ಸುಳ್ಯ: ಗ್ರಾಮೀಣ ಭಾಗದಲ್ಲಿ ಕೃಷಿ ಆಧಾರಿತ ಉದ್ದಿಮೆಯ ಸಾಧನೆಯನ್ನು ಗುರುತಿಸಿ ಸುಳ್ಯ ಜಯನಗರದ ನಿಸರ್ಗ ಇಂಡಸ್ಟ್ರೀಸ್ ನ ಮಾಲಕರಾದ ಕಸ್ತೂರಿಶಂಕರ್ ರವರಿಗೆ ನಿಟ್ಟೆ ಸಂಸ್ಥೆ ಹಾಗೂ ಕರ್ನಾಟಕ ಬ್ಯಾಂಕ್ ನವರ ಪ್ರತಿಷ್ಠಿತ ಎಮ್.ಎಸ್.ಎಮ್.ಈ.ಎಕ್ಸಲೆನ್ಸ್ ಅವಾರ್ಡ್ ಫಾರ್ ಬೆಸ್ಟ್ ರೂರಲ್ ಆಗ್ರೊ ಎಂಟರ್ಪ್ರೈಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಳೆದ 17 ವರ್ಷಗಳಿಂದ ಉತ್ತಮ ಗುಣಮಟ್ಟ ಹಾಗೂ ರಾಸಾಯನಿಕ ರಹಿತ ಶುದ್ಧ ಮಸಾಲ ಹುಡಿಗಳು ಹಾಗೂ ಆಹಾರ ಉತ್ಪನ್ನಗಳನ್ನು ತಯಾರಿಸುವ ಗುರಿಯೊಂದಿಗೆ ಪ್ರಾರಂಭಿಸಿದ ನಿಸರ್ಗಾ ಇಂಡೀಸ್ಟ್ರೀಸ್ ಇಂದು 30ಕ್ಕೂ ಹೆಚ್ಚಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ತನ್ನ ಸಂಸ್ಥೆಯಲ್ಲಿ 50ಕ್ಕೂ ಹೆಚ್ಚಿನ ಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಇವರ ಈ ಸಾಧನೆಯನ್ನು ಪರಿಗಣಿಸಿ ಡಿ.7ರಂದು ಮಂಗಳೂರಿನ ಒಶನ್ ಪರ್ಲ್ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಕಿರು, ಸಣ್ಣ ಹಾಗೂ ಮಧ್ಯಮ ಕೈಗಾರಿಕಗಳಿಗೆ ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಎಮ್.ಎಸ್.ಎಮ್.ಈ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಲಾಯಿತು.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…