ಸುಳ್ಯ: ಗ್ರಾಮೀಣ ಭಾಗದಲ್ಲಿ ಕೃಷಿ ಆಧಾರಿತ ಉದ್ದಿಮೆಯ ಸಾಧನೆಯನ್ನು ಗುರುತಿಸಿ ಸುಳ್ಯ ಜಯನಗರದ ನಿಸರ್ಗ ಇಂಡಸ್ಟ್ರೀಸ್ ನ ಮಾಲಕರಾದ ಕಸ್ತೂರಿಶಂಕರ್ ರವರಿಗೆ ನಿಟ್ಟೆ ಸಂಸ್ಥೆ ಹಾಗೂ ಕರ್ನಾಟಕ ಬ್ಯಾಂಕ್ ನವರ ಪ್ರತಿಷ್ಠಿತ ಎಮ್.ಎಸ್.ಎಮ್.ಈ.ಎಕ್ಸಲೆನ್ಸ್ ಅವಾರ್ಡ್ ಫಾರ್ ಬೆಸ್ಟ್ ರೂರಲ್ ಆಗ್ರೊ ಎಂಟರ್ಪ್ರೈಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಳೆದ 17 ವರ್ಷಗಳಿಂದ ಉತ್ತಮ ಗುಣಮಟ್ಟ ಹಾಗೂ ರಾಸಾಯನಿಕ ರಹಿತ ಶುದ್ಧ ಮಸಾಲ ಹುಡಿಗಳು ಹಾಗೂ ಆಹಾರ ಉತ್ಪನ್ನಗಳನ್ನು ತಯಾರಿಸುವ ಗುರಿಯೊಂದಿಗೆ ಪ್ರಾರಂಭಿಸಿದ ನಿಸರ್ಗಾ ಇಂಡೀಸ್ಟ್ರೀಸ್ ಇಂದು 30ಕ್ಕೂ ಹೆಚ್ಚಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ತನ್ನ ಸಂಸ್ಥೆಯಲ್ಲಿ 50ಕ್ಕೂ ಹೆಚ್ಚಿನ ಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಇವರ ಈ ಸಾಧನೆಯನ್ನು ಪರಿಗಣಿಸಿ ಡಿ.7ರಂದು ಮಂಗಳೂರಿನ ಒಶನ್ ಪರ್ಲ್ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಕಿರು, ಸಣ್ಣ ಹಾಗೂ ಮಧ್ಯಮ ಕೈಗಾರಿಕಗಳಿಗೆ ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಎಮ್.ಎಸ್.ಎಮ್.ಈ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಲಾಯಿತು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…