ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಟಿ.ಡಿ.ಎಸ್‍ ವಿನಾಯಿತಿ : ಕ್ಯಾಂಪ್ಕೊಅಭಿನಂದನೆ

September 23, 2019
5:00 PM

ಮಂಗಳೂರು: ಕೇಂದ್ರ ಸರಕಾರವು ಇತ್ತೀಚೆಗೆ ತಂದಿದ್ದ, ಬ್ಯಾಂಕ್ ಖಾತೆಗಳಿಂದ ಹಿಂಪಡೆಯುವ ರೂ.1 ಕೋಟಿ ಮೇಲ್ಪಟ್ಟ ಹಣದ ಮೇಲಿನ 2% ಮೂಲತೆರಿಗೆ ಕಡಿತ (ಟಿ.ಡಿ.ಎಸ್.) ನಿಯಮವನ್ನು, ನೂತನವಾಗಿ ಹೊರಡಿಸಿರುವ ಸುತ್ತೋಲೆಯ ಅನುಸಾರ ಸೆ.1 ರಿಂದ ಅನ್ವಯವಾಗುವಂತೆ, ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಕೃಷಿಕರ ಹಣಕಾಸು ಸಮಸ್ಯೆಗಳನ್ನು ಮನಗಂಡು ಕೇಂದ್ರ ಸರಕಾರವು ಈ ಆದೇಶವನ್ನು ಹೊರಡಿಸಿದ್ದು, ಎ.ಪಿ.ಎಮ್.ಸಿ. ಸದಸ್ಯತ್ವ ಹೊಂದಿ ಕಾರ್ಯಾಚರಿಸುವ ಎಲ್ಲಾ ವ್ಯಾಪಾರಿಗಳು ಮತ್ತು ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಈ ವಿನಾಯಿತಿ ಅನ್ವಯಿಸುತ್ತದೆ. ಈ ಮೂಲಕ ಸಂಸ್ಥೆಗಳ ಮೇಲಿನ ಟಿ.ಡಿ.ಎಸ್‍ ಭಾರವನ್ನು ಇಳಿಸಿ ಕೃಷಿಕ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರಕಾರದ ಈ ಕ್ರಮಕ್ಕೆ ಕೃಷಿಕ ಸಮುದಾಯದ ಪರವಾಗಿ ಕ್ಯಾಂಪ್ಕೊ ಸಂಸ್ಥೆಯು ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಈ ಹಿಂದೆ, 2% ಮೂಲತೆರಿಗೆ ನಿಯಮವನ್ನುಜಾರಿಗೆ ತಂದಿದ್ದ ಸಂದರ್ಭದಲ್ಲಿ, ಸಂಸ್ಥೆಯ ವತಿಯಿಂದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆರಾಜ್ಯ ಸಚಿವರಾದ ಅನುರಾಗ್‍ ಠಾಕೂರ್‍ ಅವರಿಗೆ, ಈ ನಿಯಮದಿಂದ ಕೃಷಿಕರಿಗೆ ತಲೆದೋರಬಹುದಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು, ನಿಯಮದ ಸಡಿಲಿಕೆಗಾಗಿ ಮನವಿ ಮಾಡಲಾಗಿತ್ತು. ಇದೀಗ, ಮನವಿಯನ್ನು ಪುರಸ್ಕರಿಸಿ ನಿಯಮದಲ್ಲಿ ಸಡಿಲಿಕೆತಂದಿರುವುದು ಕೃಷಿಕ ಸಮುದಾಯದಲ್ಲಿ ಸಂತಸವನ್ನುಂಟುಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror