣೆ. ಪುಟ್ಟ ಮಕ್ಕಳ ಸಂಶೋಧನೆ ನೋಡಿದಾಗ ಎಲ್ಲಿ ಸಿಗುತ್ತದೆ ಎಂದು ಕೇಳಬೇಡಿ, ಹೇಗೆ ಮಾಡಿದಿ , ಶಹಭಾಸ್ ಎನ್ನಿ… ಇಷ್ಟೇ ಸಾಕು,. ಬಹುಮಾನ, ಪ್ರಶಸ್ತಿಗಿಂತಲೂ ಈ ಮಾತುಗಳು ಭವಿಷ್ಯದ ಕೃಷಿ ಬೆಳವಣಿಗೆಯ ಮೆಟ್ಟಿಲುಗಳೇ. ಹೀಗಾಗಿ ಫೆಸ್ಟ್ ಈ ಬಾರಿ ಯಶಸ್ಸಾಗಿದೆ.

ಉಳಿದಂತೆ ಪಾಪಸ್ ಕಳ್ಳಿ, ಗೇರುಬೀಜದಂತಹ ವಸ್ತುಗಳಿಂದ ತಯಾರಿಸಿದ ಸಾವಯವ ಕೀಟನಾಶಕ, ನೀರಿನ ಮರುಬಳಕೆಯ ಮಾದರಿ, ಉಳುವಿಕೆ ಮತ್ತು ಬಿತ್ತನೆ ಮಾಡುವುದಕ್ಕೆ ರೂಪಿಸಿದ ನವೀನ ಯಂತ್ರದ ಮಾದರಿ, ಹೈಡ್ರೋಫಾರ್ಮಿಂಗ್ ಮಾದರಿ, ಲಂಭ ಮಾದರಿಯ ಗಾರ್ಡನ್, ಒಣ ಅಡಿಕೆಯನ್ನು ಅಂಗಳದಿಂದ ನೇರವಗಿ ಗೋಣಿಚೀಲಕ್ಕೆ ತುಂಬಿಸುವ ಸಾಧನ,  ಗಿಡಗಳಿಗೆ ಔಷಧ ಸಿಂಪಡಣಾ ಮಾದರಿ ಮೊದಲಾದವುಗಳು ಗಮನಸೆಳೆದರೆ ನೀರಿನ ಉಳಿತಾಯ ಮಾದರಿಯೂ ಮಕ್ಕಳ ಕೈಚಳಕದಲ್ಲಿ  ಕಂಡಿತು.

ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಹೇಮಸ್ವಾತಿ ಮತ್ತು ಖುಷಿ ರೂಪಿಸಿದ ಪ್ಲಾಸ್ಟಿಕ್ ತ್ಯಾಜ್ಯದಿಂದ ಗ್ಯಾಸ್‍ ತಯಾರಿಕಾ ನೋಡುಗರನ್ನು ತಡೆದು ನಿಲ್ಲಿಸುವಂತಿತ್ತು. ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಮುಕ್ತಿ ಹೇಗೆ ಎಂಬ ಚಿಂತೆಯಲ್ಲಿರುವ ಸಂದರ್ಭದಲ್ಲಿ ಪುತ್ತೂರಿನ ಈ ವಿದ್ಯಾರ್ಥಿನಿಯರು ಪರಿಹಾರ ಕಂಡುಕೊಂಡಿದ್ದಾರೆ. ಪ್ಲಾಸ್ಟಿಕ್ ಅನ್ನು ನಿಗದಿತ ಶಾಖದಲ್ಲಿ ದ್ರವರೂಪಕ್ಕಿಳಿಸಿ ಅದರಿಂದ ಗ್ಯಾಸ್, ಪೆಟ್ರೋಲ್ ಪಡೆಯಬಹುದಾದ ಈ ಹುಡುಗಿಯರ ಮಾದರಿ ಮುಂದಿನ ದಿನಗಳಲ್ಲಿ ಜನಪ್ರಿಯವಾದರೆ ಅಚ್ಚರಿಯೇನೂ ಅಲ್ಲ. ಹೀಗೆ ಇನ್ನೂ ಹಲವು ಉಪಯುಕ್ತ ಮಾದರಿಗಳು ಪ್ರದರ್ಶನದಲ್ಲಿ ಮೂಡಿಬಂದು ಜನರನ್ನು ಸೆಳೆಯುತ್ತಿವೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

6 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

7 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

17 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago