Advertisement
ರಾಜ್ಯ

ಕೃಷಿ ಆಧಾರಿತ ಉದ್ಯಮ ಸ್ಥಾಪನೆ, ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು: ಹೂಡಿಕೆದಾರರಿಗೆ ಮುಖ್ಯಮಂತ್ರಿ ಬಿ ಎಸ್ ವೈ ಮನವಿ

Share

ದಾವೊಸ್: ಸ್ವಿಟ್ಜರ್ಲೆಂಡಿನ ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೊದಲನೇ ದಿನವಾದ ಮಂಗಳವಾರ ರಾಜ್ಯದಲ್ಲಿ ಕೃಷಿ ಕೇಂದ್ರಿತ ಉದ್ಯಮ ಸ್ಥಾಪನೆ ಮಾಡುವಂತೆ ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಒತ್ತು ನೀಡುವಂತೆ ಮನವಿ ಮಾಡಿದರು.

ಮಂಗಳವಾರ ಬೆಳಿಗ್ಗೆ ಸ್ವಿಸ್ ಮೂಲದ 2000 ವ್ಯಾಟ್ ಕಂಪೆನಿಯ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ರೈತರ ಆತ್ಮಹತ್ಯೆಯ ಪ್ರವೃತ್ತಿಯನ್ನು ತಡೆಯುವ ನಿಟ್ಟಿನಲ್ಲಿ ಕೃಷಿ ಆಧಾರಿತ ಆರ್ಥಿಕತೆಯನ್ನು ಸುಧಾರಿಸುವ ಯೋಜನೆಗಳ ಕುರಿತು ಆಸಕ್ತಿ ವ್ಯಕ್ತಪಡಿಸಿದರು.

Advertisement

ರಾಜ್ಯಕ್ಕೆ ಹೊಸ ಯೋಜನೆಗಳು, ಬಂಡವಾಳ ಹೂಡಿಕೆ ಖಂಡಿತ ಬರಬೇಕು. ರಾಜ್ಯದ ಆರ್ಥಿಕತೆಗೆ ಉತ್ತೇಜನ ನೀಡುವ ಜೊತೆಗೆ ಯುವಕರನ್ನು ಸ್ವಾವಲಂಬಿಗಳನ್ನಾಗಿಸಲು ಉದ್ಯೋಗಾವಕಾಶ ಸೃಷ್ಟಿಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ಪಟ್ಟರು.

ಈ ಸಭೆಯಲ್ಲಿ 2000 ವ್ಯಾಟ್ ಕಂಪೆನಿಯ ಫುಡ್ ಕ್ಲಸ್ಟರ್ ಗಳ ಅಭಿವೃದ್ಧಿ ಯೋಜನೆಯ ಕುರಿತು ವಿಶೇಷ ಆಸಕ್ತಿ ವಹಿಸಿದ ಮುಖ್ಯಮಂತ್ರಿಗಳು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡುವ ಇಂತಹ ಯೋಜನೆಗಳಿಂದ ಕೃಷಿ ಆರ್ಥಿಕತೆ ಉತ್ತಮಗೊಳ್ಳಲಿದೆ ಎಂದು ಅಭಿಪ್ರಾಯಪಟ್ಟರು. ಈ ಕುರಿತು ಪ್ರಾತ್ಯಕ್ಷಿಕೆ ನೀಡಿದ ಕಂಪೆನಿಯ ಪ್ರತಿನಿಧಿಗಳು, ತಮ್ಮ ಬಳಿ ತಂತ್ರಜ್ಞಾನ ಇರುವುದಾಗಿ ಹಾಗೂ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಲು ಪೂರಕವಾದ ಫುಡ್ ಕ್ಲಸ್ಟರುಗಳ ಅಭಿವೃದ್ಧಿಯಲ್ಲಿ ಹೂಡಿಕೆ ಮಾಡಲು ಆಸಕ್ತಿ ಹೊಂದಿರುವುದಾಗಿ ವಿವರಿಸಿದರು.

Advertisement

“ಸತ್ವಪೂರ್ಣ ಆಹಾರ ಬೆಳೆಯಲು ಅಗತ್ಯವಿರುವ ಎಲ್ಲ ನೆರವು ಮತ್ತು ವೈಜ್ಞಾನಿಕ ಕೃಷಿ ತಂತ್ರಜ್ಞಾನಗಳನ್ನು ನಾವು ಒದಗಿಸಲಿದ್ದು, ಈ ಉತ್ಪನ್ನಗಳ ಮೌಲ್ಯವರ್ಧನೆಯ ಮೂಲಕ ಮಾರುಕಟ್ಟೆ ಒದಗಿಸಲಾಗುವುದು” ಎಂದು ಸಂಸ್ಥೆಯ ವಿಜ್ಞಾನಿ ಆಂಡ್ರಿಯಾಸ್ ಬಿಂಕರ್ಟ್ ಅವರು ತಿಳಿಸಿದರು.

ಕಂಪೆನಿಯ ಸಂಸ್ಥಾಪಕ ಪಾಲುದಾರ ಮಾಧವ್ ಭಾಗವತ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಸ್ಮಾರ್ಟ್ ಸಿಟಿಯ ವಿನೂತನ ಪರಿಕಲ್ಪನೆಯ ಕುರಿತು ಮಾಹಿತಿ ನೀಡಿದರು. ತಮ್ಮ ಕಂಪೆನಿಯು ಇಂಗಾಲ ತಟಸ್ಥ ಸ್ಮಾರ್ಟ್ ಉಪನಗರಗಳ ಅಭಿವೃದ್ಧಿಯಲ್ಲಿ ಪರಿಣತಿ ಹೊಂದಿದ್ದು, ಈಗಾಗಲೇ ಪುಣೆ ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದೊಂದಿಗೆ ಒಪ್ಪಂದ ಸಹಿ ಮಾಡಿರುವುದಾಗಿ ತಿಳಿಸಿದರು.

Advertisement

ಇದಕ್ಕೂ ಮುನ್ನ ರಿನ್ಯೂ ಪವರ್ ಪ್ರತಿನಿಧಿಗಳು ರಾಜ್ಯದ ಬರಡು ಭೂಮಿಯಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲು ಆಸಕ್ತಿ ತೋರಿದರು. ಕಂಪೆನಿಯ ಸಿಇಓ ಸಮಂತ್ ಸಿನ್ಹಾ ಅವರು ತಮ್ಮ ಕಂಪೆನಿಯು ರಾಜ್ಯದ ಬೇಡಿಕೆಗಿಂತ ಹೆಚ್ಚುವರಿಯಾಗಿ ಉತ್ಪಾದನೆಯಾದ ವಿದ್ಯುತ್ ಸಂಗ್ರಹಿಸುವ ಬ್ಯಾಟರಿಗಳು ಮತ್ತು ಇತರ ಉಪಕರಣಗಳನ್ನು ಅಳವಡಿಸಲು ಯೋಜಿಸಿರುವುದಾಗಿ ತಿಳಿಸಿದರು. ಆಡಳಿತಾತ್ಮಕ ಮತ್ತು ಕಾನೂನು ತೊಡಕುಗಳನ್ನು ನಿವಾರಿಸಲು ಸರ್ಕಾರ ಕ್ರಮ ವಹಿಸುವಂತೆ ಅವರು ಸಲಹೆ ಮಾಡಿದರು.

ಮುಖ್ಯಮಂತ್ರಿಯವರು ಹಾಗೂ ಸರ್ಕಾರದ ಅಧಿಕಾರಿಗಳನ್ನು ಭೇಟಿ ಮಾಡಿದ ಕಂಪೆನಿಗಳ ಪ್ರತಿನಿಧಿಗಳಲ್ಲಿ ಬಹುತೇಕ ಮಂದಿ ರೈತರಿಂದ ಜಮೀನು ಖರೀದಿಸಲು ಸರ್ಕಾರದ ಕೆಲವು ಅನಪೇಕ್ಷಿತ ನಿಯಮಗಳನ್ನು ತಿದ್ದುಪಡಿ ಅಥವಾ ರದ್ದುಪಡಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ಮುಖ್ಯಮಂತ್ರಿಯವರು ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಹೂಡಿಕೆದಾರರ ನಿಯೋಗಗಳೊಂದಿಗೆ ಚರ್ಚಿಸುವಾಗ ಗ್ರಾಮೀಣ ಆರ್ಥಿಕತೆಯನ್ನು ಸುಧಾರಿಸುವ, ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ವಿಷಯಕ್ಕೆ ಹೆಚ್ಚಿನ ಒತ್ತು ನೀಡಿದರು. ನಮ್ಮ ರೈತರು ಮತ್ತು ಗ್ರಾಮೀಣ ಯುವಕರ ಹಿತ ರಕ್ಷಣೆ ಮಾಡುವ ಹೂಡಿಕೆದಾರರು ಹಾಗೂ ಕೈಗಾರಿಕೆಗಳಿಗೆ ಸರ್ಕಾರ ವಿಶೇಷ ಆದ್ಯತೆ ನೀಡಲಿದೆ ಎಂದು ಅವರು ನುಡಿದರು.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಐಟಿ, ಬಿಟಿ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಸೆಲ್ವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

11 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

14 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

15 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

22 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

24 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago